ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ- ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ- ಶಾಸಕ ಧೀರಜ್‌ ಮುನಿರಾಜ್

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್‌ ಮುನಿರಾಜ್ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕಿನ ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ಚುನಾವಣೆ ನ.2ರಂದು ನಡೆಯಿತು. ಈ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಸೋಲನ್ನು ಅನುಭವಿಸಿತ್ತು. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಪಿಎಲ್ ಡಿ ಬ್ಯಾಂಕ್ ನಂತರ ಒಳ್ಳೆ ಅನುಭವವಾಗಿದೆ. ಪಿಎಲ್ ಡಿ ಬ್ಯಾಂಕ್ ಶೇರ್ ಗಳನ್ನು ಸೂಕ್ತರೀತಿಯಲ್ಲಿ ಕಟ್ಟಿಸಿಕೊಂಡಿರಲಿಲ್ಲ. ನನಗೆ ತಾಲೂಕು ಮಟ್ಟದ ಸಹಕಾರಿ ಕ್ಷೇತ್ರದ ಚುನಾವಣೆ ಹೊಸದು, ಅದು ನನಗೆ ಮೊದಲ ಅನುಭವ. ಈ ಹಿನ್ನೆಲೆ ಒಂದು ಚೂರು ಎಡವಿರಬಹುದು. ಸೋಲಿಗೆ ಸಂಪೂರ್ಣವಾಗಿ ನಂದೇ ಜವಾಬ್ದಾರಿಯಾಗಿರುತ್ತದೆ.‌ ಮುಂದಿನ ದಿನಗಳಲ್ಲಿ ಎಲ್ಲವನ್ನೂ ಸರಿಪಡಿಸಿಕೊಂಡು, ಮುಂಬರುವ ಚುನಾವಣೆಗಳನ್ನು ಗೆದ್ದು ತಕ್ಕ ಪ್ರತ್ಯುತ್ತರ ನೀಡುವ ಪ್ರಯತ್ನ ಮಾಡುತ್ತೇವೆ ಎಂದರು.

ರಾಜಕೀಯ ಎಂದ ಮೇಲೆ ಸೋಲು ಗೆಲುವು ಇದ್ದದ್ದೇ. ಟಿಎಪಿಎಂಸಿಎಸ್ ಚುನಾವಣೆಯಲ್ಲಿ ಹೊಂದಾಣಿಕೆಯಾಗಿದ್ದರಿಂದ ನಮ್ಮ ಪಾರ್ಟಿ ಮತ್ತು ಅವರ ಪಾರ್ಟಿಯಲ್ಲಿ ಅಂತರಗಳಿತ್ತು. ಸ್ವಲ್ಪ ಸಿಂಡಿಕೇಟ್ ಗೆ ಕೆಲಸ ಮಾಡಿದ್ದರೆ ಎಲ್ಲರು ಗೆಲ್ಲುತ್ತಿದ್ದರು. ಮೃತ್ರಿಯಲ್ಲಿ ಸಮನ್ವಯ ಕೊರತೆ ಎದ್ದುಕಾಣುತ್ತಿತ್ತು.‌ ಎಲ್ಲರು ಸಿಂಡಿಕೇಟ್ ಗೆ ಮತ ಹಾಕುತ್ತಾರೆ ಎಂದು ನಂಬಿದ್ದು ನನ್ನ ತಪ್ಪು, ನನ್ನ ಅತಿಯಾದ ಆತ್ಮವಿಶ್ವಾಸವೇ ನನಗೆ ಮುಳುವಾಯಿತು.‌ ಹತ್ತಾರು ಆಸೆ ಆಮಿಷ, ವಿವಿಧ ತಂತ್ರಗರಿಕೆಗಳಲ್ಲಿ ನಾವು ವಿಫಲರಾಗಿದ್ದೇವೆ. ಈ ತಂತ್ರಗಾರಿಕೆಗೆ ಮುಂದಿನ ದಿನಗಳಲ್ಲಿ ತಕ್ಕ ಪ್ರತಿತಂತ್ರ ರೂಪಿಸಿ ಚುನಾವಣೆ ಎದುರಿಸುತ್ತೇವೆ ಎಂದರು.

ಎ ತರಗತಿ ಬಿ ತರಗತಿಗೆ ನಮ್ಮ ಅಭ್ಯರ್ಥಿಗಳನ್ನು ಹಾಕಿದ್ದರೆ ನಾವೇ ಗೆಲ್ಲುತ್ತಿದ್ದೇವು. ಇನ್ನು ಮುಂದೆ ಮೈತ್ರಿ ಮಾಡಿಕೊಂಡರೆ ಯಾವ ರೀತಿ ಎಚ್ಚರದಿಂದ ಇರಬೇಕು ಎಂಬುದನ್ನು ಕಲಿತ್ತಿದ್ದೇನೆ. ನನ್ನ ಶಾಸಕ ಸ್ಥಾನದ ಚುನಾವಣೆ ನಾನು ಮಾಡಿಕೊಂಡಿದ್ದೇನೆ. ಎಂಪಿ ಚುನಾವಣೆ ಮಾಸ್ ಚುನಾವಣೆ ಅದರಲ್ಲಿ ಮೈತ್ರಿ ಮಾಡಿಕೊಂಡು ಅಲ್ಲೂ ಸ್ವಲ್ಪ ಸಮಸ್ಯೆಯಾಯಿತು.‌ ಮೈತ್ರಿಯಿಂದಾಗಿ 5-10 ಸಾವಿರ ವೋಟ್ ಏರುಪೇರಾಯಿತು ಎಂದು ಹೇಳಿದರು.

ಕೆಲವರು ಸರ್ಕಾರಿ ಅಧಿಕಾರಿಗಳು, ಸರ್ಕಾರಿ ಸಂಸ್ಥೆಗಳನ್ನ, ವಿಎಸ್‌ಎಸ್ ಎನ್ ಕಾರ್ಯದರ್ಶಿಗಳನ್ನು ಸರಿಯಾಗಿ ಉಪಯೋಗಿಸಿಕೊಂಡರು. ಇದೆನ್ನೆಲ್ಲಾ ನನಗೆ ಅವರು ಹೇಳಿಕೊಡುತ್ತಿದ್ದಾರೆ. ಅದನ್ನ ಮುಂದಿನ ದಿನಗಳಲ್ಲಿ ಅಳವಡಿಸಿಕೊಂಡು ತಂತ್ರಗಾರಿಕೆ ಎಣಿಯುತ್ತೇನೆ ಎಂದು ತಿಳಿಸಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

5 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

10 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

23 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

1 day ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

1 day ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago