ಟಿಕ್… ಟಿಕ್…ಟಿಕ್ ಹ್ಯಾಪಿ ನ್ಯೂ ಇಯರ್ ಸೆಲೆಬ್ರೇಷನ್ ಗೆ ಕ್ಷಣಗಣನೆ: ಕೇಕ್‌ ಭರಾಟೆ ಜೋರು

ದೊಡ್ಡಬಳ್ಳಾಪುರದ ಜನತೆ ಹೊಸ ವರ್ಷವನ್ನು ಸಂಭ್ರಮದಿಂದಲೇ ಆಚರಿಸಲು ಫುಲ್ ಸಜ್ಜಾಗಿದ್ದಾರೆ. ಯುವಕರು, ಮಕ್ಕಳು, ಮಹಿಳೆಯರು ತಮ್ಮ ವಯೋಮಾನದ ಗುಂಪಿನೊಂದಿಗೆ ಹೊಸ ವರ್ಷವನ್ನು ಸ್ವಾಗತಿಸಿಕೊಂಡು, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ಅದೇರೀತಿ ಅಲ್ಲಲ್ಲಿ ಸಣ್ಣ ಪುಟ್ಟ ಪಾರ್ಟಿಗಳನ್ನು ಮಾಡಲು ಯುವ ಜನತೆ ಮುಂದಾಗಿದ್ದಾರೆ.

ಕೇಕ್‌ ಭರಾಟೆ ಜೋರು:

ಹೊಸ ವರ್ಷಾಚರಣೆ ಹಿನ್ನೆಲೆ ನಗರದ ಎಲ್ಲಾ ಬೇಕರಿಗಳಲ್ಲಿ ಕೇಕ್‌ ಮಾರಾಟ ಭರಾಟೆ ಜೋರಾಗಿದೆ. ಕುಟುಂಬ ಸದಸ್ಯರು, ಸ್ನೇಹಿತರು ಯೋಜನೆ ರೂಪಿಸಿದಂತೆ ಬೇಕರಿಗಳಿಗೆ ಮೊದಲೇ ವಿವಿಧ ಬಗೆಯ ಕೇಕ್‌ಗಳ ಸಿದ್ಧಪಡಿಸಲು ಬೇಡಿಕೆ ಸಲ್ಲಿಸಿದ್ದರು. ಅಂತೆಯೇ ಇಂದು  ಮಧ್ಯಾಹ್ನದಿಂದಲೇ ಕೇಕ್‌ ಖರೀದಿಗೆ ಜನ ಮುಗಿಬಿದ್ದಿದ್ದರು.

ಬೇಕರಿಗಳು ಹೊಸ ವರ್ಷಾಚರಣೆಗೆ ಸಿಂಗಾರಗೊಂಡಿದ್ದವು. ಬಣ್ಣ ಬಣ್ಣದ ಬಲೂನು, ವಿದ್ಯುತ್‌ ದೀಪಗಳಿಂದ ಅಲಂಕಾರಗೊಂಡು ಗ್ರಾಹಕರನ್ನು ಕೈಬಿಸಿ ಕರೆಯುತ್ತಿವೆ.

ಎಗ್‌ಲೆಸ್‌ ಕೇಕ್‌, ಪೈನಾಪಲ್‌, ಸ್ಟ್ರಾಬೆರಿ ಪೇಸ್ಟ್ರೀ, ಕಪ್‌ ಕೇಕ್‌ಗಳಿಗೂ ಈ ಬಾರಿ ಬೇಡಿಕೆ ಇದ್ದು, ಕೆಲವರು ಬ್ಲ್ಯಾಕ್‌ ಫಾರೆಸ್ಟ್‌, ಐರಿಶ್‌ ಕಾಫಿಯಂತಹ ದುಬಾರಿ ಕೇಕ್‌ ಖರೀದಿಗೂ ಮುಂದಾಗಿದ್ದರು.

ಪ್ರತಿ ಕೆಜಿಗೆ ಕೇಕ್‌ಗೆ 250 ರಿಂದ 500 ದರವಿದ್ದು, ಕೇಕ್‌ ಮಾತ್ರವಲ್ಲದೆ, ಹೊಸ ವರ್ಷ ಶುಭಾಶಯ ಕೋರುವ ಸ್ಟಿಕರ್‌, ಗ್ರಿಟಿಂಗ್ಸ್‌ಗಳ ಖರೀದಿಯಲ್ಲಿ ಜನ ಮಗ್ನರಾಗಿದ್ದರು.

ಪ್ರತಿ ವರ್ಷದಂತೆ ಈ ಬಾರಿಯೂ ಹೊಸ ವರ್ಷಾಚರಣೆ ವೇಳೆ ಕೇಕ್‌ ವ್ಯಾಪಾರ ಭರ್ಜರಿಯಾಗಿದೆ ಎನ್ನುತ್ತಾರೆ ಬೇಕರಿ ಮಾಲೀಕರು.

Ramesh Babu

Journalist

Recent Posts

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

7 seconds ago

ನಾಳೆ (ಏ.9ಕ್ಕೆ) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…

4 hours ago

ಕರ್ನಾಟಕ ವಿರೋಧಿ ‘ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಬಿಟ್ಟು ತೊಲಗಲಿ’- ಕರ್ನಾಟಕ ರಕ್ಷಣಾ ವೇದಿಕೆ‌ ಜಿಲ್ಲಾಧ್ಯಕ್ಷ ಪುರುಷೋತ್ತಮಗೌಡ ಆಗ್ರಹ

ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…

5 hours ago

ಮಾನಸಿಕ ಗುಣಮಟ್ಟ ಪರೀಕ್ಷಿಸಿಕೊಳ್ಳುವ ಆತ್ಮಾವಲೋಕನ ನಡೆಯಲಿ…

ಭಾವ ಬಯಲಿನ‌ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…

10 hours ago

DRI ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ: ಕ್ಯಾಪ್ಸೂಲ್ ರೂಪದಲ್ಲಿ ಚಿನ್ನ ಸಾಗಾಟ: 5 ಕೋಟಿ ಮೌಲ್ಯದ ಚಿನ್ನದ ಬಿಸ್ಕೆಟ್ ವಶ

DRI (Directorate of Revenue Intelligence) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, 5 ಜನ ಆರೋಪಿಗಳ ಬಂಧನ ಮಾಡಿ ಬಂಧಿತರಿಂದ…

13 hours ago

ಭ್ರಷ್ಟ ಅಧಿಕಾರಿ ಮನೆಯಲ್ಲಿ ಲೋಕಾ ತಲಾಶ್: ಆದಾಯ ಮೀರಿದ ಶೇ 120ರಷ್ಟು ಆಸ್ತಿ ಪತ್ತೆ

ಬಳ್ಳಾರಿಯಲ್ಲಿ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಶಿವಣ್ಣ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕಾರಣಕ್ಕೆ ಸಂಬಂಧಿಸಿದಂತೆ ಬಗೆದೊಷ್ಟು ಬಯಲಾಗುತ್ತಿದೆ ಭ್ರಷ್ಟ…

13 hours ago