Categories: ಕೋಲಾರ

ಟಿಎಪಿಸಿಎಂಎಸ್ ಸೊಸೈಟಿಗೆ 16.53 ಲಕ್ಷ ನಿವ್ವಳ ಲಾಭ

ಕೋಲಾರ: ಸಹಕಾರ ಸಂಘದ ಶ್ರೇಯೋಭಿವೃದ್ಧಿಗೆ ಸರ್ವ ಸದಸ್ಯರ ಸಹಕಾರ ಮುಖ್ಯವಾಗಿದ್ದು ಎರಡು ವಾರದಲ್ಲಿ ಸೊಸೈಟಿಯ ವತಿಯಿಂದ ಔಷಧೀ ಕೇಂದ್ರವನ್ನು ಪ್ರಾರಂಭಿಸಿ ರೈತರಿಗೆ ಹಾಗೂ ಷೇರುದಾರರಿಗೆ ಅನುಕೂಲ ಕಲ್ಪಿಸಲು ಆಡಳಿತ ಮಂಡಳಿ ಮುಂದಾಗಿರುವುದಾಗಿ ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ವಿ.ರಾಮು ತಿಳಿಸಿದರು.

ನಗರದ ಟಿಎಪಿಸಿಎಂಎಸ್ ಕಚೇರಿ ಆವರಣದಲ್ಲಿ ಬುಧವಾರ ತಾಲೂಕು ವ್ಯವಸಾಯೋತ್ಪನ್ನಗಳ ಮಾರಾಟ ಸಹಕಾರ ಸಂಘ ಮತ್ತು ಜನತಾ ಬಜಾರ್ ನಿಯಮಿತದ 2023-24ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಹಕಾರಿ ಸಂಘದಲ್ಲಿ ರಾಜಕಾರಣ ಮಾಡದೇ ಪಕ್ಷಾತೀತವಾಗಿ ರೈತರಿಗೆ ರಸಗೊಬ್ಬರಗಳ ವಿತರಣೆಯ ಜೊತೆಗೆ ಸಾರ್ವಜನಿಕರಿಗೆ ಅಕ್ಕಿ ವಿತರಣೆಯ ಮೂಲಕ ಅವಿಭಜಿತ ಕೋಲಾರ ಜಿಲ್ಲೆಗೆ ಮಾದರಿ ಸೊಸೈಟಿಯಾಗಿ ಮಾಡಿದ್ದೇವೆ ಮುಂದೆ ಔಷಧೀ ಕೇಂದ್ರ ಪ್ರಾರಂಭಿಸಿ ಕಡಿಮೆ ಬೆಲೆಗೆ ಔಷಧೀ ದೊರೆಯುವಂತೆ ಮಾಡಲಾಗುತ್ತದೆ ಈ ವರ್ಷವು ಸೊಸೈಟಿ 16.53 ಲಕ್ಷದಷ್ಟು ನಿವ್ವಳ ಲಾಭ ಗಳಿಸಿದೆ ಎಂದು ತಿಳಿಸಿದರು.

ಸೊಸೈಟಿಯ ಕಟ್ಟಡವು ಹಳೆಯದಾಗಿದ್ದು ನೂತನ ಕಟ್ಟಡವನ್ನು ಸುಸಜ್ಜಿತವಾದ ನಿರ್ಮಿಸಿ ರೈತರಿಗೆ ಮತ್ತು ಷೇರುದಾರರಿಗೆ ಅನುಕೂಲ ಕಲ್ಪಿಸುವ ಜತೆಗೆ ಮತ್ತಷ್ಟು ಆಧುನಿಕ ಸ್ಪರ್ಶ ನೀಡಲು ಸಂಘವು ಮುಂದಾಗಿದ್ದು ಇದಕ್ಕೆ ಮೂರು ಎಕರೆ ಜಾಗವನ್ನು ಮಂಜೂರು ಮಾಡುವಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದು ಆದಷ್ಟು ಬೇಗ ಜಾಗವನ್ನು ಪಡೆದು ಹೊಸ ಕಟ್ಟಡ ನಿರ್ಮಾಣ ಮಾಡಲಾಗುತ್ತದೆ ಸಭೆಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ನಾಗನಾಳ ಸೋಮಣ್ಣ ಮಾತನಾಡಿ ರೈತರಿಗೆ ರಸಗೊಬ್ಬರ ವಿತರಣೆ ಮಾಡುವಲ್ಲಿ ಎರಡು ಜಿಲ್ಲೆಯಲ್ಲಿಯೇ ಮೊದಲ ಸ್ಥಾನದಲ್ಲಿದ್ದು ಮಾದರಿ ಸಂಘವಾಗಿದೆ ಹೋಬಳಿ ಸೊಸೈಟಿಗಳಲ್ಲಿ 500 ರೂ ಇದ್ದ ಷೇರು ಹಣ 1000 ರೂ ಮಾಡಲಾಗಿದೆ ಅದೇ ರೀತಿ ತಾಲೂಕು ಸೊಸೈಟಿಯಲ್ಲಿ 2000 ರೂ ಷೇರು ಕಟ್ಟುವ ಮೂಲಕ ಸಂಘಕ್ಕೆ ಬರುವ ಲಾಭವನ್ನು ರೈತರ ಅಭಿವೃದ್ಧಿಗೆ ಕೊಡಲಾಗುತ್ತದೆ ಎಂದು
ಹೇಳಿದರು.

ಈ ಸಂದರ್ಭದಲ್ಲಿ ಸೊಸೈಟಿ ಉಪಾಧ್ಯಕ್ಷ ಎಲ್.ಆರ್ ರಾಜಣ್ಣ, ಎ.ಸಿ ಭಾಸ್ಕರ್, ಶ್ರೀನಿವಾಸ್, ವಿ.ಎಸ್ ರಘುನಾಥ್, ಟಿ.ವಿ ಮುನಿಯಪ್ಪ, ಎನ್.ಮುನಿರಾಜು, ಶಿಲ್ಪ ಮಂಜುನಾಥ್, ಸುನಂದಾ ನಾಗರಾಜ್, ಕೆ.ವಿ ಸುರೇಶ್, ಸೇರಿದಂತೆ ಸೊಸೈಟಿ ಷೇರುದಾರರು, ರೈತರು, ಸಿಬ್ಬಂದಿ ಇದ್ದರು,

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

8 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

8 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

9 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

10 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

12 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

19 hours ago