Categories: ಕೋಲಾರ

ಟಿಎಪಿಸಿಎಂಎಸ್ ಚುನಾವಣೆಗೆ ಜೆಡಿಎಸ್‌- ಬಿಜೆಪಿ ಮೈತ್ರಿ ಅಭ್ಯರ್ಥಿಗಳಿಂದ ಪ್ರಚಾರ ಪ್ರಾರಂಭ

ಕೋಲಾರ: ತಾಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್)ನ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಗಳು ಮುಖಂಡರ ನೇತೃತ್ವದಲ್ಲಿ ಚುನಾವಣಾ ಪ್ರಚಾರಕ್ಕೆ ಶುಕ್ರವಾರ ನಗರದ ಕೋಲಾರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ತಾಲೂಕಿನಲ್ಲಿ ರೈತರ ಭವಿಷ್ಯವನ್ನು ರೂಪಿಸಲು ಟಿಎಪಿಸಿಎಂಎಸ್ ಚುನಾವಣೆಯು ಜ.7 ರಂದು ಭಾನುವಾರ ನಡೆಯಲಿದ್ದು ತಾಲೂಕಿನ ಸಮಾನ ಮನಸ್ಕರು, ಸೇರಿದಂತೆ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷದ ಮೈತ್ರಿಯ ನೇತೃತ್ವದಲ್ಲಿ ನಡೆಯಲಿದ್ದು 14 ನಿರ್ದೇಶಕ ಸ್ಥಾನಗಳಲ್ಲಿ ಈಗಾಗಲೇ 3 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೊಸೈಟಿಗಳ ಮೂಲಕ 4 ಸ್ಥಾನಗಳಿಗೆ ನೇರವಾದ ಚುನಾವಣೆ ನಡೆಯಲಿದೆ. ಇನ್ನೂ, ಉಳಿದ 7 ನಿರ್ದೇಶಕ ಸ್ಥಾನಗಳಿಗೆ ರೈತರು ಮೂಲಕವೇ ಮತದಾನ ಮಾಡಲಿದ್ದಾರೆ ಎಲ್ಲರನ್ನೂ ಮನವೊಲಿಸುವ ಮೂಲಕ ಒಗ್ಗಟ್ಟಿನಿಂದ ಮತ ಪಡೆಯಬೇಕಾಗಿದೆ ಎಂದು ತಿಳಿಸಿದರು.

ಸಹಕಾರಿ ಸಂಸ್ಥೆಯಲ್ಲಿ ಪಾರದರ್ಶಕತೆಯಿಂದ ಹಣಕಾಸಿನ ವ್ಯವಹಾರಗಳು ಮುಕ್ತವಾಗಿದ್ದಾಗ ಮಾತ್ರವೇ ರೈತರ ಮೊಗದಲ್ಲಿ ನೆಮ್ಮದಿ ಕಾಣಲು ಸಾಧ್ಯವಾಗುತ್ತದೆ. ರೈತರ ಸರ್ವಾಂಗೀಣ ಅಭಿವೃದ್ಧಿಗಾಗಿ ಈ ಚುನಾವಣೆ ನಡೆಯುತ್ತಾ ಇದ್ದು, ಪ್ರತಿಯೊಬ್ಬ ರೈತರನ್ನು ನೇರವಾಗಿ ಭೇಟಿ ಮಾಡಿ ಮತ ಕೇಳಿ ಈ ಚುನಾವಣೆಯನ್ನು ಮೈತ್ರಿ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಎಚ್ಚರಿಕೆಯಿಂದ ಚುನಾವಣೆಯನ್ನು ಎದುರಿಸುವ ಮೂಲಕ ಮೈತ್ರಿ ಅಭ್ಯರ್ಥಿಗಳು ಎಲ್ಲರೂ ಗೆಲ್ಲುವಂತೆ ಮಾಡಬೇಕು ಎಂದು ತಿಳಿಸಿದರು.

ಬಂಗಾರಪೇಟೆ ವಿಧಾನ ಸಭಾ ಕ್ಷೇತ್ರದ ಜೆಡಿಎಸ್‌ ಪರಾಜಿತ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಮಾತನಾಡಿ, ಮೈತ್ರಿಯ ಏಳು ಅಭ್ಯರ್ಥಿಗಳು ಗೆಲುವು ನಮಗೆ ಪ್ರತಿಷ್ಠೆಯಾಗಿದ್ದು, ನಾವು ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸೋಣ ರೈತರ ಅಭಿವೃದ್ಧಿಗಾಗಿ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳ ರೈತ ಜನಪರ ಯೋಜನೆಗಳನ್ನು ಮತದಾರರಿಗೆ ತಿಳಿಸುವ ಮೂಲಕ ಮತ ಕೇಳೋಣ ಎಂದರು.

ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಗಳಾದ ಬಿ.ಸಾಮಾನ್ಯ ಕ್ಷೇತ್ರದಿಂದ ಎನ್ ಮುನಿರಾಜು, ಮುನಿಶಾಮಿರೆಡ್ಡಿ, ವಿ.ಎನ್ ರಘುನಾಥ್, ವಿ.ರಾಮು, ಬಿ ಮಹಿಳಾ ಮೀಸಲಾತಿಯಲ್ಲಿ ಎಚ್.ಎಂ ಶಿಲ್ಪಾ ಮಂಜುನಾಥ್, ವಿ.ಸುನಂದಮ್ಮ, ಪರಿಶಿಷ್ಟ ಜಾತಿಯಿಂದ ಎಲ್.ಆರ್ ರಾಜಣ್ಣ ಸೇರಿದಂತೆ ಏಳು ಅಭ್ಯರ್ಥಿಗಳಿಗೆ ಮತ ನೀಡುವಂತೆ ಪ್ರಚಾರ ಮಾಡಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ತಾಲೂಕು ಅಧ್ಯಕ್ಷ ಬಾಬು ಮೌನಿ, ಮಾಜಿ ಅಧ್ಯಕ್ಷ ಮೂರಂಡಹಳ್ಳಿ ಗೋಪಾಲಪ್ಪ, ಜೆಡಿಎಸ್‌ ಎಸ್ಸಿ ಘಟಕ ಅಧ್ಯಕ್ಷ ಲಕ್ಷ್ಮೀಸಾಗರ ಜಿ ಸುನಿಲ್ ಕುಮಾರ್, ಮುಖಂಡರಾದ ಬ್ಯಾಲಹಳ್ಳಿ ಶಂಕರೇಗೌಡ, ಬಲಿಜ ಸಂಘದ ತೋಟಗಳ ಅಶೋಕ್, ಪಾಲಾಕ್ಷಗೌಡ, ಕೆ.ಆನಂದ್ ಕುಮಾರ್,  ಜನಪನಹಳ್ಳಿ ಆನಂದ್, ದಿಂಬ ನಾಗರಾಜಗೌಡ, ವಿಜಯ್ ಗೌಡ, ಛತ್ರಕೋಡಿಹಳ್ಳಿ ಕುಮಾರ್, ಚಿಕ್ಕಹಸಾಳ ಮಂಜುನಾಥ್, ಬಿಜೆಪಿ ಮುಖಂಡರಾದ ತಂಬಿಹಳ್ಳಿ ಮುನಿಯಪ್ಪ, ಅಪ್ಪಿ ನಾರಾಯಣಸ್ವಾಮಿ, ಕೆಂಬೋಡಿ ನಾರಾಯಣಗೌಡ ಮುಂತಾದವರು ಇದ್ದರು

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

11 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago