‘ಟಿ.ಕೆ.ರಾಮರಾವ್ ಕಾದಂಬರಿಗಳು ಮತ್ತು ಸಾಮಾಜಿಕ ಸಂದರ್ಭ’ ಕೃತಿ ಲೋಕಾರ್ಪಣೆ

ವಿದ್ಯಾರ್ಥಿಗಳು ಕಥೆಗಳನ್ನು, ಕಾದಂಬರಿಗಳನ್ನ, ಇತಿಹಾಸ ಕುರಿತಾದ ಕೃತಿಗಳನ್ನು ಓದುವ ನಿಟ್ಟಿನಲ್ಲಿ ನಿರತರಾಗಬೇಕು ಎಂದು ಶಾಸಕ ಟಿ ವೆಂಕಟರಮಣಯ್ಯ ತಿಳಿಸಿದರು. ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ, ಸಾಹಿತ್ಯ ವೇದಿಕೆ ಕನ್ನಡ ವಿಭಾಗ, ಕನ್ನಡ ಸಾಹಿತ್ಯ ಪರಿಷತ್ತು, ಅಂಕನಹಳ್ಳಿ ಪ್ರಕಾಶನ ಇವರ ಸಂಯುಕ್ತಾಶ್ರಯದಲ್ಲಿ ಡಾ. ಎಂ ಚಿಕ್ಕಣ್ಣ ಅವರ ಟಿ.ಕೆ. ರಾಮರಾವ್ ಅವರ ಕಾದಂಬರಿಗಳು ಮತ್ತು ಸಾಮಾಜಿಕ ಸಂದರ್ಭ ಎಂಬ ಕೃತಿಯ ಲೋಕಾರ್ಪಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂದು ಇತಿಹಾಸವನ್ನು ತಿರುಚುವ, ಮರೆಮಾಚುವ ಕೆಲಸಗಳು ಕಣ್ಮುಂದೆ ನಡೆಯುತ್ತಿವೆ, ವರ್ತಮಾನದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ, ಕುಸಿತವನ್ನು ಕಂಡಿದೆ ಹೀಗಾಗಿ ಇಂದು ಖಾಸಗಿ ವಿದ್ಯಾಸಂಸ್ಥೆಗಳನ್ನು ನಡೆಸುವುದು ಕಷ್ಟವಾಗಿದೆ ಎಂದರು.

ಆಂಧ್ರ ಪ್ರದೇಶದ ಕುಪ್ಪಂನಾ ದ್ರಾವಿಡ ವಿಶ್ವವಿದ್ಯಾಲಯದ ಕನ್ನಡ ಭಾಷೆ ಮತ್ತು ಅನುವಾದ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ ಎಂ.ಎಸ್. ದುರ್ಗಾ ಪ್ರವೀಣ್ ಕೃತಿಯ ಕುರಿತು ಮಾತನಾಡಿ ಅಂತರ್‌ಶಿಸ್ತೀಯ ಅಧ್ಯಯನಗಳಿಗೆ ಆಕರವಾಗಬಲ್ಲ ಕೃತಿ ಡಾ. ಚಿಕ್ಕಣ್ಣನವರ ಈ ಟಿ.ಕೆ. ರಾಮರಾವ್ ಅವರ ಕಾದಂಬರಿಗಳು ಮತ್ತು ಸಾಮಾಜಿಕ ಸಂದರ್ಭ ಎಂಬ ಈ ಗ್ರಂಥವಾಗಿದೆ. ಡಾ. ರಾಜಕುಮಾರ್ ಅವರ ಪ್ರಖ್ಯಾತ ಚಲನಚಿತ್ರ ಬಂಗಾರದ ಮನುಷ್ಯ ಟಿ.ಕೆ. ರಾಮರಾವ್ ಅವರ ಕಾದಂಬರಿಯನ್ನು ಆಧರಿಸಿದ್ದು, ಕನ್ನಡದ ಯುವ ಜನತೆಗೆ ಚಲನಚಿತ್ರವಾಗಿಯೂ, ಕಾದಂಬರಿ ಆಗಿಯೂ ಸ್ಪೂರ್ತಿಯನ್ನು ನೀಡಿದಂತಹುದು, ಪ್ರಗತಿಶೀಲದ ನಂತರ ಕನ್ನಡಿಗರ ವಾಚನಾಭಿರುಚಿಯನ್ನು ಹೆಚ್ಚಿಸಿ ಓದುಗ ವಲಯಗಳನ್ನು ವಿಸ್ತರಿಸಿದ ಕೃತಿ ಟಿ. ಕೆ.ರಾಮರಾವ್ ಅವರದು.

ಅಶ್ಲೀಲತೆಯಿಂದ ದೂರವಾದ ಶುದ್ಧ ಪತ್ತೇದಾರಿ ಸಾಹಿತ್ಯಕ್ಕೆ ನಾಂದಿ ಹಾಡಿದ ಟಿ.ಕೆ ರಾಮರಾವ್ ಅವರ ಸಮಗ್ರ ಸಾಹಿತ್ಯವನ್ನು ಸೂಕ್ಷ್ಮವಾಗಿ ಸಂಶೋಧನೆಗೆ ಒಳಪಡಿಸಿದ ಡಾ.ಚಿಕ್ಕಣ್ಣ ಅವರು ಕನ್ನಡ ಮಹತ್ವದ ಲೇಖಕರ ಬಗ್ಗೆ ಒಂದು ಒಳನೋಟವನ್ನು ಒದಗಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ, ಮಾಮೂಲು ಜಾಡಿಗಿಂತ ಭಿನ್ನವಾಗಿ ಹೊಸ ಸ್ವರೂಪದ ಸಂಶೋಧನೆಯನ್ನು ಡಾ. ಚಿಕ್ಕಣ್ಣನವರು ನೀಡಿದ್ದಾರೆ ಎಂದರು.

ಕೆ.ಎಂ ಎಫ್ ಹಾಗೂ ಬಮೂಲ್‌ನ ನಿರ್ದೇಶಕ ಬಿ.ಸಿ. ಆನಂದ್ ಕುಮಾರ್ ಮಾತನಾಡಿ ವಿದ್ಯಾರ್ಥಿಗಳು ವಿದ್ಯೆ, ಉದ್ಯೋಗ ಪಡೆದ ನಂತರ ಬಡವರಿಗೆ, ವೃದ್ಧರಿಗೆ, ಗುರು ಹಿರಿಯರಿಗೆ ಸಹಾಯ ಮಾಡುವ ಮನೋಧರ್ಮವನ್ನು ರೂಡಿಸಿಕೊಳ್ಳಬೇಕು ಎಂದರು.

ಶ್ರೀ ದೇವರಾಜ್ ಅರಸ್ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಜೆ. ರಾಜೇಂದ್ರ ಮಾತನಾಡಿ ವಿದ್ಯಾಸಂಸ್ಥೆಯಲ್ಲಿ ಬೋಧಿಸುವ ಪ್ರಾಧ್ಯಾಪಕರು ಕೇವಲ ಬೋಧನೆಗೆ ಸೀಮಿತಗೊಳ್ಳದೆ ಸಂಶೋಧನ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು ಇಂದು ಜಾಗತಿಕ ಸಂದರ್ಭದಲ್ಲಿ ಸಂಶೋಧನೆಯು ಅತ್ಯಂತ ಮಹತ್ವದ ಸ್ಥಾನವನ್ನು ಪಡೆದಿದೆ ಸಂಶೋಧನೆಯಲ್ಲಿ ತೊಡಗಿಕೊಳ್ಳುವ ಪ್ರತಿಯೊಬ್ಬರಿಗೂ ಸಂಸ್ಥೆಯು ಅನುಕೂಲವನ್ನು ಮಾಡಿಕೊಡಲಿದೆ ಎಂದರು.

ಕಾರ್ಯಕ್ರಮದಲ್ಲಿ ಎಚ್.ಆರ್. ಮ್ಯಾನೇಜರ್ ಬಾಬುರೆಡಿ, ಪ್ರಾಂಶುಪಾಲ ಡಾ. ಸಿ.ಎಂ. ಸುರೇಂದ್ರರೆಡ್ಡಿ, ಕನ್ನಡಪರ ಹಿರಿಯ ಹೋರಾಟಗಾರರಾದ ತ.ನ ಪ್ರಭುದೇವ್, ಸಂಜೀವ್ ನಾಯಕ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷೆ ಪ್ರಮೀಳ ಮಹದೇವ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶೈಲ.ಎ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಕೆ.ಆರ್ ರವಿಕಿರಣ್ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

5 hours ago

Effektives Schreiben einer Facharbeit_ Ein Leitfaden

Das Schreiben einer Facharbeit stellt für viele Schüler und Studenten eine große Herausforderung dar. Der…

5 hours ago

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

10 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

22 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

1 day ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

1 day ago