ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ- ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ- ಶಾಸಕ ಧೀರಜ್‌ ಮುನಿರಾಜ್

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್‌ ಮುನಿರಾಜ್ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕಿನ ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ಚುನಾವಣೆ ನ.2ರಂದು ನಡೆಯಿತು. ಈ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಸೋಲನ್ನು ಅನುಭವಿಸಿತ್ತು. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಪಿಎಲ್ ಡಿ ಬ್ಯಾಂಕ್ ನಂತರ ಒಳ್ಳೆ ಅನುಭವವಾಗಿದೆ. ಪಿಎಲ್ ಡಿ ಬ್ಯಾಂಕ್ ಶೇರ್ ಗಳನ್ನು ಸೂಕ್ತರೀತಿಯಲ್ಲಿ ಕಟ್ಟಿಸಿಕೊಂಡಿರಲಿಲ್ಲ. ನನಗೆ ತಾಲೂಕು ಮಟ್ಟದ ಸಹಕಾರಿ ಕ್ಷೇತ್ರದ ಚುನಾವಣೆ ಹೊಸದು, ಅದು ನನಗೆ ಮೊದಲ ಅನುಭವ. ಈ ಹಿನ್ನೆಲೆ ಒಂದು ಚೂರು ಎಡವಿರಬಹುದು. ಸೋಲಿಗೆ ಸಂಪೂರ್ಣವಾಗಿ ನಂದೇ ಜವಾಬ್ದಾರಿಯಾಗಿರುತ್ತದೆ.‌ ಮುಂದಿನ ದಿನಗಳಲ್ಲಿ ಎಲ್ಲವನ್ನೂ ಸರಿಪಡಿಸಿಕೊಂಡು, ಮುಂಬರುವ ಚುನಾವಣೆಗಳನ್ನು ಗೆದ್ದು ತಕ್ಕ ಪ್ರತ್ಯುತ್ತರ ನೀಡುವ ಪ್ರಯತ್ನ ಮಾಡುತ್ತೇವೆ ಎಂದರು.

ರಾಜಕೀಯ ಎಂದ ಮೇಲೆ ಸೋಲು ಗೆಲುವು ಇದ್ದದ್ದೇ. ಟಿಎಪಿಎಂಸಿಎಸ್ ಚುನಾವಣೆಯಲ್ಲಿ ಹೊಂದಾಣಿಕೆಯಾಗಿದ್ದರಿಂದ ನಮ್ಮ ಪಾರ್ಟಿ ಮತ್ತು ಅವರ ಪಾರ್ಟಿಯಲ್ಲಿ ಅಂತರಗಳಿತ್ತು. ಸ್ವಲ್ಪ ಸಿಂಡಿಕೇಟ್ ಗೆ ಕೆಲಸ ಮಾಡಿದ್ದರೆ ಎಲ್ಲರು ಗೆಲ್ಲುತ್ತಿದ್ದರು. ಮೃತ್ರಿಯಲ್ಲಿ ಸಮನ್ವಯ ಕೊರತೆ ಎದ್ದುಕಾಣುತ್ತಿತ್ತು.‌ ಎಲ್ಲರು ಸಿಂಡಿಕೇಟ್ ಗೆ ಮತ ಹಾಕುತ್ತಾರೆ ಎಂದು ನಂಬಿದ್ದು ನನ್ನ ತಪ್ಪು, ನನ್ನ ಅತಿಯಾದ ಆತ್ಮವಿಶ್ವಾಸವೇ ನನಗೆ ಮುಳುವಾಯಿತು.‌ ಹತ್ತಾರು ಆಸೆ ಆಮಿಷ, ವಿವಿಧ ತಂತ್ರಗರಿಕೆಗಳಲ್ಲಿ ನಾವು ವಿಫಲರಾಗಿದ್ದೇವೆ. ಈ ತಂತ್ರಗಾರಿಕೆಗೆ ಮುಂದಿನ ದಿನಗಳಲ್ಲಿ ತಕ್ಕ ಪ್ರತಿತಂತ್ರ ರೂಪಿಸಿ ಚುನಾವಣೆ ಎದುರಿಸುತ್ತೇವೆ ಎಂದರು.

ಎ ತರಗತಿ ಬಿ ತರಗತಿಗೆ ನಮ್ಮ ಅಭ್ಯರ್ಥಿಗಳನ್ನು ಹಾಕಿದ್ದರೆ ನಾವೇ ಗೆಲ್ಲುತ್ತಿದ್ದೇವು. ಇನ್ನು ಮುಂದೆ ಮೈತ್ರಿ ಮಾಡಿಕೊಂಡರೆ ಯಾವ ರೀತಿ ಎಚ್ಚರದಿಂದ ಇರಬೇಕು ಎಂಬುದನ್ನು ಕಲಿತ್ತಿದ್ದೇನೆ. ನನ್ನ ಶಾಸಕ ಸ್ಥಾನದ ಚುನಾವಣೆ ನಾನು ಮಾಡಿಕೊಂಡಿದ್ದೇನೆ. ಎಂಪಿ ಚುನಾವಣೆ ಮಾಸ್ ಚುನಾವಣೆ ಅದರಲ್ಲಿ ಮೈತ್ರಿ ಮಾಡಿಕೊಂಡು ಅಲ್ಲೂ ಸ್ವಲ್ಪ ಸಮಸ್ಯೆಯಾಯಿತು.‌ ಮೈತ್ರಿಯಿಂದಾಗಿ 5-10 ಸಾವಿರ ವೋಟ್ ಏರುಪೇರಾಯಿತು ಎಂದು ಹೇಳಿದರು.

ಕೆಲವರು ಸರ್ಕಾರಿ ಅಧಿಕಾರಿಗಳು, ಸರ್ಕಾರಿ ಸಂಸ್ಥೆಗಳನ್ನ, ವಿಎಸ್‌ಎಸ್ ಎನ್ ಕಾರ್ಯದರ್ಶಿಗಳನ್ನು ಸರಿಯಾಗಿ ಉಪಯೋಗಿಸಿಕೊಂಡರು. ಇದೆನ್ನೆಲ್ಲಾ ನನಗೆ ಅವರು ಹೇಳಿಕೊಡುತ್ತಿದ್ದಾರೆ. ಅದನ್ನ ಮುಂದಿನ ದಿನಗಳಲ್ಲಿ ಅಳವಡಿಸಿಕೊಂಡು ತಂತ್ರಗಾರಿಕೆ ಎಣಿಯುತ್ತೇನೆ ಎಂದು ತಿಳಿಸಿದರು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

6 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

7 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

22 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago