ಟಿಕ್… ಟಿಕ್…ಟಿಕ್ ಹ್ಯಾಪಿ ನ್ಯೂ ಇಯರ್ ಸೆಲೆಬ್ರೇಷನ್ ಗೆ ಕ್ಷಣಗಣನೆ: ಕೇಕ್‌ ಭರಾಟೆ ಜೋರು

ದೊಡ್ಡಬಳ್ಳಾಪುರದ ಜನತೆ ಹೊಸ ವರ್ಷವನ್ನು ಸಂಭ್ರಮದಿಂದಲೇ ಆಚರಿಸಲು ಫುಲ್ ಸಜ್ಜಾಗಿದ್ದಾರೆ. ಯುವಕರು, ಮಕ್ಕಳು, ಮಹಿಳೆಯರು ತಮ್ಮ ವಯೋಮಾನದ ಗುಂಪಿನೊಂದಿಗೆ ಹೊಸ ವರ್ಷವನ್ನು ಸ್ವಾಗತಿಸಿಕೊಂಡು, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ಅದೇರೀತಿ ಅಲ್ಲಲ್ಲಿ ಸಣ್ಣ ಪುಟ್ಟ ಪಾರ್ಟಿಗಳನ್ನು ಮಾಡಲು ಯುವ ಜನತೆ ಮುಂದಾಗಿದ್ದಾರೆ.

ಕೇಕ್‌ ಭರಾಟೆ ಜೋರು:

ಹೊಸ ವರ್ಷಾಚರಣೆ ಹಿನ್ನೆಲೆ ನಗರದ ಎಲ್ಲಾ ಬೇಕರಿಗಳಲ್ಲಿ ಕೇಕ್‌ ಮಾರಾಟ ಭರಾಟೆ ಜೋರಾಗಿದೆ. ಕುಟುಂಬ ಸದಸ್ಯರು, ಸ್ನೇಹಿತರು ಯೋಜನೆ ರೂಪಿಸಿದಂತೆ ಬೇಕರಿಗಳಿಗೆ ಮೊದಲೇ ವಿವಿಧ ಬಗೆಯ ಕೇಕ್‌ಗಳ ಸಿದ್ಧಪಡಿಸಲು ಬೇಡಿಕೆ ಸಲ್ಲಿಸಿದ್ದರು. ಅಂತೆಯೇ ಇಂದು  ಮಧ್ಯಾಹ್ನದಿಂದಲೇ ಕೇಕ್‌ ಖರೀದಿಗೆ ಜನ ಮುಗಿಬಿದ್ದಿದ್ದರು.

ಬೇಕರಿಗಳು ಹೊಸ ವರ್ಷಾಚರಣೆಗೆ ಸಿಂಗಾರಗೊಂಡಿದ್ದವು. ಬಣ್ಣ ಬಣ್ಣದ ಬಲೂನು, ವಿದ್ಯುತ್‌ ದೀಪಗಳಿಂದ ಅಲಂಕಾರಗೊಂಡು ಗ್ರಾಹಕರನ್ನು ಕೈಬಿಸಿ ಕರೆಯುತ್ತಿವೆ.

ಎಗ್‌ಲೆಸ್‌ ಕೇಕ್‌, ಪೈನಾಪಲ್‌, ಸ್ಟ್ರಾಬೆರಿ ಪೇಸ್ಟ್ರೀ, ಕಪ್‌ ಕೇಕ್‌ಗಳಿಗೂ ಈ ಬಾರಿ ಬೇಡಿಕೆ ಇದ್ದು, ಕೆಲವರು ಬ್ಲ್ಯಾಕ್‌ ಫಾರೆಸ್ಟ್‌, ಐರಿಶ್‌ ಕಾಫಿಯಂತಹ ದುಬಾರಿ ಕೇಕ್‌ ಖರೀದಿಗೂ ಮುಂದಾಗಿದ್ದರು.

ಪ್ರತಿ ಕೆಜಿಗೆ ಕೇಕ್‌ಗೆ 250 ರಿಂದ 500 ದರವಿದ್ದು, ಕೇಕ್‌ ಮಾತ್ರವಲ್ಲದೆ, ಹೊಸ ವರ್ಷ ಶುಭಾಶಯ ಕೋರುವ ಸ್ಟಿಕರ್‌, ಗ್ರಿಟಿಂಗ್ಸ್‌ಗಳ ಖರೀದಿಯಲ್ಲಿ ಜನ ಮಗ್ನರಾಗಿದ್ದರು.

ಪ್ರತಿ ವರ್ಷದಂತೆ ಈ ಬಾರಿಯೂ ಹೊಸ ವರ್ಷಾಚರಣೆ ವೇಳೆ ಕೇಕ್‌ ವ್ಯಾಪಾರ ಭರ್ಜರಿಯಾಗಿದೆ ಎನ್ನುತ್ತಾರೆ ಬೇಕರಿ ಮಾಲೀಕರು.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

12 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

13 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

13 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

13 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

16 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

19 hours ago