‘ಟಿ.ಕೆ.ರಾಮರಾವ್ ಕಾದಂಬರಿಗಳು ಮತ್ತು ಸಾಮಾಜಿಕ ಸಂದರ್ಭ’ ಕೃತಿ ಲೋಕಾರ್ಪಣೆ

ವಿದ್ಯಾರ್ಥಿಗಳು ಕಥೆಗಳನ್ನು, ಕಾದಂಬರಿಗಳನ್ನ, ಇತಿಹಾಸ ಕುರಿತಾದ ಕೃತಿಗಳನ್ನು ಓದುವ ನಿಟ್ಟಿನಲ್ಲಿ ನಿರತರಾಗಬೇಕು ಎಂದು ಶಾಸಕ ಟಿ ವೆಂಕಟರಮಣಯ್ಯ ತಿಳಿಸಿದರು. ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ, ಸಾಹಿತ್ಯ ವೇದಿಕೆ ಕನ್ನಡ ವಿಭಾಗ, ಕನ್ನಡ ಸಾಹಿತ್ಯ ಪರಿಷತ್ತು, ಅಂಕನಹಳ್ಳಿ ಪ್ರಕಾಶನ ಇವರ ಸಂಯುಕ್ತಾಶ್ರಯದಲ್ಲಿ ಡಾ. ಎಂ ಚಿಕ್ಕಣ್ಣ ಅವರ ಟಿ.ಕೆ. ರಾಮರಾವ್ ಅವರ ಕಾದಂಬರಿಗಳು ಮತ್ತು ಸಾಮಾಜಿಕ ಸಂದರ್ಭ ಎಂಬ ಕೃತಿಯ ಲೋಕಾರ್ಪಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂದು ಇತಿಹಾಸವನ್ನು ತಿರುಚುವ, ಮರೆಮಾಚುವ ಕೆಲಸಗಳು ಕಣ್ಮುಂದೆ ನಡೆಯುತ್ತಿವೆ, ವರ್ತಮಾನದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ, ಕುಸಿತವನ್ನು ಕಂಡಿದೆ ಹೀಗಾಗಿ ಇಂದು ಖಾಸಗಿ ವಿದ್ಯಾಸಂಸ್ಥೆಗಳನ್ನು ನಡೆಸುವುದು ಕಷ್ಟವಾಗಿದೆ ಎಂದರು.

ಆಂಧ್ರ ಪ್ರದೇಶದ ಕುಪ್ಪಂನಾ ದ್ರಾವಿಡ ವಿಶ್ವವಿದ್ಯಾಲಯದ ಕನ್ನಡ ಭಾಷೆ ಮತ್ತು ಅನುವಾದ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ ಎಂ.ಎಸ್. ದುರ್ಗಾ ಪ್ರವೀಣ್ ಕೃತಿಯ ಕುರಿತು ಮಾತನಾಡಿ ಅಂತರ್‌ಶಿಸ್ತೀಯ ಅಧ್ಯಯನಗಳಿಗೆ ಆಕರವಾಗಬಲ್ಲ ಕೃತಿ ಡಾ. ಚಿಕ್ಕಣ್ಣನವರ ಈ ಟಿ.ಕೆ. ರಾಮರಾವ್ ಅವರ ಕಾದಂಬರಿಗಳು ಮತ್ತು ಸಾಮಾಜಿಕ ಸಂದರ್ಭ ಎಂಬ ಈ ಗ್ರಂಥವಾಗಿದೆ. ಡಾ. ರಾಜಕುಮಾರ್ ಅವರ ಪ್ರಖ್ಯಾತ ಚಲನಚಿತ್ರ ಬಂಗಾರದ ಮನುಷ್ಯ ಟಿ.ಕೆ. ರಾಮರಾವ್ ಅವರ ಕಾದಂಬರಿಯನ್ನು ಆಧರಿಸಿದ್ದು, ಕನ್ನಡದ ಯುವ ಜನತೆಗೆ ಚಲನಚಿತ್ರವಾಗಿಯೂ, ಕಾದಂಬರಿ ಆಗಿಯೂ ಸ್ಪೂರ್ತಿಯನ್ನು ನೀಡಿದಂತಹುದು, ಪ್ರಗತಿಶೀಲದ ನಂತರ ಕನ್ನಡಿಗರ ವಾಚನಾಭಿರುಚಿಯನ್ನು ಹೆಚ್ಚಿಸಿ ಓದುಗ ವಲಯಗಳನ್ನು ವಿಸ್ತರಿಸಿದ ಕೃತಿ ಟಿ. ಕೆ.ರಾಮರಾವ್ ಅವರದು.

ಅಶ್ಲೀಲತೆಯಿಂದ ದೂರವಾದ ಶುದ್ಧ ಪತ್ತೇದಾರಿ ಸಾಹಿತ್ಯಕ್ಕೆ ನಾಂದಿ ಹಾಡಿದ ಟಿ.ಕೆ ರಾಮರಾವ್ ಅವರ ಸಮಗ್ರ ಸಾಹಿತ್ಯವನ್ನು ಸೂಕ್ಷ್ಮವಾಗಿ ಸಂಶೋಧನೆಗೆ ಒಳಪಡಿಸಿದ ಡಾ.ಚಿಕ್ಕಣ್ಣ ಅವರು ಕನ್ನಡ ಮಹತ್ವದ ಲೇಖಕರ ಬಗ್ಗೆ ಒಂದು ಒಳನೋಟವನ್ನು ಒದಗಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ, ಮಾಮೂಲು ಜಾಡಿಗಿಂತ ಭಿನ್ನವಾಗಿ ಹೊಸ ಸ್ವರೂಪದ ಸಂಶೋಧನೆಯನ್ನು ಡಾ. ಚಿಕ್ಕಣ್ಣನವರು ನೀಡಿದ್ದಾರೆ ಎಂದರು.

ಕೆ.ಎಂ ಎಫ್ ಹಾಗೂ ಬಮೂಲ್‌ನ ನಿರ್ದೇಶಕ ಬಿ.ಸಿ. ಆನಂದ್ ಕುಮಾರ್ ಮಾತನಾಡಿ ವಿದ್ಯಾರ್ಥಿಗಳು ವಿದ್ಯೆ, ಉದ್ಯೋಗ ಪಡೆದ ನಂತರ ಬಡವರಿಗೆ, ವೃದ್ಧರಿಗೆ, ಗುರು ಹಿರಿಯರಿಗೆ ಸಹಾಯ ಮಾಡುವ ಮನೋಧರ್ಮವನ್ನು ರೂಡಿಸಿಕೊಳ್ಳಬೇಕು ಎಂದರು.

ಶ್ರೀ ದೇವರಾಜ್ ಅರಸ್ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಜೆ. ರಾಜೇಂದ್ರ ಮಾತನಾಡಿ ವಿದ್ಯಾಸಂಸ್ಥೆಯಲ್ಲಿ ಬೋಧಿಸುವ ಪ್ರಾಧ್ಯಾಪಕರು ಕೇವಲ ಬೋಧನೆಗೆ ಸೀಮಿತಗೊಳ್ಳದೆ ಸಂಶೋಧನ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು ಇಂದು ಜಾಗತಿಕ ಸಂದರ್ಭದಲ್ಲಿ ಸಂಶೋಧನೆಯು ಅತ್ಯಂತ ಮಹತ್ವದ ಸ್ಥಾನವನ್ನು ಪಡೆದಿದೆ ಸಂಶೋಧನೆಯಲ್ಲಿ ತೊಡಗಿಕೊಳ್ಳುವ ಪ್ರತಿಯೊಬ್ಬರಿಗೂ ಸಂಸ್ಥೆಯು ಅನುಕೂಲವನ್ನು ಮಾಡಿಕೊಡಲಿದೆ ಎಂದರು.

ಕಾರ್ಯಕ್ರಮದಲ್ಲಿ ಎಚ್.ಆರ್. ಮ್ಯಾನೇಜರ್ ಬಾಬುರೆಡಿ, ಪ್ರಾಂಶುಪಾಲ ಡಾ. ಸಿ.ಎಂ. ಸುರೇಂದ್ರರೆಡ್ಡಿ, ಕನ್ನಡಪರ ಹಿರಿಯ ಹೋರಾಟಗಾರರಾದ ತ.ನ ಪ್ರಭುದೇವ್, ಸಂಜೀವ್ ನಾಯಕ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷೆ ಪ್ರಮೀಳ ಮಹದೇವ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶೈಲ.ಎ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಕೆ.ಆರ್ ರವಿಕಿರಣ್ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

2 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

13 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

14 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

14 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

15 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

22 hours ago