ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಕಳವು ಕೃತ್ಯ ಸಮೀಪದ ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಮಾಹಿತಿಯ ಪ್ರಕಾರ, ವಾಹನ ಮಾಲೀಕರು ಡಿ.ಕ್ರಾಸ್ನಲ್ಲಿರುವ ಬಾರ್ವೊಂದರ ಮುಂದೆ ತಮ್ಮ ಟಿವಿಎಸ್ ಎಕ್ಸ್ಎಲ್-100 ಅನ್ನು ನಿಲ್ಲಿಸಿ ಒಳಗೆ ತೆರಳಿದ್ದರು. ಕೆಲವೇ ನಿಮಿಷಗಳಲ್ಲಿ ಹೊರಬಂದು ನೋಡಿದಾಗ ವಾಹನ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ.
ತಕ್ಷಣವೇ ಸುತ್ತಮುತ್ತಲಿನ ಅಂಗಡಿಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಕಳ್ಳನು ಮೊದಲೇ ಎಕ್ಸ್ಎಲ್ ವಾಹನವನ್ನು ಗುರಿಯಾಗಿಸಿಕೊಂಡು ಪ್ರದೇಶದಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿರುವುದು ಕಂಡುಬಂದಿದೆ. ಜೇಬಿನಲ್ಲಿ ಕೀ ಇಟ್ಟುಕೊಂಡು ಹೊಂಚು ಹಾಕುತ್ತಿದ್ದ ಆತ, ವಾಹನ ಮಾಲೀಕರು ವಾಹನ ನಿಲ್ಲಿಸಿ ತೆರಳುತ್ತಿದ್ದಂತೆಯೇ ಅದನ್ನು ಕಳವು ಮಾಡಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ.
ಸಿಸಿಟಿವಿ ದೃಶ್ಯಗಳ ಪ್ರಕಾರ, ಕಳ್ಳನು ಕಳವು ಮಾಡಿದ ವಾಹನದಲ್ಲಿ ಡಿ ಕ್ರಾಸ್ ಬಳಿ ಯೂ-ಟರ್ನ್ ಪಡೆದು ಟಿಬಿ ವೃತ್ತದ ಕಡೆಗೆ ತೆರಳಿರುವುದು ದಾಖಲಾಗಿದೆ.
ಘಟನೆ ಸಂಬಂಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…