‘ಟಿ.ಕೆ.ರಾಮರಾವ್ ಕಾದಂಬರಿಗಳು ಮತ್ತು ಸಾಮಾಜಿಕ ಸಂದರ್ಭ’ ಕೃತಿ ಲೋಕಾರ್ಪಣೆ

ವಿದ್ಯಾರ್ಥಿಗಳು ಕಥೆಗಳನ್ನು, ಕಾದಂಬರಿಗಳನ್ನ, ಇತಿಹಾಸ ಕುರಿತಾದ ಕೃತಿಗಳನ್ನು ಓದುವ ನಿಟ್ಟಿನಲ್ಲಿ ನಿರತರಾಗಬೇಕು ಎಂದು ಶಾಸಕ ಟಿ ವೆಂಕಟರಮಣಯ್ಯ ತಿಳಿಸಿದರು. ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ, ಸಾಹಿತ್ಯ ವೇದಿಕೆ ಕನ್ನಡ ವಿಭಾಗ, ಕನ್ನಡ ಸಾಹಿತ್ಯ ಪರಿಷತ್ತು, ಅಂಕನಹಳ್ಳಿ ಪ್ರಕಾಶನ ಇವರ ಸಂಯುಕ್ತಾಶ್ರಯದಲ್ಲಿ ಡಾ. ಎಂ ಚಿಕ್ಕಣ್ಣ ಅವರ ಟಿ.ಕೆ. ರಾಮರಾವ್ ಅವರ ಕಾದಂಬರಿಗಳು ಮತ್ತು ಸಾಮಾಜಿಕ ಸಂದರ್ಭ ಎಂಬ ಕೃತಿಯ ಲೋಕಾರ್ಪಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂದು ಇತಿಹಾಸವನ್ನು ತಿರುಚುವ, ಮರೆಮಾಚುವ ಕೆಲಸಗಳು ಕಣ್ಮುಂದೆ ನಡೆಯುತ್ತಿವೆ, ವರ್ತಮಾನದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ, ಕುಸಿತವನ್ನು ಕಂಡಿದೆ ಹೀಗಾಗಿ ಇಂದು ಖಾಸಗಿ ವಿದ್ಯಾಸಂಸ್ಥೆಗಳನ್ನು ನಡೆಸುವುದು ಕಷ್ಟವಾಗಿದೆ ಎಂದರು.

ಆಂಧ್ರ ಪ್ರದೇಶದ ಕುಪ್ಪಂನಾ ದ್ರಾವಿಡ ವಿಶ್ವವಿದ್ಯಾಲಯದ ಕನ್ನಡ ಭಾಷೆ ಮತ್ತು ಅನುವಾದ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ ಎಂ.ಎಸ್. ದುರ್ಗಾ ಪ್ರವೀಣ್ ಕೃತಿಯ ಕುರಿತು ಮಾತನಾಡಿ ಅಂತರ್‌ಶಿಸ್ತೀಯ ಅಧ್ಯಯನಗಳಿಗೆ ಆಕರವಾಗಬಲ್ಲ ಕೃತಿ ಡಾ. ಚಿಕ್ಕಣ್ಣನವರ ಈ ಟಿ.ಕೆ. ರಾಮರಾವ್ ಅವರ ಕಾದಂಬರಿಗಳು ಮತ್ತು ಸಾಮಾಜಿಕ ಸಂದರ್ಭ ಎಂಬ ಈ ಗ್ರಂಥವಾಗಿದೆ. ಡಾ. ರಾಜಕುಮಾರ್ ಅವರ ಪ್ರಖ್ಯಾತ ಚಲನಚಿತ್ರ ಬಂಗಾರದ ಮನುಷ್ಯ ಟಿ.ಕೆ. ರಾಮರಾವ್ ಅವರ ಕಾದಂಬರಿಯನ್ನು ಆಧರಿಸಿದ್ದು, ಕನ್ನಡದ ಯುವ ಜನತೆಗೆ ಚಲನಚಿತ್ರವಾಗಿಯೂ, ಕಾದಂಬರಿ ಆಗಿಯೂ ಸ್ಪೂರ್ತಿಯನ್ನು ನೀಡಿದಂತಹುದು, ಪ್ರಗತಿಶೀಲದ ನಂತರ ಕನ್ನಡಿಗರ ವಾಚನಾಭಿರುಚಿಯನ್ನು ಹೆಚ್ಚಿಸಿ ಓದುಗ ವಲಯಗಳನ್ನು ವಿಸ್ತರಿಸಿದ ಕೃತಿ ಟಿ. ಕೆ.ರಾಮರಾವ್ ಅವರದು.

ಅಶ್ಲೀಲತೆಯಿಂದ ದೂರವಾದ ಶುದ್ಧ ಪತ್ತೇದಾರಿ ಸಾಹಿತ್ಯಕ್ಕೆ ನಾಂದಿ ಹಾಡಿದ ಟಿ.ಕೆ ರಾಮರಾವ್ ಅವರ ಸಮಗ್ರ ಸಾಹಿತ್ಯವನ್ನು ಸೂಕ್ಷ್ಮವಾಗಿ ಸಂಶೋಧನೆಗೆ ಒಳಪಡಿಸಿದ ಡಾ.ಚಿಕ್ಕಣ್ಣ ಅವರು ಕನ್ನಡ ಮಹತ್ವದ ಲೇಖಕರ ಬಗ್ಗೆ ಒಂದು ಒಳನೋಟವನ್ನು ಒದಗಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ, ಮಾಮೂಲು ಜಾಡಿಗಿಂತ ಭಿನ್ನವಾಗಿ ಹೊಸ ಸ್ವರೂಪದ ಸಂಶೋಧನೆಯನ್ನು ಡಾ. ಚಿಕ್ಕಣ್ಣನವರು ನೀಡಿದ್ದಾರೆ ಎಂದರು.

ಕೆ.ಎಂ ಎಫ್ ಹಾಗೂ ಬಮೂಲ್‌ನ ನಿರ್ದೇಶಕ ಬಿ.ಸಿ. ಆನಂದ್ ಕುಮಾರ್ ಮಾತನಾಡಿ ವಿದ್ಯಾರ್ಥಿಗಳು ವಿದ್ಯೆ, ಉದ್ಯೋಗ ಪಡೆದ ನಂತರ ಬಡವರಿಗೆ, ವೃದ್ಧರಿಗೆ, ಗುರು ಹಿರಿಯರಿಗೆ ಸಹಾಯ ಮಾಡುವ ಮನೋಧರ್ಮವನ್ನು ರೂಡಿಸಿಕೊಳ್ಳಬೇಕು ಎಂದರು.

ಶ್ರೀ ದೇವರಾಜ್ ಅರಸ್ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಜೆ. ರಾಜೇಂದ್ರ ಮಾತನಾಡಿ ವಿದ್ಯಾಸಂಸ್ಥೆಯಲ್ಲಿ ಬೋಧಿಸುವ ಪ್ರಾಧ್ಯಾಪಕರು ಕೇವಲ ಬೋಧನೆಗೆ ಸೀಮಿತಗೊಳ್ಳದೆ ಸಂಶೋಧನ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು ಇಂದು ಜಾಗತಿಕ ಸಂದರ್ಭದಲ್ಲಿ ಸಂಶೋಧನೆಯು ಅತ್ಯಂತ ಮಹತ್ವದ ಸ್ಥಾನವನ್ನು ಪಡೆದಿದೆ ಸಂಶೋಧನೆಯಲ್ಲಿ ತೊಡಗಿಕೊಳ್ಳುವ ಪ್ರತಿಯೊಬ್ಬರಿಗೂ ಸಂಸ್ಥೆಯು ಅನುಕೂಲವನ್ನು ಮಾಡಿಕೊಡಲಿದೆ ಎಂದರು.

ಕಾರ್ಯಕ್ರಮದಲ್ಲಿ ಎಚ್.ಆರ್. ಮ್ಯಾನೇಜರ್ ಬಾಬುರೆಡಿ, ಪ್ರಾಂಶುಪಾಲ ಡಾ. ಸಿ.ಎಂ. ಸುರೇಂದ್ರರೆಡ್ಡಿ, ಕನ್ನಡಪರ ಹಿರಿಯ ಹೋರಾಟಗಾರರಾದ ತ.ನ ಪ್ರಭುದೇವ್, ಸಂಜೀವ್ ನಾಯಕ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷೆ ಪ್ರಮೀಳ ಮಹದೇವ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶೈಲ.ಎ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಕೆ.ಆರ್ ರವಿಕಿರಣ್ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago