Categories: ಕೋಲಾರ

ಟಿಎಪಿಸಿಎಂಎಸ್ ಚುನಾವಣೆಗೆ ಜೆಡಿಎಸ್‌- ಬಿಜೆಪಿ ಮೈತ್ರಿ ಅಭ್ಯರ್ಥಿಗಳಿಂದ ಪ್ರಚಾರ ಪ್ರಾರಂಭ

ಕೋಲಾರ: ತಾಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್)ನ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಗಳು ಮುಖಂಡರ ನೇತೃತ್ವದಲ್ಲಿ ಚುನಾವಣಾ ಪ್ರಚಾರಕ್ಕೆ ಶುಕ್ರವಾರ ನಗರದ ಕೋಲಾರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ತಾಲೂಕಿನಲ್ಲಿ ರೈತರ ಭವಿಷ್ಯವನ್ನು ರೂಪಿಸಲು ಟಿಎಪಿಸಿಎಂಎಸ್ ಚುನಾವಣೆಯು ಜ.7 ರಂದು ಭಾನುವಾರ ನಡೆಯಲಿದ್ದು ತಾಲೂಕಿನ ಸಮಾನ ಮನಸ್ಕರು, ಸೇರಿದಂತೆ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷದ ಮೈತ್ರಿಯ ನೇತೃತ್ವದಲ್ಲಿ ನಡೆಯಲಿದ್ದು 14 ನಿರ್ದೇಶಕ ಸ್ಥಾನಗಳಲ್ಲಿ ಈಗಾಗಲೇ 3 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೊಸೈಟಿಗಳ ಮೂಲಕ 4 ಸ್ಥಾನಗಳಿಗೆ ನೇರವಾದ ಚುನಾವಣೆ ನಡೆಯಲಿದೆ. ಇನ್ನೂ, ಉಳಿದ 7 ನಿರ್ದೇಶಕ ಸ್ಥಾನಗಳಿಗೆ ರೈತರು ಮೂಲಕವೇ ಮತದಾನ ಮಾಡಲಿದ್ದಾರೆ ಎಲ್ಲರನ್ನೂ ಮನವೊಲಿಸುವ ಮೂಲಕ ಒಗ್ಗಟ್ಟಿನಿಂದ ಮತ ಪಡೆಯಬೇಕಾಗಿದೆ ಎಂದು ತಿಳಿಸಿದರು.

ಸಹಕಾರಿ ಸಂಸ್ಥೆಯಲ್ಲಿ ಪಾರದರ್ಶಕತೆಯಿಂದ ಹಣಕಾಸಿನ ವ್ಯವಹಾರಗಳು ಮುಕ್ತವಾಗಿದ್ದಾಗ ಮಾತ್ರವೇ ರೈತರ ಮೊಗದಲ್ಲಿ ನೆಮ್ಮದಿ ಕಾಣಲು ಸಾಧ್ಯವಾಗುತ್ತದೆ. ರೈತರ ಸರ್ವಾಂಗೀಣ ಅಭಿವೃದ್ಧಿಗಾಗಿ ಈ ಚುನಾವಣೆ ನಡೆಯುತ್ತಾ ಇದ್ದು, ಪ್ರತಿಯೊಬ್ಬ ರೈತರನ್ನು ನೇರವಾಗಿ ಭೇಟಿ ಮಾಡಿ ಮತ ಕೇಳಿ ಈ ಚುನಾವಣೆಯನ್ನು ಮೈತ್ರಿ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಎಚ್ಚರಿಕೆಯಿಂದ ಚುನಾವಣೆಯನ್ನು ಎದುರಿಸುವ ಮೂಲಕ ಮೈತ್ರಿ ಅಭ್ಯರ್ಥಿಗಳು ಎಲ್ಲರೂ ಗೆಲ್ಲುವಂತೆ ಮಾಡಬೇಕು ಎಂದು ತಿಳಿಸಿದರು.

ಬಂಗಾರಪೇಟೆ ವಿಧಾನ ಸಭಾ ಕ್ಷೇತ್ರದ ಜೆಡಿಎಸ್‌ ಪರಾಜಿತ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಮಾತನಾಡಿ, ಮೈತ್ರಿಯ ಏಳು ಅಭ್ಯರ್ಥಿಗಳು ಗೆಲುವು ನಮಗೆ ಪ್ರತಿಷ್ಠೆಯಾಗಿದ್ದು, ನಾವು ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸೋಣ ರೈತರ ಅಭಿವೃದ್ಧಿಗಾಗಿ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳ ರೈತ ಜನಪರ ಯೋಜನೆಗಳನ್ನು ಮತದಾರರಿಗೆ ತಿಳಿಸುವ ಮೂಲಕ ಮತ ಕೇಳೋಣ ಎಂದರು.

ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಗಳಾದ ಬಿ.ಸಾಮಾನ್ಯ ಕ್ಷೇತ್ರದಿಂದ ಎನ್ ಮುನಿರಾಜು, ಮುನಿಶಾಮಿರೆಡ್ಡಿ, ವಿ.ಎನ್ ರಘುನಾಥ್, ವಿ.ರಾಮು, ಬಿ ಮಹಿಳಾ ಮೀಸಲಾತಿಯಲ್ಲಿ ಎಚ್.ಎಂ ಶಿಲ್ಪಾ ಮಂಜುನಾಥ್, ವಿ.ಸುನಂದಮ್ಮ, ಪರಿಶಿಷ್ಟ ಜಾತಿಯಿಂದ ಎಲ್.ಆರ್ ರಾಜಣ್ಣ ಸೇರಿದಂತೆ ಏಳು ಅಭ್ಯರ್ಥಿಗಳಿಗೆ ಮತ ನೀಡುವಂತೆ ಪ್ರಚಾರ ಮಾಡಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ತಾಲೂಕು ಅಧ್ಯಕ್ಷ ಬಾಬು ಮೌನಿ, ಮಾಜಿ ಅಧ್ಯಕ್ಷ ಮೂರಂಡಹಳ್ಳಿ ಗೋಪಾಲಪ್ಪ, ಜೆಡಿಎಸ್‌ ಎಸ್ಸಿ ಘಟಕ ಅಧ್ಯಕ್ಷ ಲಕ್ಷ್ಮೀಸಾಗರ ಜಿ ಸುನಿಲ್ ಕುಮಾರ್, ಮುಖಂಡರಾದ ಬ್ಯಾಲಹಳ್ಳಿ ಶಂಕರೇಗೌಡ, ಬಲಿಜ ಸಂಘದ ತೋಟಗಳ ಅಶೋಕ್, ಪಾಲಾಕ್ಷಗೌಡ, ಕೆ.ಆನಂದ್ ಕುಮಾರ್,  ಜನಪನಹಳ್ಳಿ ಆನಂದ್, ದಿಂಬ ನಾಗರಾಜಗೌಡ, ವಿಜಯ್ ಗೌಡ, ಛತ್ರಕೋಡಿಹಳ್ಳಿ ಕುಮಾರ್, ಚಿಕ್ಕಹಸಾಳ ಮಂಜುನಾಥ್, ಬಿಜೆಪಿ ಮುಖಂಡರಾದ ತಂಬಿಹಳ್ಳಿ ಮುನಿಯಪ್ಪ, ಅಪ್ಪಿ ನಾರಾಯಣಸ್ವಾಮಿ, ಕೆಂಬೋಡಿ ನಾರಾಯಣಗೌಡ ಮುಂತಾದವರು ಇದ್ದರು

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

6 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

10 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

10 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

13 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago