ಟಿಕೆಟ್ ಇಲ್ಲದೇ ಪ್ರಯಾಣಿಸಿದ 2,832 ಪ್ರಯಾಣಿಕರಿಗೆ ದಂಡ: ಒಟ್ಟು 4,46ಲಕ್ಷ ದಂಡ ವಸೂಲಿ

ಜುಲೈ ತಿಂಗಳಲ್ಲಿ ಟಿಕೆಟ್ ಇಲ್ಲದೇ ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ‌ 2,832 ಮಂದಿ ಪ್ರಯಾಣಿಕರು ಪ್ರಯಾಣಿಸಿದ್ದು, ಒಟ್ಟು 4.46.853ಲಕ್ಷ ದಂಡ ವಸೂಲಿ ಮಾಡಿದ ಸಾರಿಗೆ ಇಲಾಖೆ.

ಜುಲೈ ತಿಂಗಳಲ್ಲಿ ಕರ್ನಾಟಕ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43,698 ವಾಹನಗಳನ್ನು ತನಿಖೆಗೆ ಒಳಪಡಿಸಿ 2748 ಪ್ರಕರಣಗಳನ್ನು ಪತ್ತೆಹಚ್ಚಿ, 2832 ಟಿಕೆಟ್ ರಹಿತ ಪ್ರಯಾಣಿಕರಿಂದ 4,46,853 ರೂ.ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ.

ನಿಗಮದ ಆದಾಯದಲ್ಲಿ ಸೋರಿಕೆಯಾಗುತ್ತಿದ್ದ 63,914 ರೂ.ಗಳನ್ನು ಪತ್ತೆಹಚ್ಚಲಾಗಿದೆ.

ಸಾರ್ವಜನಿಕರು ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಸುವಾಗ ಕಡ್ಡಾಯವಾಗಿ ಟಿಕೆಟ್ ಅಥವಾ ಬಸ್ ಪಾಸ್ ಪಡೆದು ಪ್ರಯಾಣಿಸಬೇಕು ಎಂದು ಪ್ರಯಾಣಿಕರಲ್ಲಿ ವಿನಂತಿ ಮಾಡಿರೋ ಸಾರಿಗೆ ಇಲಾಖೆ.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

58 minutes ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

17 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago