ಟಿಎಪಿಎಂಸಿಎಸ್ ಮತದಾನದಲ್ಲಿ ಏರುಪೇರು: ಮತದಾನ ಏರುಪೇರಿಗೆ ಪ್ರತಿಸ್ಪರ್ಧಿ ಏಜೆಂಟ್ ಗಳೇ ಕಾರಣ: ಮರು ಮತದಾನಕ್ಕೆ ಪರಾಜಿತ ಅಭ್ಯರ್ಥಿ ನರಸಿಂಹ ಮೂರ್ತಿ ಒತ್ತಾಯ

ದೊಡ್ಡಬಳ್ಳಾಪುರ ತಾಲೂಕಿನ ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘ ನ.2ರಂದು ನಡೆಯಿತು. ಈ ಚುನಾವಣೆಯಲ್ಲಿ ಕೆಲವೊಂದು ಬೂತ್ ಗಳಲ್ಲಿ ನಮ್ಮ ಏಜೆಂಟ್ ಗಳು ಇರಲಿಲ್ಲ. ವಯೋವೃದ್ಧರು ಮತದಾನ ಮಾಡುವಾಗ ಗೊಂದಲದಲ್ಲಿದ್ದಾಗ ಬೇರೆ ಏಜೆಂಟರ್ ಗಳು ಬಂದು ಮತದಾನ ಮಾಡಿಸಿದ್ದಾರೆ. ಆಗ ಮತದಾನದಲ್ಲಿ ಏರುಪೇರಾಗಿ ನಾನು ಸೋತಿದ್ದೇನೆ ಎಂದು ಎಚ್ ನರಸಿಂಹ ಮೂರ್ತಿ ಆರೋಪ ಮಾಡಿದ್ದಾರೆ.

ನ.2ರಂದು ನಡೆದ ದೊಡ್ಡಬಳ್ಳಾಪುರ ಟಿಎಪಿಎಂಸಿಎಸ್ ಚುನಾವಣೆಯಲ್ಲಿ‌ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ಅಭ್ಯರ್ಥಿಯಾಗಿ ನೇರಳೇಘಟ್ಟ ನರಸಿಂಹಮೂರ್ತಿ ಸ್ಪರ್ಧಿಸಿದ್ದರು. ಮತ ಎಣಿಕೆಯಲ್ಲಿ ನರಸಿಂಹ‌ಮೂರ್ತಿ ಪ್ರತಿ ಸ್ಪರ್ಧಿ ಆನಂದ್ ಎಂ ಅವರು 2338 ಮತ ಪಡೆದಿದ್ದರು, ನರಸಿಂಹ ಮೂರ್ತಿ ಅವರು 2065 ಮತಗಳನ್ನು ಪಡೆದು ಸೋಲುಕಂಡಿದ್ದರು. ಚುನಾವಣಾ ಫಲಿತಾಂಶ ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಫಲಿತಾಂಶದ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಇದೇ ವೇಳೆ ಚುನಾವಣೆ ಪ್ರಕ್ರಿಯೆಗಳ ಬಗ್ಗೆ ಆರೋಪಿಸಿದ ಅವರು, ಇದು ಸಹಕಾರ ಕ್ಷೇತ್ರದಲ್ಲಿ ನನಗೆ ಮೊದಲ ಚುನಾವಣೆ ಆಗಿದ್ದರಿಂದ ಚುನಾವಣೆ ಪ್ರಕ್ರಿಯೆ ಮೇಲೆ ನಿಗಾವಹಿಸಲು ಸಾಧ್ಯವಾಗಿರಲಿಲ್ಲ. ಅದು ನನ್ನ ಗಮನಕ್ಕೆ ಬಂದಂತೆ 11 ಬೂತ್ ಗಳಲ್ಲಿ‌ ಕೇವಲ 4 ಬೂತ್ ಗಳಲ್ಲಿ ಮಾತ್ರ ನಮ್ಮ ಏಜೆಂಟ್ ಗಳು ಕೆಲಸ ಮಾಡುತ್ತಿದ್ದರು. ಈ ಅವಕಾಶ ಪಡೆದ ಪ್ರತಿ ಸ್ಪರ್ಧಿ ಏಜೆಂಟ್ ಗಳು ವಯಸ್ಸಾದವರಿಗೆ ನೆರವಾಗುವ ನೆಪದಲ್ಲಿ ಮತದಾನವನ್ನು ಏರುಪೇರು ಮಾಡಿದ್ದಾರೆ. 8 ಬ್ಯಾಲೆಟ್ ಗಳು ಇತ್ತು, ಇದು ವಯಸ್ಸಾದವರಿಗೆ ಗೊಂದಲ ಉಂಟುಮಾಡಿತ್ತು. ಕೆಲವರು ಮತದಾನ ಮಾಡದೇ ಖಾಲಿ ಹಾಳೆ ಬಿಟ್ಟಿದ್ದಾರೆ. ಈ ಖಾಲಿ ಪೇಪರ್ ಗಳಲ್ಲಿ ಅಭ್ಯರ್ಥಿಗೆ ಮತ ಹಾಕಿದ್ದಾರೆ. ಇದು ನನ್ನ ಸೋಲಿಗೆ ಕಾರಣವಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

ಇದರ ಜೊತೆಯಲ್ಲಿ 825 ತಿರಸ್ಕೃತ ಮತಗಳು ಕಂಡುಬಂದಿದ್ದು, ಇಷ್ಟೊಂದು ಮತಗಳು ತಿರಸ್ಕೃತಗೊಂಡಿರುವುದು ನನ್ನ ಸಂಶಯಕ್ಕೆ ಕಾರಣವಾಗಿದೆ. ಪ್ರತಿ ಸ್ಪರ್ಧಿಯ ಷಡ್ಯಂತ್ರದಂತೆ ಕೆಲವು ಮತದಾರರು ಯಾವುದೇ ಚಿಹ್ನೆಗೆ ಮತ ಹಾಕದೇ ಖಾಲಿ ಬ್ಯಾಲೆಟ್ ಪೇಪರ್ ಬಿಟ್ಟಿರುತ್ತಾರೆ. ಮತ ತಿರಸ್ಕೃತವಾಗಲು ಖಾಲಿ ಬ್ಯಾಲೆಟ್ ಪೇಪರ್ ಗಳೇ ಕಾರಣ. ಪ್ರತಿ ಸ್ಪರ್ಧಿಗೆ ಇದು ಮೂರನೇ ಚುನಾವಣೆಯಾಗಿದ್ದು, ಈ ಹಿಂದೆ ಮಾಜಿ ಅಧ್ಯಕ್ಷರು ಸಹ ಆಗಿದ್ದರು. ತಮ್ಮ ಪ್ರಭಾವ ಬಳಿಸಿಕೊಂಡು ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಆರೋಪಿಸಿದ್ದಾರೆ….

ಪಾರದರ್ಶಕವಾಗಿ ಚುನಾವಣೆ ನಡೆದೇ ಇರುವುದರಿಂದ ಮರು ಮತದಾನಕ್ಕೆ ಅವಕಾಶ ಮಾಡಿಕೊಡುವಂತೆ‌ ಒತ್ತಾಯಿಸಿದರು….

Ramesh Babu

Journalist

Recent Posts

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

15 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

15 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

16 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

19 hours ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

1 day ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

1 day ago