Categories: ಕೋಲಾರ

ಟಿಎಪಿಸಿಎಂಎಸ್ ಚುನಾವಣೆಗೆ ಜೆಡಿಎಸ್‌- ಬಿಜೆಪಿ ಮೈತ್ರಿ ಅಭ್ಯರ್ಥಿಗಳಿಂದ ಪ್ರಚಾರ ಪ್ರಾರಂಭ

ಕೋಲಾರ: ತಾಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್)ನ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಗಳು ಮುಖಂಡರ ನೇತೃತ್ವದಲ್ಲಿ ಚುನಾವಣಾ ಪ್ರಚಾರಕ್ಕೆ ಶುಕ್ರವಾರ ನಗರದ ಕೋಲಾರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ತಾಲೂಕಿನಲ್ಲಿ ರೈತರ ಭವಿಷ್ಯವನ್ನು ರೂಪಿಸಲು ಟಿಎಪಿಸಿಎಂಎಸ್ ಚುನಾವಣೆಯು ಜ.7 ರಂದು ಭಾನುವಾರ ನಡೆಯಲಿದ್ದು ತಾಲೂಕಿನ ಸಮಾನ ಮನಸ್ಕರು, ಸೇರಿದಂತೆ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷದ ಮೈತ್ರಿಯ ನೇತೃತ್ವದಲ್ಲಿ ನಡೆಯಲಿದ್ದು 14 ನಿರ್ದೇಶಕ ಸ್ಥಾನಗಳಲ್ಲಿ ಈಗಾಗಲೇ 3 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೊಸೈಟಿಗಳ ಮೂಲಕ 4 ಸ್ಥಾನಗಳಿಗೆ ನೇರವಾದ ಚುನಾವಣೆ ನಡೆಯಲಿದೆ. ಇನ್ನೂ, ಉಳಿದ 7 ನಿರ್ದೇಶಕ ಸ್ಥಾನಗಳಿಗೆ ರೈತರು ಮೂಲಕವೇ ಮತದಾನ ಮಾಡಲಿದ್ದಾರೆ ಎಲ್ಲರನ್ನೂ ಮನವೊಲಿಸುವ ಮೂಲಕ ಒಗ್ಗಟ್ಟಿನಿಂದ ಮತ ಪಡೆಯಬೇಕಾಗಿದೆ ಎಂದು ತಿಳಿಸಿದರು.

ಸಹಕಾರಿ ಸಂಸ್ಥೆಯಲ್ಲಿ ಪಾರದರ್ಶಕತೆಯಿಂದ ಹಣಕಾಸಿನ ವ್ಯವಹಾರಗಳು ಮುಕ್ತವಾಗಿದ್ದಾಗ ಮಾತ್ರವೇ ರೈತರ ಮೊಗದಲ್ಲಿ ನೆಮ್ಮದಿ ಕಾಣಲು ಸಾಧ್ಯವಾಗುತ್ತದೆ. ರೈತರ ಸರ್ವಾಂಗೀಣ ಅಭಿವೃದ್ಧಿಗಾಗಿ ಈ ಚುನಾವಣೆ ನಡೆಯುತ್ತಾ ಇದ್ದು, ಪ್ರತಿಯೊಬ್ಬ ರೈತರನ್ನು ನೇರವಾಗಿ ಭೇಟಿ ಮಾಡಿ ಮತ ಕೇಳಿ ಈ ಚುನಾವಣೆಯನ್ನು ಮೈತ್ರಿ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಎಚ್ಚರಿಕೆಯಿಂದ ಚುನಾವಣೆಯನ್ನು ಎದುರಿಸುವ ಮೂಲಕ ಮೈತ್ರಿ ಅಭ್ಯರ್ಥಿಗಳು ಎಲ್ಲರೂ ಗೆಲ್ಲುವಂತೆ ಮಾಡಬೇಕು ಎಂದು ತಿಳಿಸಿದರು.

ಬಂಗಾರಪೇಟೆ ವಿಧಾನ ಸಭಾ ಕ್ಷೇತ್ರದ ಜೆಡಿಎಸ್‌ ಪರಾಜಿತ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಮಾತನಾಡಿ, ಮೈತ್ರಿಯ ಏಳು ಅಭ್ಯರ್ಥಿಗಳು ಗೆಲುವು ನಮಗೆ ಪ್ರತಿಷ್ಠೆಯಾಗಿದ್ದು, ನಾವು ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸೋಣ ರೈತರ ಅಭಿವೃದ್ಧಿಗಾಗಿ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳ ರೈತ ಜನಪರ ಯೋಜನೆಗಳನ್ನು ಮತದಾರರಿಗೆ ತಿಳಿಸುವ ಮೂಲಕ ಮತ ಕೇಳೋಣ ಎಂದರು.

ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಗಳಾದ ಬಿ.ಸಾಮಾನ್ಯ ಕ್ಷೇತ್ರದಿಂದ ಎನ್ ಮುನಿರಾಜು, ಮುನಿಶಾಮಿರೆಡ್ಡಿ, ವಿ.ಎನ್ ರಘುನಾಥ್, ವಿ.ರಾಮು, ಬಿ ಮಹಿಳಾ ಮೀಸಲಾತಿಯಲ್ಲಿ ಎಚ್.ಎಂ ಶಿಲ್ಪಾ ಮಂಜುನಾಥ್, ವಿ.ಸುನಂದಮ್ಮ, ಪರಿಶಿಷ್ಟ ಜಾತಿಯಿಂದ ಎಲ್.ಆರ್ ರಾಜಣ್ಣ ಸೇರಿದಂತೆ ಏಳು ಅಭ್ಯರ್ಥಿಗಳಿಗೆ ಮತ ನೀಡುವಂತೆ ಪ್ರಚಾರ ಮಾಡಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ತಾಲೂಕು ಅಧ್ಯಕ್ಷ ಬಾಬು ಮೌನಿ, ಮಾಜಿ ಅಧ್ಯಕ್ಷ ಮೂರಂಡಹಳ್ಳಿ ಗೋಪಾಲಪ್ಪ, ಜೆಡಿಎಸ್‌ ಎಸ್ಸಿ ಘಟಕ ಅಧ್ಯಕ್ಷ ಲಕ್ಷ್ಮೀಸಾಗರ ಜಿ ಸುನಿಲ್ ಕುಮಾರ್, ಮುಖಂಡರಾದ ಬ್ಯಾಲಹಳ್ಳಿ ಶಂಕರೇಗೌಡ, ಬಲಿಜ ಸಂಘದ ತೋಟಗಳ ಅಶೋಕ್, ಪಾಲಾಕ್ಷಗೌಡ, ಕೆ.ಆನಂದ್ ಕುಮಾರ್,  ಜನಪನಹಳ್ಳಿ ಆನಂದ್, ದಿಂಬ ನಾಗರಾಜಗೌಡ, ವಿಜಯ್ ಗೌಡ, ಛತ್ರಕೋಡಿಹಳ್ಳಿ ಕುಮಾರ್, ಚಿಕ್ಕಹಸಾಳ ಮಂಜುನಾಥ್, ಬಿಜೆಪಿ ಮುಖಂಡರಾದ ತಂಬಿಹಳ್ಳಿ ಮುನಿಯಪ್ಪ, ಅಪ್ಪಿ ನಾರಾಯಣಸ್ವಾಮಿ, ಕೆಂಬೋಡಿ ನಾರಾಯಣಗೌಡ ಮುಂತಾದವರು ಇದ್ದರು

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

8 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

11 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

15 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

1 day ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

1 day ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

1 day ago