ಟಿಎಪಿಎಂಸಿಎಸ್ ಮತದಾನದಲ್ಲಿ ಏರುಪೇರು: ಮತದಾನ ಏರುಪೇರಿಗೆ ಪ್ರತಿಸ್ಪರ್ಧಿ ಏಜೆಂಟ್ ಗಳೇ ಕಾರಣ: ಮರು ಮತದಾನಕ್ಕೆ ಪರಾಜಿತ ಅಭ್ಯರ್ಥಿ ನರಸಿಂಹ ಮೂರ್ತಿ ಒತ್ತಾಯ

ದೊಡ್ಡಬಳ್ಳಾಪುರ ತಾಲೂಕಿನ ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘ ನ.2ರಂದು ನಡೆಯಿತು. ಈ ಚುನಾವಣೆಯಲ್ಲಿ ಕೆಲವೊಂದು ಬೂತ್ ಗಳಲ್ಲಿ ನಮ್ಮ ಏಜೆಂಟ್ ಗಳು ಇರಲಿಲ್ಲ. ವಯೋವೃದ್ಧರು ಮತದಾನ ಮಾಡುವಾಗ ಗೊಂದಲದಲ್ಲಿದ್ದಾಗ ಬೇರೆ ಏಜೆಂಟರ್ ಗಳು ಬಂದು ಮತದಾನ ಮಾಡಿಸಿದ್ದಾರೆ. ಆಗ ಮತದಾನದಲ್ಲಿ ಏರುಪೇರಾಗಿ ನಾನು ಸೋತಿದ್ದೇನೆ ಎಂದು ಎಚ್ ನರಸಿಂಹ ಮೂರ್ತಿ ಆರೋಪ ಮಾಡಿದ್ದಾರೆ.

ನ.2ರಂದು ನಡೆದ ದೊಡ್ಡಬಳ್ಳಾಪುರ ಟಿಎಪಿಎಂಸಿಎಸ್ ಚುನಾವಣೆಯಲ್ಲಿ‌ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ಅಭ್ಯರ್ಥಿಯಾಗಿ ನೇರಳೇಘಟ್ಟ ನರಸಿಂಹಮೂರ್ತಿ ಸ್ಪರ್ಧಿಸಿದ್ದರು. ಮತ ಎಣಿಕೆಯಲ್ಲಿ ನರಸಿಂಹ‌ಮೂರ್ತಿ ಪ್ರತಿ ಸ್ಪರ್ಧಿ ಆನಂದ್ ಎಂ ಅವರು 2338 ಮತ ಪಡೆದಿದ್ದರು, ನರಸಿಂಹ ಮೂರ್ತಿ ಅವರು 2065 ಮತಗಳನ್ನು ಪಡೆದು ಸೋಲುಕಂಡಿದ್ದರು. ಚುನಾವಣಾ ಫಲಿತಾಂಶ ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಫಲಿತಾಂಶದ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಇದೇ ವೇಳೆ ಚುನಾವಣೆ ಪ್ರಕ್ರಿಯೆಗಳ ಬಗ್ಗೆ ಆರೋಪಿಸಿದ ಅವರು, ಇದು ಸಹಕಾರ ಕ್ಷೇತ್ರದಲ್ಲಿ ನನಗೆ ಮೊದಲ ಚುನಾವಣೆ ಆಗಿದ್ದರಿಂದ ಚುನಾವಣೆ ಪ್ರಕ್ರಿಯೆ ಮೇಲೆ ನಿಗಾವಹಿಸಲು ಸಾಧ್ಯವಾಗಿರಲಿಲ್ಲ. ಅದು ನನ್ನ ಗಮನಕ್ಕೆ ಬಂದಂತೆ 11 ಬೂತ್ ಗಳಲ್ಲಿ‌ ಕೇವಲ 4 ಬೂತ್ ಗಳಲ್ಲಿ ಮಾತ್ರ ನಮ್ಮ ಏಜೆಂಟ್ ಗಳು ಕೆಲಸ ಮಾಡುತ್ತಿದ್ದರು. ಈ ಅವಕಾಶ ಪಡೆದ ಪ್ರತಿ ಸ್ಪರ್ಧಿ ಏಜೆಂಟ್ ಗಳು ವಯಸ್ಸಾದವರಿಗೆ ನೆರವಾಗುವ ನೆಪದಲ್ಲಿ ಮತದಾನವನ್ನು ಏರುಪೇರು ಮಾಡಿದ್ದಾರೆ. 8 ಬ್ಯಾಲೆಟ್ ಗಳು ಇತ್ತು, ಇದು ವಯಸ್ಸಾದವರಿಗೆ ಗೊಂದಲ ಉಂಟುಮಾಡಿತ್ತು. ಕೆಲವರು ಮತದಾನ ಮಾಡದೇ ಖಾಲಿ ಹಾಳೆ ಬಿಟ್ಟಿದ್ದಾರೆ. ಈ ಖಾಲಿ ಪೇಪರ್ ಗಳಲ್ಲಿ ಅಭ್ಯರ್ಥಿಗೆ ಮತ ಹಾಕಿದ್ದಾರೆ. ಇದು ನನ್ನ ಸೋಲಿಗೆ ಕಾರಣವಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

ಇದರ ಜೊತೆಯಲ್ಲಿ 825 ತಿರಸ್ಕೃತ ಮತಗಳು ಕಂಡುಬಂದಿದ್ದು, ಇಷ್ಟೊಂದು ಮತಗಳು ತಿರಸ್ಕೃತಗೊಂಡಿರುವುದು ನನ್ನ ಸಂಶಯಕ್ಕೆ ಕಾರಣವಾಗಿದೆ. ಪ್ರತಿ ಸ್ಪರ್ಧಿಯ ಷಡ್ಯಂತ್ರದಂತೆ ಕೆಲವು ಮತದಾರರು ಯಾವುದೇ ಚಿಹ್ನೆಗೆ ಮತ ಹಾಕದೇ ಖಾಲಿ ಬ್ಯಾಲೆಟ್ ಪೇಪರ್ ಬಿಟ್ಟಿರುತ್ತಾರೆ. ಮತ ತಿರಸ್ಕೃತವಾಗಲು ಖಾಲಿ ಬ್ಯಾಲೆಟ್ ಪೇಪರ್ ಗಳೇ ಕಾರಣ. ಪ್ರತಿ ಸ್ಪರ್ಧಿಗೆ ಇದು ಮೂರನೇ ಚುನಾವಣೆಯಾಗಿದ್ದು, ಈ ಹಿಂದೆ ಮಾಜಿ ಅಧ್ಯಕ್ಷರು ಸಹ ಆಗಿದ್ದರು. ತಮ್ಮ ಪ್ರಭಾವ ಬಳಿಸಿಕೊಂಡು ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಆರೋಪಿಸಿದ್ದಾರೆ….

ಪಾರದರ್ಶಕವಾಗಿ ಚುನಾವಣೆ ನಡೆದೇ ಇರುವುದರಿಂದ ಮರು ಮತದಾನಕ್ಕೆ ಅವಕಾಶ ಮಾಡಿಕೊಡುವಂತೆ‌ ಒತ್ತಾಯಿಸಿದರು….

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

2 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

2 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

5 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

9 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

14 hours ago