‘ಟಿ.ಕೆ.ರಾಮರಾವ್ ಕಾದಂಬರಿಗಳು ಮತ್ತು ಸಾಮಾಜಿಕ ಸಂದರ್ಭ’ ಕೃತಿ ಲೋಕಾರ್ಪಣೆ

ವಿದ್ಯಾರ್ಥಿಗಳು ಕಥೆಗಳನ್ನು, ಕಾದಂಬರಿಗಳನ್ನ, ಇತಿಹಾಸ ಕುರಿತಾದ ಕೃತಿಗಳನ್ನು ಓದುವ ನಿಟ್ಟಿನಲ್ಲಿ ನಿರತರಾಗಬೇಕು ಎಂದು ಶಾಸಕ ಟಿ ವೆಂಕಟರಮಣಯ್ಯ ತಿಳಿಸಿದರು. ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ, ಸಾಹಿತ್ಯ ವೇದಿಕೆ ಕನ್ನಡ ವಿಭಾಗ, ಕನ್ನಡ ಸಾಹಿತ್ಯ ಪರಿಷತ್ತು, ಅಂಕನಹಳ್ಳಿ ಪ್ರಕಾಶನ ಇವರ ಸಂಯುಕ್ತಾಶ್ರಯದಲ್ಲಿ ಡಾ. ಎಂ ಚಿಕ್ಕಣ್ಣ ಅವರ ಟಿ.ಕೆ. ರಾಮರಾವ್ ಅವರ ಕಾದಂಬರಿಗಳು ಮತ್ತು ಸಾಮಾಜಿಕ ಸಂದರ್ಭ ಎಂಬ ಕೃತಿಯ ಲೋಕಾರ್ಪಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂದು ಇತಿಹಾಸವನ್ನು ತಿರುಚುವ, ಮರೆಮಾಚುವ ಕೆಲಸಗಳು ಕಣ್ಮುಂದೆ ನಡೆಯುತ್ತಿವೆ, ವರ್ತಮಾನದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ, ಕುಸಿತವನ್ನು ಕಂಡಿದೆ ಹೀಗಾಗಿ ಇಂದು ಖಾಸಗಿ ವಿದ್ಯಾಸಂಸ್ಥೆಗಳನ್ನು ನಡೆಸುವುದು ಕಷ್ಟವಾಗಿದೆ ಎಂದರು.

ಆಂಧ್ರ ಪ್ರದೇಶದ ಕುಪ್ಪಂನಾ ದ್ರಾವಿಡ ವಿಶ್ವವಿದ್ಯಾಲಯದ ಕನ್ನಡ ಭಾಷೆ ಮತ್ತು ಅನುವಾದ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ ಎಂ.ಎಸ್. ದುರ್ಗಾ ಪ್ರವೀಣ್ ಕೃತಿಯ ಕುರಿತು ಮಾತನಾಡಿ ಅಂತರ್‌ಶಿಸ್ತೀಯ ಅಧ್ಯಯನಗಳಿಗೆ ಆಕರವಾಗಬಲ್ಲ ಕೃತಿ ಡಾ. ಚಿಕ್ಕಣ್ಣನವರ ಈ ಟಿ.ಕೆ. ರಾಮರಾವ್ ಅವರ ಕಾದಂಬರಿಗಳು ಮತ್ತು ಸಾಮಾಜಿಕ ಸಂದರ್ಭ ಎಂಬ ಈ ಗ್ರಂಥವಾಗಿದೆ. ಡಾ. ರಾಜಕುಮಾರ್ ಅವರ ಪ್ರಖ್ಯಾತ ಚಲನಚಿತ್ರ ಬಂಗಾರದ ಮನುಷ್ಯ ಟಿ.ಕೆ. ರಾಮರಾವ್ ಅವರ ಕಾದಂಬರಿಯನ್ನು ಆಧರಿಸಿದ್ದು, ಕನ್ನಡದ ಯುವ ಜನತೆಗೆ ಚಲನಚಿತ್ರವಾಗಿಯೂ, ಕಾದಂಬರಿ ಆಗಿಯೂ ಸ್ಪೂರ್ತಿಯನ್ನು ನೀಡಿದಂತಹುದು, ಪ್ರಗತಿಶೀಲದ ನಂತರ ಕನ್ನಡಿಗರ ವಾಚನಾಭಿರುಚಿಯನ್ನು ಹೆಚ್ಚಿಸಿ ಓದುಗ ವಲಯಗಳನ್ನು ವಿಸ್ತರಿಸಿದ ಕೃತಿ ಟಿ. ಕೆ.ರಾಮರಾವ್ ಅವರದು.

