ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ನಿನ್ನೆ ರಾತ್ರಿ ಸುಮಾರು 10 ಗಂಟೆಯಲ್ಲಿ ನಡೆದಿದೆ.

ಅಜ್ಜವಾರ ಗ್ರಾಮದ ಅಣ್ಣ ತಮ್ಮಂದಿರಾದ ನರಸಿಂಹಮೂರ್ತಿ ಹಾಗೂ ನಂದೀಶ್ ಸೇರಿದಂತೆ ಅರುಣ್, ಮನೋಜ್ ಮೃತಪಟ್ಟಿದ್ದಾರೆ.

ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ನಾಲ್ವರು ಚಿಕ್ಕಬಳ್ಳಾಪುರ ನಗರದ ಚರ್ಚ್‌ಗಳಿಗೆ ನರಸಿಂಹಮೂರ್ತಿಗೆ ಸೇರಿದ ಸಿಟಿ 100 ಬೈಕಿನಲ್ಲಿ ಭೇಟಿ ನೀಡಿ ಮರಳಿ ಸ್ವಗ್ರಾಮದತ್ತ ಹೊರಟಿದ್ದರು. ಇನ್ನೇನು ಅಜ್ಜವಾರ ಗ್ರಾಮಕ್ಕೆ ಹೈವೇಯಿಂದ ಬಲತಿರುವು ಪಡೆದುಕೊಳ್ಳಬೇಕಿತ್ತು. ಅಷ್ಟರಲ್ಲೇ ಯಮಸ್ವರೂಪಿಯಂತೆ ಟಿಪ್ಪರ್ ಲಾರಿ ಅಡ್ಡ ಬಂದಿದ್ದು, ಮುಖಾಮುಖಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯಾದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದು ಬೈಕ್‌ ಅಪ್ಪಚ್ಚಿಯಾಗಿದೆ.

ಇಬ್ಬರು ಮಕ್ಕಳನ್ನು ಕಳೆದುಕೊಂಡಿರುವ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಮತ್ತೊಂದೆಡೆ ಮೃತ ನರಸಿಂಹಮೂರ್ತಿ ಕಳೆದ ಆರು ತಿಂಗಳ ಹಿಂದೆಯಷ್ಟೇ ಪ್ರೇಮ ವಿವಾಹವಾಗಿದ್ದರು.

ಅಪಘಾತದ ವಿಚಾರ ತಿಳಿದು ಸ್ಥಳಕ್ಕೆ ಎಸ್‌ಪಿ ಕುಶಲ್ ಚೌಕ್ಸಿ ಸೇರಿದಂತೆ ಚಿಕ್ಕಬಳ್ಳಾಪುರ ಪೊಲೀಸರು ಭೇಟಿ ಮಾಡಿ ಮೃತ ದೇಹಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದಾರೆ.

ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ. ಸದ್ಯ ಟಿಪ್ಪರ್ ವಶಕ್ಕೆ ಪಡೆದಿರುವ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಒಂದೇ ಗ್ರಾಮದ ನಾಲ್ವರು ಯುವಕರ ಸಾವಿನಿಂದ ಇಡೀ ಗ್ರಾಮದಲ್ಲಿ ಸೂತಕದ ವಾತಾವರಣ ಮನೆ ಮಾಡಿದೆ.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

1 day ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

2 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago