ಟಿಎಪಿಎಂಸಿಎಸ್ ಮತದಾನದಲ್ಲಿ ಏರುಪೇರು: ಮತದಾನ ಏರುಪೇರಿಗೆ ಪ್ರತಿಸ್ಪರ್ಧಿ ಏಜೆಂಟ್ ಗಳೇ ಕಾರಣ: ಮರು ಮತದಾನಕ್ಕೆ ಪರಾಜಿತ ಅಭ್ಯರ್ಥಿ ನರಸಿಂಹ ಮೂರ್ತಿ ಒತ್ತಾಯ

ದೊಡ್ಡಬಳ್ಳಾಪುರ ತಾಲೂಕಿನ ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘ ನ.2ರಂದು ನಡೆಯಿತು. ಈ ಚುನಾವಣೆಯಲ್ಲಿ ಕೆಲವೊಂದು ಬೂತ್ ಗಳಲ್ಲಿ ನಮ್ಮ ಏಜೆಂಟ್ ಗಳು ಇರಲಿಲ್ಲ. ವಯೋವೃದ್ಧರು ಮತದಾನ ಮಾಡುವಾಗ ಗೊಂದಲದಲ್ಲಿದ್ದಾಗ ಬೇರೆ ಏಜೆಂಟರ್ ಗಳು ಬಂದು ಮತದಾನ ಮಾಡಿಸಿದ್ದಾರೆ. ಆಗ ಮತದಾನದಲ್ಲಿ ಏರುಪೇರಾಗಿ ನಾನು ಸೋತಿದ್ದೇನೆ ಎಂದು ಎಚ್ ನರಸಿಂಹ ಮೂರ್ತಿ ಆರೋಪ ಮಾಡಿದ್ದಾರೆ.

ನ.2ರಂದು ನಡೆದ ದೊಡ್ಡಬಳ್ಳಾಪುರ ಟಿಎಪಿಎಂಸಿಎಸ್ ಚುನಾವಣೆಯಲ್ಲಿ‌ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ಅಭ್ಯರ್ಥಿಯಾಗಿ ನೇರಳೇಘಟ್ಟ ನರಸಿಂಹಮೂರ್ತಿ ಸ್ಪರ್ಧಿಸಿದ್ದರು. ಮತ ಎಣಿಕೆಯಲ್ಲಿ ನರಸಿಂಹ‌ಮೂರ್ತಿ ಪ್ರತಿ ಸ್ಪರ್ಧಿ ಆನಂದ್ ಎಂ ಅವರು 2338 ಮತ ಪಡೆದಿದ್ದರು, ನರಸಿಂಹ ಮೂರ್ತಿ ಅವರು 2065 ಮತಗಳನ್ನು ಪಡೆದು ಸೋಲುಕಂಡಿದ್ದರು. ಚುನಾವಣಾ ಫಲಿತಾಂಶ ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಫಲಿತಾಂಶದ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಇದೇ ವೇಳೆ ಚುನಾವಣೆ ಪ್ರಕ್ರಿಯೆಗಳ ಬಗ್ಗೆ ಆರೋಪಿಸಿದ ಅವರು, ಇದು ಸಹಕಾರ ಕ್ಷೇತ್ರದಲ್ಲಿ ನನಗೆ ಮೊದಲ ಚುನಾವಣೆ ಆಗಿದ್ದರಿಂದ ಚುನಾವಣೆ ಪ್ರಕ್ರಿಯೆ ಮೇಲೆ ನಿಗಾವಹಿಸಲು ಸಾಧ್ಯವಾಗಿರಲಿಲ್ಲ. ಅದು ನನ್ನ ಗಮನಕ್ಕೆ ಬಂದಂತೆ 11 ಬೂತ್ ಗಳಲ್ಲಿ‌ ಕೇವಲ 4 ಬೂತ್ ಗಳಲ್ಲಿ ಮಾತ್ರ ನಮ್ಮ ಏಜೆಂಟ್ ಗಳು ಕೆಲಸ ಮಾಡುತ್ತಿದ್ದರು. ಈ ಅವಕಾಶ ಪಡೆದ ಪ್ರತಿ ಸ್ಪರ್ಧಿ ಏಜೆಂಟ್ ಗಳು ವಯಸ್ಸಾದವರಿಗೆ ನೆರವಾಗುವ ನೆಪದಲ್ಲಿ ಮತದಾನವನ್ನು ಏರುಪೇರು ಮಾಡಿದ್ದಾರೆ. 8 ಬ್ಯಾಲೆಟ್ ಗಳು ಇತ್ತು, ಇದು ವಯಸ್ಸಾದವರಿಗೆ ಗೊಂದಲ ಉಂಟುಮಾಡಿತ್ತು. ಕೆಲವರು ಮತದಾನ ಮಾಡದೇ ಖಾಲಿ ಹಾಳೆ ಬಿಟ್ಟಿದ್ದಾರೆ. ಈ ಖಾಲಿ ಪೇಪರ್ ಗಳಲ್ಲಿ ಅಭ್ಯರ್ಥಿಗೆ ಮತ ಹಾಕಿದ್ದಾರೆ. ಇದು ನನ್ನ ಸೋಲಿಗೆ ಕಾರಣವಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

ಇದರ ಜೊತೆಯಲ್ಲಿ 825 ತಿರಸ್ಕೃತ ಮತಗಳು ಕಂಡುಬಂದಿದ್ದು, ಇಷ್ಟೊಂದು ಮತಗಳು ತಿರಸ್ಕೃತಗೊಂಡಿರುವುದು ನನ್ನ ಸಂಶಯಕ್ಕೆ ಕಾರಣವಾಗಿದೆ. ಪ್ರತಿ ಸ್ಪರ್ಧಿಯ ಷಡ್ಯಂತ್ರದಂತೆ ಕೆಲವು ಮತದಾರರು ಯಾವುದೇ ಚಿಹ್ನೆಗೆ ಮತ ಹಾಕದೇ ಖಾಲಿ ಬ್ಯಾಲೆಟ್ ಪೇಪರ್ ಬಿಟ್ಟಿರುತ್ತಾರೆ. ಮತ ತಿರಸ್ಕೃತವಾಗಲು ಖಾಲಿ ಬ್ಯಾಲೆಟ್ ಪೇಪರ್ ಗಳೇ ಕಾರಣ. ಪ್ರತಿ ಸ್ಪರ್ಧಿಗೆ ಇದು ಮೂರನೇ ಚುನಾವಣೆಯಾಗಿದ್ದು, ಈ ಹಿಂದೆ ಮಾಜಿ ಅಧ್ಯಕ್ಷರು ಸಹ ಆಗಿದ್ದರು. ತಮ್ಮ ಪ್ರಭಾವ ಬಳಿಸಿಕೊಂಡು ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಆರೋಪಿಸಿದ್ದಾರೆ….

ಪಾರದರ್ಶಕವಾಗಿ ಚುನಾವಣೆ ನಡೆದೇ ಇರುವುದರಿಂದ ಮರು ಮತದಾನಕ್ಕೆ ಅವಕಾಶ ಮಾಡಿಕೊಡುವಂತೆ‌ ಒತ್ತಾಯಿಸಿದರು….

Ramesh Babu

Journalist

Recent Posts

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

5 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

9 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

11 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

13 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 day ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 day ago