Categories: ಕೋಲಾರ

ಟಿಎಪಿಸಿಎಂಎಸ್ ಚುನಾವಣೆಗೆ ಜೆಡಿಎಸ್‌- ಬಿಜೆಪಿ ಮೈತ್ರಿ ಅಭ್ಯರ್ಥಿಗಳಿಂದ ಪ್ರಚಾರ ಪ್ರಾರಂಭ

ಕೋಲಾರ: ತಾಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್)ನ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಗಳು ಮುಖಂಡರ ನೇತೃತ್ವದಲ್ಲಿ ಚುನಾವಣಾ ಪ್ರಚಾರಕ್ಕೆ ಶುಕ್ರವಾರ ನಗರದ ಕೋಲಾರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ತಾಲೂಕಿನಲ್ಲಿ ರೈತರ ಭವಿಷ್ಯವನ್ನು ರೂಪಿಸಲು ಟಿಎಪಿಸಿಎಂಎಸ್ ಚುನಾವಣೆಯು ಜ.7 ರಂದು ಭಾನುವಾರ ನಡೆಯಲಿದ್ದು ತಾಲೂಕಿನ ಸಮಾನ ಮನಸ್ಕರು, ಸೇರಿದಂತೆ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷದ ಮೈತ್ರಿಯ ನೇತೃತ್ವದಲ್ಲಿ ನಡೆಯಲಿದ್ದು 14 ನಿರ್ದೇಶಕ ಸ್ಥಾನಗಳಲ್ಲಿ ಈಗಾಗಲೇ 3 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೊಸೈಟಿಗಳ ಮೂಲಕ 4 ಸ್ಥಾನಗಳಿಗೆ ನೇರವಾದ ಚುನಾವಣೆ ನಡೆಯಲಿದೆ. ಇನ್ನೂ, ಉಳಿದ 7 ನಿರ್ದೇಶಕ ಸ್ಥಾನಗಳಿಗೆ ರೈತರು ಮೂಲಕವೇ ಮತದಾನ ಮಾಡಲಿದ್ದಾರೆ ಎಲ್ಲರನ್ನೂ ಮನವೊಲಿಸುವ ಮೂಲಕ ಒಗ್ಗಟ್ಟಿನಿಂದ ಮತ ಪಡೆಯಬೇಕಾಗಿದೆ ಎಂದು ತಿಳಿಸಿದರು.

ಸಹಕಾರಿ ಸಂಸ್ಥೆಯಲ್ಲಿ ಪಾರದರ್ಶಕತೆಯಿಂದ ಹಣಕಾಸಿನ ವ್ಯವಹಾರಗಳು ಮುಕ್ತವಾಗಿದ್ದಾಗ ಮಾತ್ರವೇ ರೈತರ ಮೊಗದಲ್ಲಿ ನೆಮ್ಮದಿ ಕಾಣಲು ಸಾಧ್ಯವಾಗುತ್ತದೆ. ರೈತರ ಸರ್ವಾಂಗೀಣ ಅಭಿವೃದ್ಧಿಗಾಗಿ ಈ ಚುನಾವಣೆ ನಡೆಯುತ್ತಾ ಇದ್ದು, ಪ್ರತಿಯೊಬ್ಬ ರೈತರನ್ನು ನೇರವಾಗಿ ಭೇಟಿ ಮಾಡಿ ಮತ ಕೇಳಿ ಈ ಚುನಾವಣೆಯನ್ನು ಮೈತ್ರಿ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಎಚ್ಚರಿಕೆಯಿಂದ ಚುನಾವಣೆಯನ್ನು ಎದುರಿಸುವ ಮೂಲಕ ಮೈತ್ರಿ ಅಭ್ಯರ್ಥಿಗಳು ಎಲ್ಲರೂ ಗೆಲ್ಲುವಂತೆ ಮಾಡಬೇಕು ಎಂದು ತಿಳಿಸಿದರು.

ಬಂಗಾರಪೇಟೆ ವಿಧಾನ ಸಭಾ ಕ್ಷೇತ್ರದ ಜೆಡಿಎಸ್‌ ಪರಾಜಿತ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಮಾತನಾಡಿ, ಮೈತ್ರಿಯ ಏಳು ಅಭ್ಯರ್ಥಿಗಳು ಗೆಲುವು ನಮಗೆ ಪ್ರತಿಷ್ಠೆಯಾಗಿದ್ದು, ನಾವು ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸೋಣ ರೈತರ ಅಭಿವೃದ್ಧಿಗಾಗಿ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳ ರೈತ ಜನಪರ ಯೋಜನೆಗಳನ್ನು ಮತದಾರರಿಗೆ ತಿಳಿಸುವ ಮೂಲಕ ಮತ ಕೇಳೋಣ ಎಂದರು.

ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಗಳಾದ ಬಿ.ಸಾಮಾನ್ಯ ಕ್ಷೇತ್ರದಿಂದ ಎನ್ ಮುನಿರಾಜು, ಮುನಿಶಾಮಿರೆಡ್ಡಿ, ವಿ.ಎನ್ ರಘುನಾಥ್, ವಿ.ರಾಮು, ಬಿ ಮಹಿಳಾ ಮೀಸಲಾತಿಯಲ್ಲಿ ಎಚ್.ಎಂ ಶಿಲ್ಪಾ ಮಂಜುನಾಥ್, ವಿ.ಸುನಂದಮ್ಮ, ಪರಿಶಿಷ್ಟ ಜಾತಿಯಿಂದ ಎಲ್.ಆರ್ ರಾಜಣ್ಣ ಸೇರಿದಂತೆ ಏಳು ಅಭ್ಯರ್ಥಿಗಳಿಗೆ ಮತ ನೀಡುವಂತೆ ಪ್ರಚಾರ ಮಾಡಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ತಾಲೂಕು ಅಧ್ಯಕ್ಷ ಬಾಬು ಮೌನಿ, ಮಾಜಿ ಅಧ್ಯಕ್ಷ ಮೂರಂಡಹಳ್ಳಿ ಗೋಪಾಲಪ್ಪ, ಜೆಡಿಎಸ್‌ ಎಸ್ಸಿ ಘಟಕ ಅಧ್ಯಕ್ಷ ಲಕ್ಷ್ಮೀಸಾಗರ ಜಿ ಸುನಿಲ್ ಕುಮಾರ್, ಮುಖಂಡರಾದ ಬ್ಯಾಲಹಳ್ಳಿ ಶಂಕರೇಗೌಡ, ಬಲಿಜ ಸಂಘದ ತೋಟಗಳ ಅಶೋಕ್, ಪಾಲಾಕ್ಷಗೌಡ, ಕೆ.ಆನಂದ್ ಕುಮಾರ್,  ಜನಪನಹಳ್ಳಿ ಆನಂದ್, ದಿಂಬ ನಾಗರಾಜಗೌಡ, ವಿಜಯ್ ಗೌಡ, ಛತ್ರಕೋಡಿಹಳ್ಳಿ ಕುಮಾರ್, ಚಿಕ್ಕಹಸಾಳ ಮಂಜುನಾಥ್, ಬಿಜೆಪಿ ಮುಖಂಡರಾದ ತಂಬಿಹಳ್ಳಿ ಮುನಿಯಪ್ಪ, ಅಪ್ಪಿ ನಾರಾಯಣಸ್ವಾಮಿ, ಕೆಂಬೋಡಿ ನಾರಾಯಣಗೌಡ ಮುಂತಾದವರು ಇದ್ದರು

Ramesh Babu

Journalist

Recent Posts

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

1 hour ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

12 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

13 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

16 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

21 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

24 hours ago