ಕೋಲಾರ: ತಾಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್)ನ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಗಳು ಮುಖಂಡರ ನೇತೃತ್ವದಲ್ಲಿ ಚುನಾವಣಾ ಪ್ರಚಾರಕ್ಕೆ ಶುಕ್ರವಾರ ನಗರದ ಕೋಲಾರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ತಾಲೂಕಿನಲ್ಲಿ ರೈತರ ಭವಿಷ್ಯವನ್ನು ರೂಪಿಸಲು ಟಿಎಪಿಸಿಎಂಎಸ್ ಚುನಾವಣೆಯು ಜ.7 ರಂದು ಭಾನುವಾರ ನಡೆಯಲಿದ್ದು ತಾಲೂಕಿನ ಸಮಾನ ಮನಸ್ಕರು, ಸೇರಿದಂತೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಮೈತ್ರಿಯ ನೇತೃತ್ವದಲ್ಲಿ ನಡೆಯಲಿದ್ದು 14 ನಿರ್ದೇಶಕ ಸ್ಥಾನಗಳಲ್ಲಿ ಈಗಾಗಲೇ 3 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೊಸೈಟಿಗಳ ಮೂಲಕ 4 ಸ್ಥಾನಗಳಿಗೆ ನೇರವಾದ ಚುನಾವಣೆ ನಡೆಯಲಿದೆ. ಇನ್ನೂ, ಉಳಿದ 7 ನಿರ್ದೇಶಕ ಸ್ಥಾನಗಳಿಗೆ ರೈತರು ಮೂಲಕವೇ ಮತದಾನ ಮಾಡಲಿದ್ದಾರೆ ಎಲ್ಲರನ್ನೂ ಮನವೊಲಿಸುವ ಮೂಲಕ ಒಗ್ಗಟ್ಟಿನಿಂದ ಮತ ಪಡೆಯಬೇಕಾಗಿದೆ ಎಂದು ತಿಳಿಸಿದರು.
ಸಹಕಾರಿ ಸಂಸ್ಥೆಯಲ್ಲಿ ಪಾರದರ್ಶಕತೆಯಿಂದ ಹಣಕಾಸಿನ ವ್ಯವಹಾರಗಳು ಮುಕ್ತವಾಗಿದ್ದಾಗ ಮಾತ್ರವೇ ರೈತರ ಮೊಗದಲ್ಲಿ ನೆಮ್ಮದಿ ಕಾಣಲು ಸಾಧ್ಯವಾಗುತ್ತದೆ. ರೈತರ ಸರ್ವಾಂಗೀಣ ಅಭಿವೃದ್ಧಿಗಾಗಿ ಈ ಚುನಾವಣೆ ನಡೆಯುತ್ತಾ ಇದ್ದು, ಪ್ರತಿಯೊಬ್ಬ ರೈತರನ್ನು ನೇರವಾಗಿ ಭೇಟಿ ಮಾಡಿ ಮತ ಕೇಳಿ ಈ ಚುನಾವಣೆಯನ್ನು ಮೈತ್ರಿ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಎಚ್ಚರಿಕೆಯಿಂದ ಚುನಾವಣೆಯನ್ನು ಎದುರಿಸುವ ಮೂಲಕ ಮೈತ್ರಿ ಅಭ್ಯರ್ಥಿಗಳು ಎಲ್ಲರೂ ಗೆಲ್ಲುವಂತೆ ಮಾಡಬೇಕು ಎಂದು ತಿಳಿಸಿದರು.
ಬಂಗಾರಪೇಟೆ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಪರಾಜಿತ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಮಾತನಾಡಿ, ಮೈತ್ರಿಯ ಏಳು ಅಭ್ಯರ್ಥಿಗಳು ಗೆಲುವು ನಮಗೆ ಪ್ರತಿಷ್ಠೆಯಾಗಿದ್ದು, ನಾವು ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸೋಣ ರೈತರ ಅಭಿವೃದ್ಧಿಗಾಗಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ರೈತ ಜನಪರ ಯೋಜನೆಗಳನ್ನು ಮತದಾರರಿಗೆ ತಿಳಿಸುವ ಮೂಲಕ ಮತ ಕೇಳೋಣ ಎಂದರು.
ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಗಳಾದ ಬಿ.ಸಾಮಾನ್ಯ ಕ್ಷೇತ್ರದಿಂದ ಎನ್ ಮುನಿರಾಜು, ಮುನಿಶಾಮಿರೆಡ್ಡಿ, ವಿ.ಎನ್ ರಘುನಾಥ್, ವಿ.ರಾಮು, ಬಿ ಮಹಿಳಾ ಮೀಸಲಾತಿಯಲ್ಲಿ ಎಚ್.ಎಂ ಶಿಲ್ಪಾ ಮಂಜುನಾಥ್, ವಿ.ಸುನಂದಮ್ಮ, ಪರಿಶಿಷ್ಟ ಜಾತಿಯಿಂದ ಎಲ್.ಆರ್ ರಾಜಣ್ಣ ಸೇರಿದಂತೆ ಏಳು ಅಭ್ಯರ್ಥಿಗಳಿಗೆ ಮತ ನೀಡುವಂತೆ ಪ್ರಚಾರ ಮಾಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ತಾಲೂಕು ಅಧ್ಯಕ್ಷ ಬಾಬು ಮೌನಿ, ಮಾಜಿ ಅಧ್ಯಕ್ಷ ಮೂರಂಡಹಳ್ಳಿ ಗೋಪಾಲಪ್ಪ, ಜೆಡಿಎಸ್ ಎಸ್ಸಿ ಘಟಕ ಅಧ್ಯಕ್ಷ ಲಕ್ಷ್ಮೀಸಾಗರ ಜಿ ಸುನಿಲ್ ಕುಮಾರ್, ಮುಖಂಡರಾದ ಬ್ಯಾಲಹಳ್ಳಿ ಶಂಕರೇಗೌಡ, ಬಲಿಜ ಸಂಘದ ತೋಟಗಳ ಅಶೋಕ್, ಪಾಲಾಕ್ಷಗೌಡ, ಕೆ.ಆನಂದ್ ಕುಮಾರ್, ಜನಪನಹಳ್ಳಿ ಆನಂದ್, ದಿಂಬ ನಾಗರಾಜಗೌಡ, ವಿಜಯ್ ಗೌಡ, ಛತ್ರಕೋಡಿಹಳ್ಳಿ ಕುಮಾರ್, ಚಿಕ್ಕಹಸಾಳ ಮಂಜುನಾಥ್, ಬಿಜೆಪಿ ಮುಖಂಡರಾದ ತಂಬಿಹಳ್ಳಿ ಮುನಿಯಪ್ಪ, ಅಪ್ಪಿ ನಾರಾಯಣಸ್ವಾಮಿ, ಕೆಂಬೋಡಿ ನಾರಾಯಣಗೌಡ ಮುಂತಾದವರು ಇದ್ದರು
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…