ಟಿಕ್… ಟಿಕ್…ಟಿಕ್ ಹ್ಯಾಪಿ ನ್ಯೂ ಇಯರ್ ಸೆಲೆಬ್ರೇಷನ್ ಗೆ ಕ್ಷಣಗಣನೆ: ಕೇಕ್‌ ಭರಾಟೆ ಜೋರು

ದೊಡ್ಡಬಳ್ಳಾಪುರದ ಜನತೆ ಹೊಸ ವರ್ಷವನ್ನು ಸಂಭ್ರಮದಿಂದಲೇ ಆಚರಿಸಲು ಫುಲ್ ಸಜ್ಜಾಗಿದ್ದಾರೆ. ಯುವಕರು, ಮಕ್ಕಳು, ಮಹಿಳೆಯರು ತಮ್ಮ ವಯೋಮಾನದ ಗುಂಪಿನೊಂದಿಗೆ ಹೊಸ ವರ್ಷವನ್ನು ಸ್ವಾಗತಿಸಿಕೊಂಡು, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ಅದೇರೀತಿ ಅಲ್ಲಲ್ಲಿ ಸಣ್ಣ ಪುಟ್ಟ ಪಾರ್ಟಿಗಳನ್ನು ಮಾಡಲು ಯುವ ಜನತೆ ಮುಂದಾಗಿದ್ದಾರೆ.

ಕೇಕ್‌ ಭರಾಟೆ ಜೋರು:

ಹೊಸ ವರ್ಷಾಚರಣೆ ಹಿನ್ನೆಲೆ ನಗರದ ಎಲ್ಲಾ ಬೇಕರಿಗಳಲ್ಲಿ ಕೇಕ್‌ ಮಾರಾಟ ಭರಾಟೆ ಜೋರಾಗಿದೆ. ಕುಟುಂಬ ಸದಸ್ಯರು, ಸ್ನೇಹಿತರು ಯೋಜನೆ ರೂಪಿಸಿದಂತೆ ಬೇಕರಿಗಳಿಗೆ ಮೊದಲೇ ವಿವಿಧ ಬಗೆಯ ಕೇಕ್‌ಗಳ ಸಿದ್ಧಪಡಿಸಲು ಬೇಡಿಕೆ ಸಲ್ಲಿಸಿದ್ದರು. ಅಂತೆಯೇ ಇಂದು  ಮಧ್ಯಾಹ್ನದಿಂದಲೇ ಕೇಕ್‌ ಖರೀದಿಗೆ ಜನ ಮುಗಿಬಿದ್ದಿದ್ದರು.

ಬೇಕರಿಗಳು ಹೊಸ ವರ್ಷಾಚರಣೆಗೆ ಸಿಂಗಾರಗೊಂಡಿದ್ದವು. ಬಣ್ಣ ಬಣ್ಣದ ಬಲೂನು, ವಿದ್ಯುತ್‌ ದೀಪಗಳಿಂದ ಅಲಂಕಾರಗೊಂಡು ಗ್ರಾಹಕರನ್ನು ಕೈಬಿಸಿ ಕರೆಯುತ್ತಿವೆ.

ಎಗ್‌ಲೆಸ್‌ ಕೇಕ್‌, ಪೈನಾಪಲ್‌, ಸ್ಟ್ರಾಬೆರಿ ಪೇಸ್ಟ್ರೀ, ಕಪ್‌ ಕೇಕ್‌ಗಳಿಗೂ ಈ ಬಾರಿ ಬೇಡಿಕೆ ಇದ್ದು, ಕೆಲವರು ಬ್ಲ್ಯಾಕ್‌ ಫಾರೆಸ್ಟ್‌, ಐರಿಶ್‌ ಕಾಫಿಯಂತಹ ದುಬಾರಿ ಕೇಕ್‌ ಖರೀದಿಗೂ ಮುಂದಾಗಿದ್ದರು.

ಪ್ರತಿ ಕೆಜಿಗೆ ಕೇಕ್‌ಗೆ 250 ರಿಂದ 500 ದರವಿದ್ದು, ಕೇಕ್‌ ಮಾತ್ರವಲ್ಲದೆ, ಹೊಸ ವರ್ಷ ಶುಭಾಶಯ ಕೋರುವ ಸ್ಟಿಕರ್‌, ಗ್ರಿಟಿಂಗ್ಸ್‌ಗಳ ಖರೀದಿಯಲ್ಲಿ ಜನ ಮಗ್ನರಾಗಿದ್ದರು.

ಪ್ರತಿ ವರ್ಷದಂತೆ ಈ ಬಾರಿಯೂ ಹೊಸ ವರ್ಷಾಚರಣೆ ವೇಳೆ ಕೇಕ್‌ ವ್ಯಾಪಾರ ಭರ್ಜರಿಯಾಗಿದೆ ಎನ್ನುತ್ತಾರೆ ಬೇಕರಿ ಮಾಲೀಕರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

13 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

3 days ago