ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ನಿನ್ನೆ ರಾತ್ರಿ ಸುಮಾರು 10 ಗಂಟೆಯಲ್ಲಿ ನಡೆದಿದೆ.
ಅಜ್ಜವಾರ ಗ್ರಾಮದ ಅಣ್ಣ ತಮ್ಮಂದಿರಾದ ನರಸಿಂಹಮೂರ್ತಿ ಹಾಗೂ ನಂದೀಶ್ ಸೇರಿದಂತೆ ಅರುಣ್, ಮನೋಜ್ ಮೃತಪಟ್ಟಿದ್ದಾರೆ.
ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ನಾಲ್ವರು ಚಿಕ್ಕಬಳ್ಳಾಪುರ ನಗರದ ಚರ್ಚ್ಗಳಿಗೆ ನರಸಿಂಹಮೂರ್ತಿಗೆ ಸೇರಿದ ಸಿಟಿ 100 ಬೈಕಿನಲ್ಲಿ ಭೇಟಿ ನೀಡಿ ಮರಳಿ ಸ್ವಗ್ರಾಮದತ್ತ ಹೊರಟಿದ್ದರು. ಇನ್ನೇನು ಅಜ್ಜವಾರ ಗ್ರಾಮಕ್ಕೆ ಹೈವೇಯಿಂದ ಬಲತಿರುವು ಪಡೆದುಕೊಳ್ಳಬೇಕಿತ್ತು. ಅಷ್ಟರಲ್ಲೇ ಯಮಸ್ವರೂಪಿಯಂತೆ ಟಿಪ್ಪರ್ ಲಾರಿ ಅಡ್ಡ ಬಂದಿದ್ದು, ಮುಖಾಮುಖಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯಾದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದು ಬೈಕ್ ಅಪ್ಪಚ್ಚಿಯಾಗಿದೆ.
ಇಬ್ಬರು ಮಕ್ಕಳನ್ನು ಕಳೆದುಕೊಂಡಿರುವ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಮತ್ತೊಂದೆಡೆ ಮೃತ ನರಸಿಂಹಮೂರ್ತಿ ಕಳೆದ ಆರು ತಿಂಗಳ ಹಿಂದೆಯಷ್ಟೇ ಪ್ರೇಮ ವಿವಾಹವಾಗಿದ್ದರು.
ಅಪಘಾತದ ವಿಚಾರ ತಿಳಿದು ಸ್ಥಳಕ್ಕೆ ಎಸ್ಪಿ ಕುಶಲ್ ಚೌಕ್ಸಿ ಸೇರಿದಂತೆ ಚಿಕ್ಕಬಳ್ಳಾಪುರ ಪೊಲೀಸರು ಭೇಟಿ ಮಾಡಿ ಮೃತ ದೇಹಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದಾರೆ.
ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ. ಸದ್ಯ ಟಿಪ್ಪರ್ ವಶಕ್ಕೆ ಪಡೆದಿರುವ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಒಂದೇ ಗ್ರಾಮದ ನಾಲ್ವರು ಯುವಕರ ಸಾವಿನಿಂದ ಇಡೀ ಗ್ರಾಮದಲ್ಲಿ ಸೂತಕದ ವಾತಾವರಣ ಮನೆ ಮಾಡಿದೆ.
ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…
ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…
ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…