Categories: ಕೋಲಾರ

ಟಿಎಪಿಸಿಎಂಎಸ್ ಚುನಾವಣೆಗೆ ಜೆಡಿಎಸ್‌- ಬಿಜೆಪಿ ಮೈತ್ರಿ ಅಭ್ಯರ್ಥಿಗಳಿಂದ ಪ್ರಚಾರ ಪ್ರಾರಂಭ

ಕೋಲಾರ: ತಾಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್)ನ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಗಳು ಮುಖಂಡರ ನೇತೃತ್ವದಲ್ಲಿ ಚುನಾವಣಾ ಪ್ರಚಾರಕ್ಕೆ ಶುಕ್ರವಾರ ನಗರದ ಕೋಲಾರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ತಾಲೂಕಿನಲ್ಲಿ ರೈತರ ಭವಿಷ್ಯವನ್ನು ರೂಪಿಸಲು ಟಿಎಪಿಸಿಎಂಎಸ್ ಚುನಾವಣೆಯು ಜ.7 ರಂದು ಭಾನುವಾರ ನಡೆಯಲಿದ್ದು ತಾಲೂಕಿನ ಸಮಾನ ಮನಸ್ಕರು, ಸೇರಿದಂತೆ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷದ ಮೈತ್ರಿಯ ನೇತೃತ್ವದಲ್ಲಿ ನಡೆಯಲಿದ್ದು 14 ನಿರ್ದೇಶಕ ಸ್ಥಾನಗಳಲ್ಲಿ ಈಗಾಗಲೇ 3 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೊಸೈಟಿಗಳ ಮೂಲಕ 4 ಸ್ಥಾನಗಳಿಗೆ ನೇರವಾದ ಚುನಾವಣೆ ನಡೆಯಲಿದೆ. ಇನ್ನೂ, ಉಳಿದ 7 ನಿರ್ದೇಶಕ ಸ್ಥಾನಗಳಿಗೆ ರೈತರು ಮೂಲಕವೇ ಮತದಾನ ಮಾಡಲಿದ್ದಾರೆ ಎಲ್ಲರನ್ನೂ ಮನವೊಲಿಸುವ ಮೂಲಕ ಒಗ್ಗಟ್ಟಿನಿಂದ ಮತ ಪಡೆಯಬೇಕಾಗಿದೆ ಎಂದು ತಿಳಿಸಿದರು.

ಸಹಕಾರಿ ಸಂಸ್ಥೆಯಲ್ಲಿ ಪಾರದರ್ಶಕತೆಯಿಂದ ಹಣಕಾಸಿನ ವ್ಯವಹಾರಗಳು ಮುಕ್ತವಾಗಿದ್ದಾಗ ಮಾತ್ರವೇ ರೈತರ ಮೊಗದಲ್ಲಿ ನೆಮ್ಮದಿ ಕಾಣಲು ಸಾಧ್ಯವಾಗುತ್ತದೆ. ರೈತರ ಸರ್ವಾಂಗೀಣ ಅಭಿವೃದ್ಧಿಗಾಗಿ ಈ ಚುನಾವಣೆ ನಡೆಯುತ್ತಾ ಇದ್ದು, ಪ್ರತಿಯೊಬ್ಬ ರೈತರನ್ನು ನೇರವಾಗಿ ಭೇಟಿ ಮಾಡಿ ಮತ ಕೇಳಿ ಈ ಚುನಾವಣೆಯನ್ನು ಮೈತ್ರಿ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಎಚ್ಚರಿಕೆಯಿಂದ ಚುನಾವಣೆಯನ್ನು ಎದುರಿಸುವ ಮೂಲಕ ಮೈತ್ರಿ ಅಭ್ಯರ್ಥಿಗಳು ಎಲ್ಲರೂ ಗೆಲ್ಲುವಂತೆ ಮಾಡಬೇಕು ಎಂದು ತಿಳಿಸಿದರು.

ಬಂಗಾರಪೇಟೆ ವಿಧಾನ ಸಭಾ ಕ್ಷೇತ್ರದ ಜೆಡಿಎಸ್‌ ಪರಾಜಿತ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಮಾತನಾಡಿ, ಮೈತ್ರಿಯ ಏಳು ಅಭ್ಯರ್ಥಿಗಳು ಗೆಲುವು ನಮಗೆ ಪ್ರತಿಷ್ಠೆಯಾಗಿದ್ದು, ನಾವು ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸೋಣ ರೈತರ ಅಭಿವೃದ್ಧಿಗಾಗಿ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳ ರೈತ ಜನಪರ ಯೋಜನೆಗಳನ್ನು ಮತದಾರರಿಗೆ ತಿಳಿಸುವ ಮೂಲಕ ಮತ ಕೇಳೋಣ ಎಂದರು.

ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಗಳಾದ ಬಿ.ಸಾಮಾನ್ಯ ಕ್ಷೇತ್ರದಿಂದ ಎನ್ ಮುನಿರಾಜು, ಮುನಿಶಾಮಿರೆಡ್ಡಿ, ವಿ.ಎನ್ ರಘುನಾಥ್, ವಿ.ರಾಮು, ಬಿ ಮಹಿಳಾ ಮೀಸಲಾತಿಯಲ್ಲಿ ಎಚ್.ಎಂ ಶಿಲ್ಪಾ ಮಂಜುನಾಥ್, ವಿ.ಸುನಂದಮ್ಮ, ಪರಿಶಿಷ್ಟ ಜಾತಿಯಿಂದ ಎಲ್.ಆರ್ ರಾಜಣ್ಣ ಸೇರಿದಂತೆ ಏಳು ಅಭ್ಯರ್ಥಿಗಳಿಗೆ ಮತ ನೀಡುವಂತೆ ಪ್ರಚಾರ ಮಾಡಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ತಾಲೂಕು ಅಧ್ಯಕ್ಷ ಬಾಬು ಮೌನಿ, ಮಾಜಿ ಅಧ್ಯಕ್ಷ ಮೂರಂಡಹಳ್ಳಿ ಗೋಪಾಲಪ್ಪ, ಜೆಡಿಎಸ್‌ ಎಸ್ಸಿ ಘಟಕ ಅಧ್ಯಕ್ಷ ಲಕ್ಷ್ಮೀಸಾಗರ ಜಿ ಸುನಿಲ್ ಕುಮಾರ್, ಮುಖಂಡರಾದ ಬ್ಯಾಲಹಳ್ಳಿ ಶಂಕರೇಗೌಡ, ಬಲಿಜ ಸಂಘದ ತೋಟಗಳ ಅಶೋಕ್, ಪಾಲಾಕ್ಷಗೌಡ, ಕೆ.ಆನಂದ್ ಕುಮಾರ್,  ಜನಪನಹಳ್ಳಿ ಆನಂದ್, ದಿಂಬ ನಾಗರಾಜಗೌಡ, ವಿಜಯ್ ಗೌಡ, ಛತ್ರಕೋಡಿಹಳ್ಳಿ ಕುಮಾರ್, ಚಿಕ್ಕಹಸಾಳ ಮಂಜುನಾಥ್, ಬಿಜೆಪಿ ಮುಖಂಡರಾದ ತಂಬಿಹಳ್ಳಿ ಮುನಿಯಪ್ಪ, ಅಪ್ಪಿ ನಾರಾಯಣಸ್ವಾಮಿ, ಕೆಂಬೋಡಿ ನಾರಾಯಣಗೌಡ ಮುಂತಾದವರು ಇದ್ದರು

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

14 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

14 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

21 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

21 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

1 day ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

2 days ago