Categories: ಕೋಲಾರ

ಟಿಎಪಿಸಿಎಂಎಸ್ ಚುನಾವಣೆಗೆ ಜೆಡಿಎಸ್‌- ಬಿಜೆಪಿ ಮೈತ್ರಿ ಅಭ್ಯರ್ಥಿಗಳಿಂದ ಪ್ರಚಾರ ಪ್ರಾರಂಭ

ಕೋಲಾರ: ತಾಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್)ನ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಗಳು ಮುಖಂಡರ ನೇತೃತ್ವದಲ್ಲಿ ಚುನಾವಣಾ ಪ್ರಚಾರಕ್ಕೆ ಶುಕ್ರವಾರ ನಗರದ ಕೋಲಾರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ತಾಲೂಕಿನಲ್ಲಿ ರೈತರ ಭವಿಷ್ಯವನ್ನು ರೂಪಿಸಲು ಟಿಎಪಿಸಿಎಂಎಸ್ ಚುನಾವಣೆಯು ಜ.7 ರಂದು ಭಾನುವಾರ ನಡೆಯಲಿದ್ದು ತಾಲೂಕಿನ ಸಮಾನ ಮನಸ್ಕರು, ಸೇರಿದಂತೆ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷದ ಮೈತ್ರಿಯ ನೇತೃತ್ವದಲ್ಲಿ ನಡೆಯಲಿದ್ದು 14 ನಿರ್ದೇಶಕ ಸ್ಥಾನಗಳಲ್ಲಿ ಈಗಾಗಲೇ 3 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೊಸೈಟಿಗಳ ಮೂಲಕ 4 ಸ್ಥಾನಗಳಿಗೆ ನೇರವಾದ ಚುನಾವಣೆ ನಡೆಯಲಿದೆ. ಇನ್ನೂ, ಉಳಿದ 7 ನಿರ್ದೇಶಕ ಸ್ಥಾನಗಳಿಗೆ ರೈತರು ಮೂಲಕವೇ ಮತದಾನ ಮಾಡಲಿದ್ದಾರೆ ಎಲ್ಲರನ್ನೂ ಮನವೊಲಿಸುವ ಮೂಲಕ ಒಗ್ಗಟ್ಟಿನಿಂದ ಮತ ಪಡೆಯಬೇಕಾಗಿದೆ ಎಂದು ತಿಳಿಸಿದರು.

ಸಹಕಾರಿ ಸಂಸ್ಥೆಯಲ್ಲಿ ಪಾರದರ್ಶಕತೆಯಿಂದ ಹಣಕಾಸಿನ ವ್ಯವಹಾರಗಳು ಮುಕ್ತವಾಗಿದ್ದಾಗ ಮಾತ್ರವೇ ರೈತರ ಮೊಗದಲ್ಲಿ ನೆಮ್ಮದಿ ಕಾಣಲು ಸಾಧ್ಯವಾಗುತ್ತದೆ. ರೈತರ ಸರ್ವಾಂಗೀಣ ಅಭಿವೃದ್ಧಿಗಾಗಿ ಈ ಚುನಾವಣೆ ನಡೆಯುತ್ತಾ ಇದ್ದು, ಪ್ರತಿಯೊಬ್ಬ ರೈತರನ್ನು ನೇರವಾಗಿ ಭೇಟಿ ಮಾಡಿ ಮತ ಕೇಳಿ ಈ ಚುನಾವಣೆಯನ್ನು ಮೈತ್ರಿ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಎಚ್ಚರಿಕೆಯಿಂದ ಚುನಾವಣೆಯನ್ನು ಎದುರಿಸುವ ಮೂಲಕ ಮೈತ್ರಿ ಅಭ್ಯರ್ಥಿಗಳು ಎಲ್ಲರೂ ಗೆಲ್ಲುವಂತೆ ಮಾಡಬೇಕು ಎಂದು ತಿಳಿಸಿದರು.

ಬಂಗಾರಪೇಟೆ ವಿಧಾನ ಸಭಾ ಕ್ಷೇತ್ರದ ಜೆಡಿಎಸ್‌ ಪರಾಜಿತ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಮಾತನಾಡಿ, ಮೈತ್ರಿಯ ಏಳು ಅಭ್ಯರ್ಥಿಗಳು ಗೆಲುವು ನಮಗೆ ಪ್ರತಿಷ್ಠೆಯಾಗಿದ್ದು, ನಾವು ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸೋಣ ರೈತರ ಅಭಿವೃದ್ಧಿಗಾಗಿ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳ ರೈತ ಜನಪರ ಯೋಜನೆಗಳನ್ನು ಮತದಾರರಿಗೆ ತಿಳಿಸುವ ಮೂಲಕ ಮತ ಕೇಳೋಣ ಎಂದರು.

ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಗಳಾದ ಬಿ.ಸಾಮಾನ್ಯ ಕ್ಷೇತ್ರದಿಂದ ಎನ್ ಮುನಿರಾಜು, ಮುನಿಶಾಮಿರೆಡ್ಡಿ, ವಿ.ಎನ್ ರಘುನಾಥ್, ವಿ.ರಾಮು, ಬಿ ಮಹಿಳಾ ಮೀಸಲಾತಿಯಲ್ಲಿ ಎಚ್.ಎಂ ಶಿಲ್ಪಾ ಮಂಜುನಾಥ್, ವಿ.ಸುನಂದಮ್ಮ, ಪರಿಶಿಷ್ಟ ಜಾತಿಯಿಂದ ಎಲ್.ಆರ್ ರಾಜಣ್ಣ ಸೇರಿದಂತೆ ಏಳು ಅಭ್ಯರ್ಥಿಗಳಿಗೆ ಮತ ನೀಡುವಂತೆ ಪ್ರಚಾರ ಮಾಡಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ತಾಲೂಕು ಅಧ್ಯಕ್ಷ ಬಾಬು ಮೌನಿ, ಮಾಜಿ ಅಧ್ಯಕ್ಷ ಮೂರಂಡಹಳ್ಳಿ ಗೋಪಾಲಪ್ಪ, ಜೆಡಿಎಸ್‌ ಎಸ್ಸಿ ಘಟಕ ಅಧ್ಯಕ್ಷ ಲಕ್ಷ್ಮೀಸಾಗರ ಜಿ ಸುನಿಲ್ ಕುಮಾರ್, ಮುಖಂಡರಾದ ಬ್ಯಾಲಹಳ್ಳಿ ಶಂಕರೇಗೌಡ, ಬಲಿಜ ಸಂಘದ ತೋಟಗಳ ಅಶೋಕ್, ಪಾಲಾಕ್ಷಗೌಡ, ಕೆ.ಆನಂದ್ ಕುಮಾರ್,  ಜನಪನಹಳ್ಳಿ ಆನಂದ್, ದಿಂಬ ನಾಗರಾಜಗೌಡ, ವಿಜಯ್ ಗೌಡ, ಛತ್ರಕೋಡಿಹಳ್ಳಿ ಕುಮಾರ್, ಚಿಕ್ಕಹಸಾಳ ಮಂಜುನಾಥ್, ಬಿಜೆಪಿ ಮುಖಂಡರಾದ ತಂಬಿಹಳ್ಳಿ ಮುನಿಯಪ್ಪ, ಅಪ್ಪಿ ನಾರಾಯಣಸ್ವಾಮಿ, ಕೆಂಬೋಡಿ ನಾರಾಯಣಗೌಡ ಮುಂತಾದವರು ಇದ್ದರು

Ramesh Babu

Journalist

Recent Posts

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

3 hours ago

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

7 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

19 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

22 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

23 hours ago

SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಮೂವರು‌ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…

1 day ago