Categories: ಕೋಲಾರ

ಟಿಎಪಿಸಿಎಂಎಸ್ ಚುನಾವಣೆಗೆ ಜೆಡಿಎಸ್‌- ಬಿಜೆಪಿ ಮೈತ್ರಿ ಅಭ್ಯರ್ಥಿಗಳಿಂದ ಪ್ರಚಾರ ಪ್ರಾರಂಭ

ಕೋಲಾರ: ತಾಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್)ನ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಗಳು ಮುಖಂಡರ ನೇತೃತ್ವದಲ್ಲಿ ಚುನಾವಣಾ ಪ್ರಚಾರಕ್ಕೆ ಶುಕ್ರವಾರ ನಗರದ ಕೋಲಾರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ತಾಲೂಕಿನಲ್ಲಿ ರೈತರ ಭವಿಷ್ಯವನ್ನು ರೂಪಿಸಲು ಟಿಎಪಿಸಿಎಂಎಸ್ ಚುನಾವಣೆಯು ಜ.7 ರಂದು ಭಾನುವಾರ ನಡೆಯಲಿದ್ದು ತಾಲೂಕಿನ ಸಮಾನ ಮನಸ್ಕರು, ಸೇರಿದಂತೆ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷದ ಮೈತ್ರಿಯ ನೇತೃತ್ವದಲ್ಲಿ ನಡೆಯಲಿದ್ದು 14 ನಿರ್ದೇಶಕ ಸ್ಥಾನಗಳಲ್ಲಿ ಈಗಾಗಲೇ 3 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೊಸೈಟಿಗಳ ಮೂಲಕ 4 ಸ್ಥಾನಗಳಿಗೆ ನೇರವಾದ ಚುನಾವಣೆ ನಡೆಯಲಿದೆ. ಇನ್ನೂ, ಉಳಿದ 7 ನಿರ್ದೇಶಕ ಸ್ಥಾನಗಳಿಗೆ ರೈತರು ಮೂಲಕವೇ ಮತದಾನ ಮಾಡಲಿದ್ದಾರೆ ಎಲ್ಲರನ್ನೂ ಮನವೊಲಿಸುವ ಮೂಲಕ ಒಗ್ಗಟ್ಟಿನಿಂದ ಮತ ಪಡೆಯಬೇಕಾಗಿದೆ ಎಂದು ತಿಳಿಸಿದರು.

ಸಹಕಾರಿ ಸಂಸ್ಥೆಯಲ್ಲಿ ಪಾರದರ್ಶಕತೆಯಿಂದ ಹಣಕಾಸಿನ ವ್ಯವಹಾರಗಳು ಮುಕ್ತವಾಗಿದ್ದಾಗ ಮಾತ್ರವೇ ರೈತರ ಮೊಗದಲ್ಲಿ ನೆಮ್ಮದಿ ಕಾಣಲು ಸಾಧ್ಯವಾಗುತ್ತದೆ. ರೈತರ ಸರ್ವಾಂಗೀಣ ಅಭಿವೃದ್ಧಿಗಾಗಿ ಈ ಚುನಾವಣೆ ನಡೆಯುತ್ತಾ ಇದ್ದು, ಪ್ರತಿಯೊಬ್ಬ ರೈತರನ್ನು ನೇರವಾಗಿ ಭೇಟಿ ಮಾಡಿ ಮತ ಕೇಳಿ ಈ ಚುನಾವಣೆಯನ್ನು ಮೈತ್ರಿ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಎಚ್ಚರಿಕೆಯಿಂದ ಚುನಾವಣೆಯನ್ನು ಎದುರಿಸುವ ಮೂಲಕ ಮೈತ್ರಿ ಅಭ್ಯರ್ಥಿಗಳು ಎಲ್ಲರೂ ಗೆಲ್ಲುವಂತೆ ಮಾಡಬೇಕು ಎಂದು ತಿಳಿಸಿದರು.

ಬಂಗಾರಪೇಟೆ ವಿಧಾನ ಸಭಾ ಕ್ಷೇತ್ರದ ಜೆಡಿಎಸ್‌ ಪರಾಜಿತ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಮಾತನಾಡಿ, ಮೈತ್ರಿಯ ಏಳು ಅಭ್ಯರ್ಥಿಗಳು ಗೆಲುವು ನಮಗೆ ಪ್ರತಿಷ್ಠೆಯಾಗಿದ್ದು, ನಾವು ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸೋಣ ರೈತರ ಅಭಿವೃದ್ಧಿಗಾಗಿ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳ ರೈತ ಜನಪರ ಯೋಜನೆಗಳನ್ನು ಮತದಾರರಿಗೆ ತಿಳಿಸುವ ಮೂಲಕ ಮತ ಕೇಳೋಣ ಎಂದರು.

ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಗಳಾದ ಬಿ.ಸಾಮಾನ್ಯ ಕ್ಷೇತ್ರದಿಂದ ಎನ್ ಮುನಿರಾಜು, ಮುನಿಶಾಮಿರೆಡ್ಡಿ, ವಿ.ಎನ್ ರಘುನಾಥ್, ವಿ.ರಾಮು, ಬಿ ಮಹಿಳಾ ಮೀಸಲಾತಿಯಲ್ಲಿ ಎಚ್.ಎಂ ಶಿಲ್ಪಾ ಮಂಜುನಾಥ್, ವಿ.ಸುನಂದಮ್ಮ, ಪರಿಶಿಷ್ಟ ಜಾತಿಯಿಂದ ಎಲ್.ಆರ್ ರಾಜಣ್ಣ ಸೇರಿದಂತೆ ಏಳು ಅಭ್ಯರ್ಥಿಗಳಿಗೆ ಮತ ನೀಡುವಂತೆ ಪ್ರಚಾರ ಮಾಡಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ತಾಲೂಕು ಅಧ್ಯಕ್ಷ ಬಾಬು ಮೌನಿ, ಮಾಜಿ ಅಧ್ಯಕ್ಷ ಮೂರಂಡಹಳ್ಳಿ ಗೋಪಾಲಪ್ಪ, ಜೆಡಿಎಸ್‌ ಎಸ್ಸಿ ಘಟಕ ಅಧ್ಯಕ್ಷ ಲಕ್ಷ್ಮೀಸಾಗರ ಜಿ ಸುನಿಲ್ ಕುಮಾರ್, ಮುಖಂಡರಾದ ಬ್ಯಾಲಹಳ್ಳಿ ಶಂಕರೇಗೌಡ, ಬಲಿಜ ಸಂಘದ ತೋಟಗಳ ಅಶೋಕ್, ಪಾಲಾಕ್ಷಗೌಡ, ಕೆ.ಆನಂದ್ ಕುಮಾರ್,  ಜನಪನಹಳ್ಳಿ ಆನಂದ್, ದಿಂಬ ನಾಗರಾಜಗೌಡ, ವಿಜಯ್ ಗೌಡ, ಛತ್ರಕೋಡಿಹಳ್ಳಿ ಕುಮಾರ್, ಚಿಕ್ಕಹಸಾಳ ಮಂಜುನಾಥ್, ಬಿಜೆಪಿ ಮುಖಂಡರಾದ ತಂಬಿಹಳ್ಳಿ ಮುನಿಯಪ್ಪ, ಅಪ್ಪಿ ನಾರಾಯಣಸ್ವಾಮಿ, ಕೆಂಬೋಡಿ ನಾರಾಯಣಗೌಡ ಮುಂತಾದವರು ಇದ್ದರು

Ramesh Babu

Journalist

Recent Posts

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

2 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

4 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

15 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

20 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

22 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

23 hours ago