ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ದೊಡ್ಡಬಳ್ಳಾಪುರ ತಾಲೂಕಿನ ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ಚುನಾವಣೆ ನ.2ರಂದು ನಡೆಯಿತು. ಈ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಸೋಲನ್ನು ಅನುಭವಿಸಿತ್ತು. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಪಿಎಲ್ ಡಿ ಬ್ಯಾಂಕ್ ನಂತರ ಒಳ್ಳೆ ಅನುಭವವಾಗಿದೆ. ಪಿಎಲ್ ಡಿ ಬ್ಯಾಂಕ್ ಶೇರ್ ಗಳನ್ನು ಸೂಕ್ತರೀತಿಯಲ್ಲಿ ಕಟ್ಟಿಸಿಕೊಂಡಿರಲಿಲ್ಲ. ನನಗೆ ತಾಲೂಕು ಮಟ್ಟದ ಸಹಕಾರಿ ಕ್ಷೇತ್ರದ ಚುನಾವಣೆ ಹೊಸದು, ಅದು ನನಗೆ ಮೊದಲ ಅನುಭವ. ಈ ಹಿನ್ನೆಲೆ ಒಂದು ಚೂರು ಎಡವಿರಬಹುದು. ಸೋಲಿಗೆ ಸಂಪೂರ್ಣವಾಗಿ ನಂದೇ ಜವಾಬ್ದಾರಿಯಾಗಿರುತ್ತದೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಸರಿಪಡಿಸಿಕೊಂಡು, ಮುಂಬರುವ ಚುನಾವಣೆಗಳನ್ನು ಗೆದ್ದು ತಕ್ಕ ಪ್ರತ್ಯುತ್ತರ ನೀಡುವ ಪ್ರಯತ್ನ ಮಾಡುತ್ತೇವೆ ಎಂದರು.
ರಾಜಕೀಯ ಎಂದ ಮೇಲೆ ಸೋಲು ಗೆಲುವು ಇದ್ದದ್ದೇ. ಟಿಎಪಿಎಂಸಿಎಸ್ ಚುನಾವಣೆಯಲ್ಲಿ ಹೊಂದಾಣಿಕೆಯಾಗಿದ್ದರಿಂದ ನಮ್ಮ ಪಾರ್ಟಿ ಮತ್ತು ಅವರ ಪಾರ್ಟಿಯಲ್ಲಿ ಅಂತರಗಳಿತ್ತು. ಸ್ವಲ್ಪ ಸಿಂಡಿಕೇಟ್ ಗೆ ಕೆಲಸ ಮಾಡಿದ್ದರೆ ಎಲ್ಲರು ಗೆಲ್ಲುತ್ತಿದ್ದರು. ಮೃತ್ರಿಯಲ್ಲಿ ಸಮನ್ವಯ ಕೊರತೆ ಎದ್ದುಕಾಣುತ್ತಿತ್ತು. ಎಲ್ಲರು ಸಿಂಡಿಕೇಟ್ ಗೆ ಮತ ಹಾಕುತ್ತಾರೆ ಎಂದು ನಂಬಿದ್ದು ನನ್ನ ತಪ್ಪು, ನನ್ನ ಅತಿಯಾದ ಆತ್ಮವಿಶ್ವಾಸವೇ ನನಗೆ ಮುಳುವಾಯಿತು. ಹತ್ತಾರು ಆಸೆ ಆಮಿಷ, ವಿವಿಧ ತಂತ್ರಗರಿಕೆಗಳಲ್ಲಿ ನಾವು ವಿಫಲರಾಗಿದ್ದೇವೆ. ಈ ತಂತ್ರಗಾರಿಕೆಗೆ ಮುಂದಿನ ದಿನಗಳಲ್ಲಿ ತಕ್ಕ ಪ್ರತಿತಂತ್ರ ರೂಪಿಸಿ ಚುನಾವಣೆ ಎದುರಿಸುತ್ತೇವೆ ಎಂದರು.
ಎ ತರಗತಿ ಬಿ ತರಗತಿಗೆ ನಮ್ಮ ಅಭ್ಯರ್ಥಿಗಳನ್ನು ಹಾಕಿದ್ದರೆ ನಾವೇ ಗೆಲ್ಲುತ್ತಿದ್ದೇವು. ಇನ್ನು ಮುಂದೆ ಮೈತ್ರಿ ಮಾಡಿಕೊಂಡರೆ ಯಾವ ರೀತಿ ಎಚ್ಚರದಿಂದ ಇರಬೇಕು ಎಂಬುದನ್ನು ಕಲಿತ್ತಿದ್ದೇನೆ. ನನ್ನ ಶಾಸಕ ಸ್ಥಾನದ ಚುನಾವಣೆ ನಾನು ಮಾಡಿಕೊಂಡಿದ್ದೇನೆ. ಎಂಪಿ ಚುನಾವಣೆ ಮಾಸ್ ಚುನಾವಣೆ ಅದರಲ್ಲಿ ಮೈತ್ರಿ ಮಾಡಿಕೊಂಡು ಅಲ್ಲೂ ಸ್ವಲ್ಪ ಸಮಸ್ಯೆಯಾಯಿತು. ಮೈತ್ರಿಯಿಂದಾಗಿ 5-10 ಸಾವಿರ ವೋಟ್ ಏರುಪೇರಾಯಿತು ಎಂದು ಹೇಳಿದರು.
ಕೆಲವರು ಸರ್ಕಾರಿ ಅಧಿಕಾರಿಗಳು, ಸರ್ಕಾರಿ ಸಂಸ್ಥೆಗಳನ್ನ, ವಿಎಸ್ಎಸ್ ಎನ್ ಕಾರ್ಯದರ್ಶಿಗಳನ್ನು ಸರಿಯಾಗಿ ಉಪಯೋಗಿಸಿಕೊಂಡರು. ಇದೆನ್ನೆಲ್ಲಾ ನನಗೆ ಅವರು ಹೇಳಿಕೊಡುತ್ತಿದ್ದಾರೆ. ಅದನ್ನ ಮುಂದಿನ ದಿನಗಳಲ್ಲಿ ಅಳವಡಿಸಿಕೊಂಡು ತಂತ್ರಗಾರಿಕೆ ಎಣಿಯುತ್ತೇನೆ ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…