ಟಿಎಪಿಎಂಸಿಎಸ್ ಮತದಾನದಲ್ಲಿ ಏರುಪೇರು: ಮತದಾನ ಏರುಪೇರಿಗೆ ಪ್ರತಿಸ್ಪರ್ಧಿ ಏಜೆಂಟ್ ಗಳೇ ಕಾರಣ: ಮರು ಮತದಾನಕ್ಕೆ ಪರಾಜಿತ ಅಭ್ಯರ್ಥಿ ನರಸಿಂಹ ಮೂರ್ತಿ ಒತ್ತಾಯ

ದೊಡ್ಡಬಳ್ಳಾಪುರ ತಾಲೂಕಿನ ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘ ನ.2ರಂದು ನಡೆಯಿತು. ಈ ಚುನಾವಣೆಯಲ್ಲಿ ಕೆಲವೊಂದು ಬೂತ್ ಗಳಲ್ಲಿ ನಮ್ಮ ಏಜೆಂಟ್ ಗಳು ಇರಲಿಲ್ಲ. ವಯೋವೃದ್ಧರು ಮತದಾನ ಮಾಡುವಾಗ ಗೊಂದಲದಲ್ಲಿದ್ದಾಗ ಬೇರೆ ಏಜೆಂಟರ್ ಗಳು ಬಂದು ಮತದಾನ ಮಾಡಿಸಿದ್ದಾರೆ. ಆಗ ಮತದಾನದಲ್ಲಿ ಏರುಪೇರಾಗಿ ನಾನು ಸೋತಿದ್ದೇನೆ ಎಂದು ಎಚ್ ನರಸಿಂಹ ಮೂರ್ತಿ ಆರೋಪ ಮಾಡಿದ್ದಾರೆ.

ನ.2ರಂದು ನಡೆದ ದೊಡ್ಡಬಳ್ಳಾಪುರ ಟಿಎಪಿಎಂಸಿಎಸ್ ಚುನಾವಣೆಯಲ್ಲಿ‌ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ಅಭ್ಯರ್ಥಿಯಾಗಿ ನೇರಳೇಘಟ್ಟ ನರಸಿಂಹಮೂರ್ತಿ ಸ್ಪರ್ಧಿಸಿದ್ದರು. ಮತ ಎಣಿಕೆಯಲ್ಲಿ ನರಸಿಂಹ‌ಮೂರ್ತಿ ಪ್ರತಿ ಸ್ಪರ್ಧಿ ಆನಂದ್ ಎಂ ಅವರು 2338 ಮತ ಪಡೆದಿದ್ದರು, ನರಸಿಂಹ ಮೂರ್ತಿ ಅವರು 2065 ಮತಗಳನ್ನು ಪಡೆದು ಸೋಲುಕಂಡಿದ್ದರು. ಚುನಾವಣಾ ಫಲಿತಾಂಶ ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಫಲಿತಾಂಶದ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಇದೇ ವೇಳೆ ಚುನಾವಣೆ ಪ್ರಕ್ರಿಯೆಗಳ ಬಗ್ಗೆ ಆರೋಪಿಸಿದ ಅವರು, ಇದು ಸಹಕಾರ ಕ್ಷೇತ್ರದಲ್ಲಿ ನನಗೆ ಮೊದಲ ಚುನಾವಣೆ ಆಗಿದ್ದರಿಂದ ಚುನಾವಣೆ ಪ್ರಕ್ರಿಯೆ ಮೇಲೆ ನಿಗಾವಹಿಸಲು ಸಾಧ್ಯವಾಗಿರಲಿಲ್ಲ. ಅದು ನನ್ನ ಗಮನಕ್ಕೆ ಬಂದಂತೆ 11 ಬೂತ್ ಗಳಲ್ಲಿ‌ ಕೇವಲ 4 ಬೂತ್ ಗಳಲ್ಲಿ ಮಾತ್ರ ನಮ್ಮ ಏಜೆಂಟ್ ಗಳು ಕೆಲಸ ಮಾಡುತ್ತಿದ್ದರು. ಈ ಅವಕಾಶ ಪಡೆದ ಪ್ರತಿ ಸ್ಪರ್ಧಿ ಏಜೆಂಟ್ ಗಳು ವಯಸ್ಸಾದವರಿಗೆ ನೆರವಾಗುವ ನೆಪದಲ್ಲಿ ಮತದಾನವನ್ನು ಏರುಪೇರು ಮಾಡಿದ್ದಾರೆ. 8 ಬ್ಯಾಲೆಟ್ ಗಳು ಇತ್ತು, ಇದು ವಯಸ್ಸಾದವರಿಗೆ ಗೊಂದಲ ಉಂಟುಮಾಡಿತ್ತು. ಕೆಲವರು ಮತದಾನ ಮಾಡದೇ ಖಾಲಿ ಹಾಳೆ ಬಿಟ್ಟಿದ್ದಾರೆ. ಈ ಖಾಲಿ ಪೇಪರ್ ಗಳಲ್ಲಿ ಅಭ್ಯರ್ಥಿಗೆ ಮತ ಹಾಕಿದ್ದಾರೆ. ಇದು ನನ್ನ ಸೋಲಿಗೆ ಕಾರಣವಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

ಇದರ ಜೊತೆಯಲ್ಲಿ 825 ತಿರಸ್ಕೃತ ಮತಗಳು ಕಂಡುಬಂದಿದ್ದು, ಇಷ್ಟೊಂದು ಮತಗಳು ತಿರಸ್ಕೃತಗೊಂಡಿರುವುದು ನನ್ನ ಸಂಶಯಕ್ಕೆ ಕಾರಣವಾಗಿದೆ. ಪ್ರತಿ ಸ್ಪರ್ಧಿಯ ಷಡ್ಯಂತ್ರದಂತೆ ಕೆಲವು ಮತದಾರರು ಯಾವುದೇ ಚಿಹ್ನೆಗೆ ಮತ ಹಾಕದೇ ಖಾಲಿ ಬ್ಯಾಲೆಟ್ ಪೇಪರ್ ಬಿಟ್ಟಿರುತ್ತಾರೆ. ಮತ ತಿರಸ್ಕೃತವಾಗಲು ಖಾಲಿ ಬ್ಯಾಲೆಟ್ ಪೇಪರ್ ಗಳೇ ಕಾರಣ. ಪ್ರತಿ ಸ್ಪರ್ಧಿಗೆ ಇದು ಮೂರನೇ ಚುನಾವಣೆಯಾಗಿದ್ದು, ಈ ಹಿಂದೆ ಮಾಜಿ ಅಧ್ಯಕ್ಷರು ಸಹ ಆಗಿದ್ದರು. ತಮ್ಮ ಪ್ರಭಾವ ಬಳಿಸಿಕೊಂಡು ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಆರೋಪಿಸಿದ್ದಾರೆ….

ಪಾರದರ್ಶಕವಾಗಿ ಚುನಾವಣೆ ನಡೆದೇ ಇರುವುದರಿಂದ ಮರು ಮತದಾನಕ್ಕೆ ಅವಕಾಶ ಮಾಡಿಕೊಡುವಂತೆ‌ ಒತ್ತಾಯಿಸಿದರು….

Ramesh Babu

Journalist

Recent Posts

ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳ ತ್ವರಿತ ವಿಲೇವಾರಿ ಕುರಿತಂತೆ ಕಂದಾಯ ಆಯುಕ್ತರ ಹೊಸ ಆದೇಶ

ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡುವ ಪ್ರಕ್ರಿಯೆಯನ್ನು ಸರಳೀಕರಿಸುವ ಉದ್ದೇಶದಿಂದ ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ…

2 hours ago

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

10 hours ago

ನಾಳೆ (ಏ.23ರಂದು) ವಿವಿಧ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…

10 hours ago

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

22 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

24 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

24 hours ago