‘ಟಿ.ಕೆ.ರಾಮರಾವ್ ಕಾದಂಬರಿಗಳು ಮತ್ತು ಸಾಮಾಜಿಕ ಸಂದರ್ಭ’ ಕೃತಿ ಲೋಕಾರ್ಪಣೆ

ವಿದ್ಯಾರ್ಥಿಗಳು ಕಥೆಗಳನ್ನು, ಕಾದಂಬರಿಗಳನ್ನ, ಇತಿಹಾಸ ಕುರಿತಾದ ಕೃತಿಗಳನ್ನು ಓದುವ ನಿಟ್ಟಿನಲ್ಲಿ ನಿರತರಾಗಬೇಕು ಎಂದು ಶಾಸಕ ಟಿ ವೆಂಕಟರಮಣಯ್ಯ ತಿಳಿಸಿದರು. ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ, ಸಾಹಿತ್ಯ ವೇದಿಕೆ ಕನ್ನಡ ವಿಭಾಗ, ಕನ್ನಡ ಸಾಹಿತ್ಯ ಪರಿಷತ್ತು, ಅಂಕನಹಳ್ಳಿ ಪ್ರಕಾಶನ ಇವರ ಸಂಯುಕ್ತಾಶ್ರಯದಲ್ಲಿ ಡಾ. ಎಂ ಚಿಕ್ಕಣ್ಣ ಅವರ ಟಿ.ಕೆ. ರಾಮರಾವ್ ಅವರ ಕಾದಂಬರಿಗಳು ಮತ್ತು ಸಾಮಾಜಿಕ ಸಂದರ್ಭ ಎಂಬ ಕೃತಿಯ ಲೋಕಾರ್ಪಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂದು ಇತಿಹಾಸವನ್ನು ತಿರುಚುವ, ಮರೆಮಾಚುವ ಕೆಲಸಗಳು ಕಣ್ಮುಂದೆ ನಡೆಯುತ್ತಿವೆ, ವರ್ತಮಾನದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ, ಕುಸಿತವನ್ನು ಕಂಡಿದೆ ಹೀಗಾಗಿ ಇಂದು ಖಾಸಗಿ ವಿದ್ಯಾಸಂಸ್ಥೆಗಳನ್ನು ನಡೆಸುವುದು ಕಷ್ಟವಾಗಿದೆ ಎಂದರು.

ಆಂಧ್ರ ಪ್ರದೇಶದ ಕುಪ್ಪಂನಾ ದ್ರಾವಿಡ ವಿಶ್ವವಿದ್ಯಾಲಯದ ಕನ್ನಡ ಭಾಷೆ ಮತ್ತು ಅನುವಾದ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ ಎಂ.ಎಸ್. ದುರ್ಗಾ ಪ್ರವೀಣ್ ಕೃತಿಯ ಕುರಿತು ಮಾತನಾಡಿ ಅಂತರ್‌ಶಿಸ್ತೀಯ ಅಧ್ಯಯನಗಳಿಗೆ ಆಕರವಾಗಬಲ್ಲ ಕೃತಿ ಡಾ. ಚಿಕ್ಕಣ್ಣನವರ ಈ ಟಿ.ಕೆ. ರಾಮರಾವ್ ಅವರ ಕಾದಂಬರಿಗಳು ಮತ್ತು ಸಾಮಾಜಿಕ ಸಂದರ್ಭ ಎಂಬ ಈ ಗ್ರಂಥವಾಗಿದೆ. ಡಾ. ರಾಜಕುಮಾರ್ ಅವರ ಪ್ರಖ್ಯಾತ ಚಲನಚಿತ್ರ ಬಂಗಾರದ ಮನುಷ್ಯ ಟಿ.ಕೆ. ರಾಮರಾವ್ ಅವರ ಕಾದಂಬರಿಯನ್ನು ಆಧರಿಸಿದ್ದು, ಕನ್ನಡದ ಯುವ ಜನತೆಗೆ ಚಲನಚಿತ್ರವಾಗಿಯೂ, ಕಾದಂಬರಿ ಆಗಿಯೂ ಸ್ಪೂರ್ತಿಯನ್ನು ನೀಡಿದಂತಹುದು, ಪ್ರಗತಿಶೀಲದ ನಂತರ ಕನ್ನಡಿಗರ ವಾಚನಾಭಿರುಚಿಯನ್ನು ಹೆಚ್ಚಿಸಿ ಓದುಗ ವಲಯಗಳನ್ನು ವಿಸ್ತರಿಸಿದ ಕೃತಿ ಟಿ. ಕೆ.ರಾಮರಾವ್ ಅವರದು.

ಅಶ್ಲೀಲತೆಯಿಂದ ದೂರವಾದ ಶುದ್ಧ ಪತ್ತೇದಾರಿ ಸಾಹಿತ್ಯಕ್ಕೆ ನಾಂದಿ ಹಾಡಿದ ಟಿ.ಕೆ ರಾಮರಾವ್ ಅವರ ಸಮಗ್ರ ಸಾಹಿತ್ಯವನ್ನು ಸೂಕ್ಷ್ಮವಾಗಿ ಸಂಶೋಧನೆಗೆ ಒಳಪಡಿಸಿದ ಡಾ.ಚಿಕ್ಕಣ್ಣ ಅವರು ಕನ್ನಡ ಮಹತ್ವದ ಲೇಖಕರ ಬಗ್ಗೆ ಒಂದು ಒಳನೋಟವನ್ನು ಒದಗಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ, ಮಾಮೂಲು ಜಾಡಿಗಿಂತ ಭಿನ್ನವಾಗಿ ಹೊಸ ಸ್ವರೂಪದ ಸಂಶೋಧನೆಯನ್ನು ಡಾ. ಚಿಕ್ಕಣ್ಣನವರು ನೀಡಿದ್ದಾರೆ ಎಂದರು.

ಕೆ.ಎಂ ಎಫ್ ಹಾಗೂ ಬಮೂಲ್‌ನ ನಿರ್ದೇಶಕ ಬಿ.ಸಿ. ಆನಂದ್ ಕುಮಾರ್ ಮಾತನಾಡಿ ವಿದ್ಯಾರ್ಥಿಗಳು ವಿದ್ಯೆ, ಉದ್ಯೋಗ ಪಡೆದ ನಂತರ ಬಡವರಿಗೆ, ವೃದ್ಧರಿಗೆ, ಗುರು ಹಿರಿಯರಿಗೆ ಸಹಾಯ ಮಾಡುವ ಮನೋಧರ್ಮವನ್ನು ರೂಡಿಸಿಕೊಳ್ಳಬೇಕು ಎಂದರು.

ಶ್ರೀ ದೇವರಾಜ್ ಅರಸ್ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಜೆ. ರಾಜೇಂದ್ರ ಮಾತನಾಡಿ ವಿದ್ಯಾಸಂಸ್ಥೆಯಲ್ಲಿ ಬೋಧಿಸುವ ಪ್ರಾಧ್ಯಾಪಕರು ಕೇವಲ ಬೋಧನೆಗೆ ಸೀಮಿತಗೊಳ್ಳದೆ ಸಂಶೋಧನ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು ಇಂದು ಜಾಗತಿಕ ಸಂದರ್ಭದಲ್ಲಿ ಸಂಶೋಧನೆಯು ಅತ್ಯಂತ ಮಹತ್ವದ ಸ್ಥಾನವನ್ನು ಪಡೆದಿದೆ ಸಂಶೋಧನೆಯಲ್ಲಿ ತೊಡಗಿಕೊಳ್ಳುವ ಪ್ರತಿಯೊಬ್ಬರಿಗೂ ಸಂಸ್ಥೆಯು ಅನುಕೂಲವನ್ನು ಮಾಡಿಕೊಡಲಿದೆ ಎಂದರು.

ಕಾರ್ಯಕ್ರಮದಲ್ಲಿ ಎಚ್.ಆರ್. ಮ್ಯಾನೇಜರ್ ಬಾಬುರೆಡಿ, ಪ್ರಾಂಶುಪಾಲ ಡಾ. ಸಿ.ಎಂ. ಸುರೇಂದ್ರರೆಡ್ಡಿ, ಕನ್ನಡಪರ ಹಿರಿಯ ಹೋರಾಟಗಾರರಾದ ತ.ನ ಪ್ರಭುದೇವ್, ಸಂಜೀವ್ ನಾಯಕ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷೆ ಪ್ರಮೀಳ ಮಹದೇವ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶೈಲ.ಎ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಕೆ.ಆರ್ ರವಿಕಿರಣ್ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

4 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

20 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

20 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

2 days ago