ಅಶ್ಲೀಲತೆಯಿಂದ ದೂರವಾದ ಶುದ್ಧ ಪತ್ತೇದಾರಿ ಸಾಹಿತ್ಯಕ್ಕೆ ನಾಂದಿ ಹಾಡಿದ ಟಿ.ಕೆ ರಾಮರಾವ್ ಅವರ ಸಮಗ್ರ ಸಾಹಿತ್ಯವನ್ನು ಸೂಕ್ಷ್ಮವಾಗಿ ಸಂಶೋಧನೆಗೆ ಒಳಪಡಿಸಿದ ಡಾ.ಚಿಕ್ಕಣ್ಣ ಅವರು ಕನ್ನಡ ಮಹತ್ವದ ಲೇಖಕರ ಬಗ್ಗೆ ಒಂದು ಒಳನೋಟವನ್ನು ಒದಗಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ, ಮಾಮೂಲು ಜಾಡಿಗಿಂತ ಭಿನ್ನವಾಗಿ ಹೊಸ ಸ್ವರೂಪದ ಸಂಶೋಧನೆಯನ್ನು ಡಾ. ಚಿಕ್ಕಣ್ಣನವರು ನೀಡಿದ್ದಾರೆ ಎಂದರು.

ಕೆ.ಎಂ ಎಫ್ ಹಾಗೂ ಬಮೂಲ್‌ನ ನಿರ್ದೇಶಕ ಬಿ.ಸಿ. ಆನಂದ್ ಕುಮಾರ್ ಮಾತನಾಡಿ ವಿದ್ಯಾರ್ಥಿಗಳು ವಿದ್ಯೆ, ಉದ್ಯೋಗ ಪಡೆದ ನಂತರ ಬಡವರಿಗೆ, ವೃದ್ಧರಿಗೆ, ಗುರು ಹಿರಿಯರಿಗೆ ಸಹಾಯ ಮಾಡುವ ಮನೋಧರ್ಮವನ್ನು ರೂಡಿಸಿಕೊಳ್ಳಬೇಕು ಎಂದರು.

ಶ್ರೀ ದೇವರಾಜ್ ಅರಸ್ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಜೆ. ರಾಜೇಂದ್ರ ಮಾತನಾಡಿ ವಿದ್ಯಾಸಂಸ್ಥೆಯಲ್ಲಿ ಬೋಧಿಸುವ ಪ್ರಾಧ್ಯಾಪಕರು ಕೇವಲ ಬೋಧನೆಗೆ ಸೀಮಿತಗೊಳ್ಳದೆ ಸಂಶೋಧನ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು ಇಂದು ಜಾಗತಿಕ ಸಂದರ್ಭದಲ್ಲಿ ಸಂಶೋಧನೆಯು ಅತ್ಯಂತ ಮಹತ್ವದ ಸ್ಥಾನವನ್ನು ಪಡೆದಿದೆ ಸಂಶೋಧನೆಯಲ್ಲಿ ತೊಡಗಿಕೊಳ್ಳುವ ಪ್ರತಿಯೊಬ್ಬರಿಗೂ ಸಂಸ್ಥೆಯು ಅನುಕೂಲವನ್ನು ಮಾಡಿಕೊಡಲಿದೆ ಎಂದರು.

ಕಾರ್ಯಕ್ರಮದಲ್ಲಿ ಎಚ್.ಆರ್. ಮ್ಯಾನೇಜರ್ ಬಾಬುರೆಡಿ, ಪ್ರಾಂಶುಪಾಲ ಡಾ. ಸಿ.ಎಂ. ಸುರೇಂದ್ರರೆಡ್ಡಿ, ಕನ್ನಡಪರ ಹಿರಿಯ ಹೋರಾಟಗಾರರಾದ ತ.ನ ಪ್ರಭುದೇವ್, ಸಂಜೀವ್ ನಾಯಕ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷೆ ಪ್ರಮೀಳ ಮಹದೇವ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶೈಲ.ಎ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಕೆ.ಆರ್ ರವಿಕಿರಣ್ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

5 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

6 hours ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

19 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

19 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

22 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

2 days ago