Categories: ಕೋಲಾರ

ಟಿಎಪಿಸಿಎಂಎಸ್ ಸೊಸೈಟಿಗೆ 16.53 ಲಕ್ಷ ನಿವ್ವಳ ಲಾಭ

ಕೋಲಾರ: ಸಹಕಾರ ಸಂಘದ ಶ್ರೇಯೋಭಿವೃದ್ಧಿಗೆ ಸರ್ವ ಸದಸ್ಯರ ಸಹಕಾರ ಮುಖ್ಯವಾಗಿದ್ದು ಎರಡು ವಾರದಲ್ಲಿ ಸೊಸೈಟಿಯ ವತಿಯಿಂದ ಔಷಧೀ ಕೇಂದ್ರವನ್ನು ಪ್ರಾರಂಭಿಸಿ ರೈತರಿಗೆ ಹಾಗೂ ಷೇರುದಾರರಿಗೆ ಅನುಕೂಲ ಕಲ್ಪಿಸಲು ಆಡಳಿತ ಮಂಡಳಿ ಮುಂದಾಗಿರುವುದಾಗಿ ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ವಿ.ರಾಮು ತಿಳಿಸಿದರು.

ನಗರದ ಟಿಎಪಿಸಿಎಂಎಸ್ ಕಚೇರಿ ಆವರಣದಲ್ಲಿ ಬುಧವಾರ ತಾಲೂಕು ವ್ಯವಸಾಯೋತ್ಪನ್ನಗಳ ಮಾರಾಟ ಸಹಕಾರ ಸಂಘ ಮತ್ತು ಜನತಾ ಬಜಾರ್ ನಿಯಮಿತದ 2023-24ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಹಕಾರಿ ಸಂಘದಲ್ಲಿ ರಾಜಕಾರಣ ಮಾಡದೇ ಪಕ್ಷಾತೀತವಾಗಿ ರೈತರಿಗೆ ರಸಗೊಬ್ಬರಗಳ ವಿತರಣೆಯ ಜೊತೆಗೆ ಸಾರ್ವಜನಿಕರಿಗೆ ಅಕ್ಕಿ ವಿತರಣೆಯ ಮೂಲಕ ಅವಿಭಜಿತ ಕೋಲಾರ ಜಿಲ್ಲೆಗೆ ಮಾದರಿ ಸೊಸೈಟಿಯಾಗಿ ಮಾಡಿದ್ದೇವೆ ಮುಂದೆ ಔಷಧೀ ಕೇಂದ್ರ ಪ್ರಾರಂಭಿಸಿ ಕಡಿಮೆ ಬೆಲೆಗೆ ಔಷಧೀ ದೊರೆಯುವಂತೆ ಮಾಡಲಾಗುತ್ತದೆ ಈ ವರ್ಷವು ಸೊಸೈಟಿ 16.53 ಲಕ್ಷದಷ್ಟು ನಿವ್ವಳ ಲಾಭ ಗಳಿಸಿದೆ ಎಂದು ತಿಳಿಸಿದರು.

ಸೊಸೈಟಿಯ ಕಟ್ಟಡವು ಹಳೆಯದಾಗಿದ್ದು ನೂತನ ಕಟ್ಟಡವನ್ನು ಸುಸಜ್ಜಿತವಾದ ನಿರ್ಮಿಸಿ ರೈತರಿಗೆ ಮತ್ತು ಷೇರುದಾರರಿಗೆ ಅನುಕೂಲ ಕಲ್ಪಿಸುವ ಜತೆಗೆ ಮತ್ತಷ್ಟು ಆಧುನಿಕ ಸ್ಪರ್ಶ ನೀಡಲು ಸಂಘವು ಮುಂದಾಗಿದ್ದು ಇದಕ್ಕೆ ಮೂರು ಎಕರೆ ಜಾಗವನ್ನು ಮಂಜೂರು ಮಾಡುವಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದು ಆದಷ್ಟು ಬೇಗ ಜಾಗವನ್ನು ಪಡೆದು ಹೊಸ ಕಟ್ಟಡ ನಿರ್ಮಾಣ ಮಾಡಲಾಗುತ್ತದೆ ಸಭೆಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ನಾಗನಾಳ ಸೋಮಣ್ಣ ಮಾತನಾಡಿ ರೈತರಿಗೆ ರಸಗೊಬ್ಬರ ವಿತರಣೆ ಮಾಡುವಲ್ಲಿ ಎರಡು ಜಿಲ್ಲೆಯಲ್ಲಿಯೇ ಮೊದಲ ಸ್ಥಾನದಲ್ಲಿದ್ದು ಮಾದರಿ ಸಂಘವಾಗಿದೆ ಹೋಬಳಿ ಸೊಸೈಟಿಗಳಲ್ಲಿ 500 ರೂ ಇದ್ದ ಷೇರು ಹಣ 1000 ರೂ ಮಾಡಲಾಗಿದೆ ಅದೇ ರೀತಿ ತಾಲೂಕು ಸೊಸೈಟಿಯಲ್ಲಿ 2000 ರೂ ಷೇರು ಕಟ್ಟುವ ಮೂಲಕ ಸಂಘಕ್ಕೆ ಬರುವ ಲಾಭವನ್ನು ರೈತರ ಅಭಿವೃದ್ಧಿಗೆ ಕೊಡಲಾಗುತ್ತದೆ ಎಂದು
ಹೇಳಿದರು.

ಈ ಸಂದರ್ಭದಲ್ಲಿ ಸೊಸೈಟಿ ಉಪಾಧ್ಯಕ್ಷ ಎಲ್.ಆರ್ ರಾಜಣ್ಣ, ಎ.ಸಿ ಭಾಸ್ಕರ್, ಶ್ರೀನಿವಾಸ್, ವಿ.ಎಸ್ ರಘುನಾಥ್, ಟಿ.ವಿ ಮುನಿಯಪ್ಪ, ಎನ್.ಮುನಿರಾಜು, ಶಿಲ್ಪ ಮಂಜುನಾಥ್, ಸುನಂದಾ ನಾಗರಾಜ್, ಕೆ.ವಿ ಸುರೇಶ್, ಸೇರಿದಂತೆ ಸೊಸೈಟಿ ಷೇರುದಾರರು, ರೈತರು, ಸಿಬ್ಬಂದಿ ಇದ್ದರು,

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

8 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

9 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

11 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

12 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

17 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

20 hours ago