ಟಿಎಪಿಎಂಸಿಎಸ್ ಫಲಿತಾಂಶ: ಶೇ93.98ರಷ್ಟು ಮತದಾನ : ಅಭ್ಯರ್ಥಿಗಳು ಪಡೆದ ಮತ ಎಷ್ಟು…? ಗೆದ್ದಿದ್ದು ಯಾರು….? ಇಲ್ಲಿದೆ ಮಾಹಿತಿ ಓದಿ….

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಕ್ಕೆ(ಟಿಎಪಿಎಂಸಿಎಸ್) ಭಾನುವಾರ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಸ್ಪಷ್ಟ ಬಹುಮತ ಪಡೆದಿದ್ದಾರೆ. ಬಿಜೆಪಿ–ಜೆಡಿಎಸ್ ಮೈತ್ರಿಗೆ ತೀವ್ರ ಮುಖಂಭಂಗವಾಗಿದೆ.

ಚುನಾವಣೆಯಲ್ಲಿ ಶೇ93.98ರಷ್ಟು ಮತದಾನ ನಡೆದಿದೆ. ‘ಬಿ’ ತರಗತಿಯಿಂದ ಜೆಡಿಎಸ್‌, ಬಿಜೆಪಿ ಮೈತ್ರಿ ಬೆಂಬಲಿತ ಐವರು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಕಾಂಗ್ರೆಸ್‌ ಬೆಂಬಲಿತ ಮೂವರು ಅಭ್ಯರ್ಥಿಗಳು ಮಾತ್ರ ಆಯ್ಕೆಯಾಗಿದ್ದಾರೆ. ‘ಎ’ ತರಗತಿಯ ಫಲಿತಾಂಶ ನ್ಯಾಯಾಲಯ ಆದೇಶದ ನಂತರ ಪ್ರಕಟಿಸುವುದಾಗಿ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಅಭ್ಯರ್ಥಿಗಳು ಪಡೆದಿರುವ ಮತಗಳ ಆಧಾರದಲ್ಲಿ ಕಾಂಗ್ರೆಸ್‌ ಬೆಂಬಲಿತ ನಾಲ್ಕು ಅಭ್ಯರ್ಥಿಗಳು ಹಾಗೂ ಒಬ್ಬರು ಮೈತ್ರಿ ಅಭ್ಯರ್ಥಿ ಆಯ್ಕೆಯಾಗಿದ್ದಾರೆ.

ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾದ ಮತದಾನ ಸಂಜೆ 4 ಗಂಟೆಗೆ ಮುಕ್ತಾಯವಾಗುವವರೆಗೂ ರೈತರು ಉತ್ಸಾಹದಿಂದಲೇ ಮತಚಲಾವಣೆ ಮಾಡಿದರು.

ಸಂಜೆ 4 ಗಂಟೆಯ ನಂತರ ಮತಗಳ ಎಣಿಕೆ ಪ್ರಾರಂಭಿಸಲಾಯಿತು. ಮತದಾರರ ಪಟ್ಟಿಯಲ್ಲಿ ಯಾವುದೇ ಗೊಂದಲ ಉಂಟಾಗದಂತೆ ನಿರ್ವಹಣೆ ಮಾಡುವ ಸಲುವಾಗಿಯೇ 20 ಜನ ಸಿಬ್ಬಂದಿ ಕಾರ್ಯನಿರ್ವಹಿಸಿದ್ದರಿಂದ ಯಾವುದೇ ಗೊಂದಲುಗಳು ಉಂಟಾಗಿಲ್ಲ.

ಮತ ಚಲಾವಣೆಗೆ ಕಾದು ನಿಲ್ಲುವುದನ್ನು ತಪ್ಪಿಸಲು 12 ಕೊಠಡಿಗಳ ಮತಚಾವಣೆಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಪ್ರತಿ ಕೊಠಡಿಯಲ್ಲೂ ಏಕ ಕಾಲಕ್ಕೆ 8 ಜನರು ಪ್ರತ್ಯೇಕವಾಗಿ ಮತಪತ್ರಗಳ ಮೂಲಕ ಗುಪ್ತ ಮತದಾನ ಮಾಡುವ ಸೌಲಭ್ಯ ಕಲ್ಪಿಸಲಾಗಿತ್ತು.

ಮತದಾನ ನಡೆದ ಸರ್ಕಾರಿ ಕಾಲೇಜಿನ ಸುತ್ತ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಪೆಂಡಾಲ್ಗಳನ್ನು ಹಾಕಿಕೊಂಡು ಮತಯಾಚನೆ ಮಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಟಿಎಪಿಎಂಸಿಎಸ್ ಇತಿಹಾಸದಲ್ಲೇ ಇದೇ ಪ್ರಥಮ ಬಾರಿಗೆ ವಿಧಾನ ಸಭಾ ಚುನಾವಣ ಮಾದರಿಯಲ್ಲಿ ಚುನಾಯಿತ ಜನಪ್ರತಿನಿಧಿಗಳು ಸೇರಿದಂತೆ ಎಲ್ಲಾ ಪಕ್ಷಗಳ ಮುಖಂಡರು ಮತಗಟ್ಟೆ ಸಮೀಪವೇ ಇದ್ದು ತಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದರು. ಮಧ್ಯಾಹ್ನ ಎಲ್ಲಾ ರಾಜಕೀಯ ಪಕ್ಷಗಳವರು ಮತದಾರರಿಗೆ ಊಟದ ವ್ಯವಸ್ಥೆ ಮಾಡಿದ್ದರು.

ಎ’ತರಗತಿ ಫಲಿತಾಂಶಕ್ಕೆ ತಡೆ:

ತಾಲ್ಲೂಕಿನ 20 ವಿಎಸ್ಎಸ್ಎನ್ಗಳ ಪ್ರತಿನಿಧಿಗಳಾಗಿ 5 ಜನ ನಿರ್ದೆಶಕ ಸ್ಥಾನಕ್ಕೆ 9 ಜನ ಸ್ಪರ್ಧಿಸಿದ್ದರು.

ಇದಲ್ಲೆ 2 ವಿಎಸ್ಎಸ್ಎನ್ಗಳ ಪ್ರತಿನಿಧಿಗಳು ಹೈಕೋರ್ಟ್ ಮೂಲಕ ಮತಚಲಾಯಿಸುವ ಹಕ್ಕು ಪಡೆದು ಭಾನುವಾರ ಮತಚಾಲಾಯಿಸಿದ್ದರು.

ಸೋಮವಾರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಇದ್ದು,ನ್ಯಾಯಾಲಯದ ತೀರ್ಪಿನ ನಂತರ ಫಲಿತಾಂಶ ಪ್ರಕಟಿಸಲು ನಿರ್ಧರಿಸಲಾಗಿದೆ.

‘ಎ’ತರಗತಿಯಿಂದ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಪಡೆದಿರುವ ಮತಗಳು 

ಅಪ್ಪಣ್ಣಪ್ಪ:7

ಕೆ.ಎಂ.ಅಂಬರೀಶ್;10

ಎಸ್.ಬಿ.ಕೆಂಪೇಗೌಡ;9

ಎಂ.ಗೋವಿಂದರಾಜು ;11+2

ಎನ್.ಜಗನ್ನಾಥ್; 12+2

ಜೆ.ವೈ.ಮಲ್ಲಪ್ಪ; 7

ಎಂ.ವೆಂಕಟೇಶ್; 12+2

ಬಿ.ಎನ್.ಶ್ರೀನಿವಾಸಮೂರ್ತಿ; 9+2

ಡಿ.ಸಿದ್ದರಾಮಯ್ಯ; 13+2

‘ಬಿ’ ತರಗತಿಯಿಂದ ಆಯ್ಕೆಯಾದ ಅಭ್ಯರ್ಥಿಗಳು ಪಡೆದ ಮತ:

ಪುರುಷೋತ್ತಮ;2,602,

ವಿಶ್ವಾಸ್ಹನುಮಂತೇಗೌಡ;2,184

ಎಂ.ಆನಂದ;2338

ಎ.ರಾಮಾಂಜಿನಪ್ಪ;1876

ಲಕ್ಷ್ಮೀನಾಗೇಶ್;2,176

ಚಂದ್ರಕಲಾ ಮಂಜುನಾಥ್; 1872

ವಿ.ಎಸ್.ರಮೇಶ್;2,544

ಜಿ.ಕೆಂಪೇಗೌಡ;2,295

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

9 hours ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

21 hours ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

1 day ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

1 day ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

2 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago