‘ಟಿ.ಕೆ.ರಾಮರಾವ್ ಕಾದಂಬರಿಗಳು ಮತ್ತು ಸಾಮಾಜಿಕ ಸಂದರ್ಭ’ ಕೃತಿ ಲೋಕಾರ್ಪಣೆ

ವಿದ್ಯಾರ್ಥಿಗಳು ಕಥೆಗಳನ್ನು, ಕಾದಂಬರಿಗಳನ್ನ, ಇತಿಹಾಸ ಕುರಿತಾದ ಕೃತಿಗಳನ್ನು ಓದುವ ನಿಟ್ಟಿನಲ್ಲಿ ನಿರತರಾಗಬೇಕು ಎಂದು ಶಾಸಕ ಟಿ ವೆಂಕಟರಮಣಯ್ಯ ತಿಳಿಸಿದರು. ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ, ಸಾಹಿತ್ಯ ವೇದಿಕೆ ಕನ್ನಡ ವಿಭಾಗ, ಕನ್ನಡ ಸಾಹಿತ್ಯ ಪರಿಷತ್ತು, ಅಂಕನಹಳ್ಳಿ ಪ್ರಕಾಶನ ಇವರ ಸಂಯುಕ್ತಾಶ್ರಯದಲ್ಲಿ ಡಾ. ಎಂ ಚಿಕ್ಕಣ್ಣ ಅವರ ಟಿ.ಕೆ. ರಾಮರಾವ್ ಅವರ ಕಾದಂಬರಿಗಳು ಮತ್ತು ಸಾಮಾಜಿಕ ಸಂದರ್ಭ ಎಂಬ ಕೃತಿಯ ಲೋಕಾರ್ಪಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂದು ಇತಿಹಾಸವನ್ನು ತಿರುಚುವ, ಮರೆಮಾಚುವ ಕೆಲಸಗಳು ಕಣ್ಮುಂದೆ ನಡೆಯುತ್ತಿವೆ, ವರ್ತಮಾನದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ, ಕುಸಿತವನ್ನು ಕಂಡಿದೆ ಹೀಗಾಗಿ ಇಂದು ಖಾಸಗಿ ವಿದ್ಯಾಸಂಸ್ಥೆಗಳನ್ನು ನಡೆಸುವುದು ಕಷ್ಟವಾಗಿದೆ ಎಂದರು.

ಆಂಧ್ರ ಪ್ರದೇಶದ ಕುಪ್ಪಂನಾ ದ್ರಾವಿಡ ವಿಶ್ವವಿದ್ಯಾಲಯದ ಕನ್ನಡ ಭಾಷೆ ಮತ್ತು ಅನುವಾದ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ ಎಂ.ಎಸ್. ದುರ್ಗಾ ಪ್ರವೀಣ್ ಕೃತಿಯ ಕುರಿತು ಮಾತನಾಡಿ ಅಂತರ್‌ಶಿಸ್ತೀಯ ಅಧ್ಯಯನಗಳಿಗೆ ಆಕರವಾಗಬಲ್ಲ ಕೃತಿ ಡಾ. ಚಿಕ್ಕಣ್ಣನವರ ಈ ಟಿ.ಕೆ. ರಾಮರಾವ್ ಅವರ ಕಾದಂಬರಿಗಳು ಮತ್ತು ಸಾಮಾಜಿಕ ಸಂದರ್ಭ ಎಂಬ ಈ ಗ್ರಂಥವಾಗಿದೆ. ಡಾ. ರಾಜಕುಮಾರ್ ಅವರ ಪ್ರಖ್ಯಾತ ಚಲನಚಿತ್ರ ಬಂಗಾರದ ಮನುಷ್ಯ ಟಿ.ಕೆ. ರಾಮರಾವ್ ಅವರ ಕಾದಂಬರಿಯನ್ನು ಆಧರಿಸಿದ್ದು, ಕನ್ನಡದ ಯುವ ಜನತೆಗೆ ಚಲನಚಿತ್ರವಾಗಿಯೂ, ಕಾದಂಬರಿ ಆಗಿಯೂ ಸ್ಪೂರ್ತಿಯನ್ನು ನೀಡಿದಂತಹುದು, ಪ್ರಗತಿಶೀಲದ ನಂತರ ಕನ್ನಡಿಗರ ವಾಚನಾಭಿರುಚಿಯನ್ನು ಹೆಚ್ಚಿಸಿ ಓದುಗ ವಲಯಗಳನ್ನು ವಿಸ್ತರಿಸಿದ ಕೃತಿ ಟಿ. ಕೆ.ರಾಮರಾವ್ ಅವರದು.

ಅಶ್ಲೀಲತೆಯಿಂದ ದೂರವಾದ ಶುದ್ಧ ಪತ್ತೇದಾರಿ ಸಾಹಿತ್ಯಕ್ಕೆ ನಾಂದಿ ಹಾಡಿದ ಟಿ.ಕೆ ರಾಮರಾವ್ ಅವರ ಸಮಗ್ರ ಸಾಹಿತ್ಯವನ್ನು ಸೂಕ್ಷ್ಮವಾಗಿ ಸಂಶೋಧನೆಗೆ ಒಳಪಡಿಸಿದ ಡಾ.ಚಿಕ್ಕಣ್ಣ ಅವರು ಕನ್ನಡ ಮಹತ್ವದ ಲೇಖಕರ ಬಗ್ಗೆ ಒಂದು ಒಳನೋಟವನ್ನು ಒದಗಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ, ಮಾಮೂಲು ಜಾಡಿಗಿಂತ ಭಿನ್ನವಾಗಿ ಹೊಸ ಸ್ವರೂಪದ ಸಂಶೋಧನೆಯನ್ನು ಡಾ. ಚಿಕ್ಕಣ್ಣನವರು ನೀಡಿದ್ದಾರೆ ಎಂದರು.

ಕೆ.ಎಂ ಎಫ್ ಹಾಗೂ ಬಮೂಲ್‌ನ ನಿರ್ದೇಶಕ ಬಿ.ಸಿ. ಆನಂದ್ ಕುಮಾರ್ ಮಾತನಾಡಿ ವಿದ್ಯಾರ್ಥಿಗಳು ವಿದ್ಯೆ, ಉದ್ಯೋಗ ಪಡೆದ ನಂತರ ಬಡವರಿಗೆ, ವೃದ್ಧರಿಗೆ, ಗುರು ಹಿರಿಯರಿಗೆ ಸಹಾಯ ಮಾಡುವ ಮನೋಧರ್ಮವನ್ನು ರೂಡಿಸಿಕೊಳ್ಳಬೇಕು ಎಂದರು.

ಶ್ರೀ ದೇವರಾಜ್ ಅರಸ್ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಜೆ. ರಾಜೇಂದ್ರ ಮಾತನಾಡಿ ವಿದ್ಯಾಸಂಸ್ಥೆಯಲ್ಲಿ ಬೋಧಿಸುವ ಪ್ರಾಧ್ಯಾಪಕರು ಕೇವಲ ಬೋಧನೆಗೆ ಸೀಮಿತಗೊಳ್ಳದೆ ಸಂಶೋಧನ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು ಇಂದು ಜಾಗತಿಕ ಸಂದರ್ಭದಲ್ಲಿ ಸಂಶೋಧನೆಯು ಅತ್ಯಂತ ಮಹತ್ವದ ಸ್ಥಾನವನ್ನು ಪಡೆದಿದೆ ಸಂಶೋಧನೆಯಲ್ಲಿ ತೊಡಗಿಕೊಳ್ಳುವ ಪ್ರತಿಯೊಬ್ಬರಿಗೂ ಸಂಸ್ಥೆಯು ಅನುಕೂಲವನ್ನು ಮಾಡಿಕೊಡಲಿದೆ ಎಂದರು.

ಕಾರ್ಯಕ್ರಮದಲ್ಲಿ ಎಚ್.ಆರ್. ಮ್ಯಾನೇಜರ್ ಬಾಬುರೆಡಿ, ಪ್ರಾಂಶುಪಾಲ ಡಾ. ಸಿ.ಎಂ. ಸುರೇಂದ್ರರೆಡ್ಡಿ, ಕನ್ನಡಪರ ಹಿರಿಯ ಹೋರಾಟಗಾರರಾದ ತ.ನ ಪ್ರಭುದೇವ್, ಸಂಜೀವ್ ನಾಯಕ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷೆ ಪ್ರಮೀಳ ಮಹದೇವ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶೈಲ.ಎ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಕೆ.ಆರ್ ರವಿಕಿರಣ್ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

3 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

5 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

8 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

22 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago