ಟಿಕ್… ಟಿಕ್…ಟಿಕ್ ಹ್ಯಾಪಿ ನ್ಯೂ ಇಯರ್ ಸೆಲೆಬ್ರೇಷನ್ ಗೆ ಕ್ಷಣಗಣನೆ: ಕೇಕ್‌ ಭರಾಟೆ ಜೋರು

ದೊಡ್ಡಬಳ್ಳಾಪುರದ ಜನತೆ ಹೊಸ ವರ್ಷವನ್ನು ಸಂಭ್ರಮದಿಂದಲೇ ಆಚರಿಸಲು ಫುಲ್ ಸಜ್ಜಾಗಿದ್ದಾರೆ. ಯುವಕರು, ಮಕ್ಕಳು, ಮಹಿಳೆಯರು ತಮ್ಮ ವಯೋಮಾನದ ಗುಂಪಿನೊಂದಿಗೆ ಹೊಸ ವರ್ಷವನ್ನು ಸ್ವಾಗತಿಸಿಕೊಂಡು, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ಅದೇರೀತಿ ಅಲ್ಲಲ್ಲಿ ಸಣ್ಣ ಪುಟ್ಟ ಪಾರ್ಟಿಗಳನ್ನು ಮಾಡಲು ಯುವ ಜನತೆ ಮುಂದಾಗಿದ್ದಾರೆ.

ಕೇಕ್‌ ಭರಾಟೆ ಜೋರು:

ಹೊಸ ವರ್ಷಾಚರಣೆ ಹಿನ್ನೆಲೆ ನಗರದ ಎಲ್ಲಾ ಬೇಕರಿಗಳಲ್ಲಿ ಕೇಕ್‌ ಮಾರಾಟ ಭರಾಟೆ ಜೋರಾಗಿದೆ. ಕುಟುಂಬ ಸದಸ್ಯರು, ಸ್ನೇಹಿತರು ಯೋಜನೆ ರೂಪಿಸಿದಂತೆ ಬೇಕರಿಗಳಿಗೆ ಮೊದಲೇ ವಿವಿಧ ಬಗೆಯ ಕೇಕ್‌ಗಳ ಸಿದ್ಧಪಡಿಸಲು ಬೇಡಿಕೆ ಸಲ್ಲಿಸಿದ್ದರು. ಅಂತೆಯೇ ಇಂದು  ಮಧ್ಯಾಹ್ನದಿಂದಲೇ ಕೇಕ್‌ ಖರೀದಿಗೆ ಜನ ಮುಗಿಬಿದ್ದಿದ್ದರು.

ಬೇಕರಿಗಳು ಹೊಸ ವರ್ಷಾಚರಣೆಗೆ ಸಿಂಗಾರಗೊಂಡಿದ್ದವು. ಬಣ್ಣ ಬಣ್ಣದ ಬಲೂನು, ವಿದ್ಯುತ್‌ ದೀಪಗಳಿಂದ ಅಲಂಕಾರಗೊಂಡು ಗ್ರಾಹಕರನ್ನು ಕೈಬಿಸಿ ಕರೆಯುತ್ತಿವೆ.

ಎಗ್‌ಲೆಸ್‌ ಕೇಕ್‌, ಪೈನಾಪಲ್‌, ಸ್ಟ್ರಾಬೆರಿ ಪೇಸ್ಟ್ರೀ, ಕಪ್‌ ಕೇಕ್‌ಗಳಿಗೂ ಈ ಬಾರಿ ಬೇಡಿಕೆ ಇದ್ದು, ಕೆಲವರು ಬ್ಲ್ಯಾಕ್‌ ಫಾರೆಸ್ಟ್‌, ಐರಿಶ್‌ ಕಾಫಿಯಂತಹ ದುಬಾರಿ ಕೇಕ್‌ ಖರೀದಿಗೂ ಮುಂದಾಗಿದ್ದರು.

ಪ್ರತಿ ಕೆಜಿಗೆ ಕೇಕ್‌ಗೆ 250 ರಿಂದ 500 ದರವಿದ್ದು, ಕೇಕ್‌ ಮಾತ್ರವಲ್ಲದೆ, ಹೊಸ ವರ್ಷ ಶುಭಾಶಯ ಕೋರುವ ಸ್ಟಿಕರ್‌, ಗ್ರಿಟಿಂಗ್ಸ್‌ಗಳ ಖರೀದಿಯಲ್ಲಿ ಜನ ಮಗ್ನರಾಗಿದ್ದರು.

ಪ್ರತಿ ವರ್ಷದಂತೆ ಈ ಬಾರಿಯೂ ಹೊಸ ವರ್ಷಾಚರಣೆ ವೇಳೆ ಕೇಕ್‌ ವ್ಯಾಪಾರ ಭರ್ಜರಿಯಾಗಿದೆ ಎನ್ನುತ್ತಾರೆ ಬೇಕರಿ ಮಾಲೀಕರು.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

4 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

6 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

9 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

23 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago