ನಗರದಲ್ಲಿ ಸಂಚಾರ ದಟ್ಟಣೆ, ಅಪಘಾತ ನಿಯಂತ್ರಿಸುವ ಸಲುವಾಗಿ ಡಾ.ಬಿ.ಆರ್.ಅಂಬೇಡ್ಕರ್ (ಟಿ.ಬಿ) ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಗಳನ್ನ ಅಳವಡಿಕೆ ಮಾಡಲಾಗಿದೆ. ಈಗ ಅವು ತಾಂತ್ರಿಕ ಸಮಸ್ಯೆಯಿಂದ ಆಫ್ ಆಗಿ ತಿಂಗಳುಗಳೇ ಕಳೆದಿವೆ. ಸಿಗ್ನಲ್ ಬಲ್ಬ್ ಗಳು ಬೆಳಗದ ಕಾರಣ ವೃತ್ತದ ನಾಲ್ಕು ದಿಕ್ಕಿನಿಂದ ತಾಮುಂದು, ನಾಮುಂದು ಎಂದು ವಾಹನಗಳನ್ನ ಚಲಾಯಿಸುತ್ತಿರುವ ವಾಹನ ಸವಾರರು. ಇದರಿಂದ ಅಪಘಾತದ ಭಯದಲ್ಲಿ ಜೀವ ಅಂಗೈಯಲ್ಲಿಟ್ಟು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಅಪಘಾತ ತಡೆ, ವಾಹನ ದಟ್ಟಣೆ ನಿಯಂತ್ರಣ ಸಲುವಾಗಿ ಇತ್ತೀಚೆಗೆ ನಗರದ ಪ್ರಮುಖ ರಸ್ತೆ ಬದಿಗಳಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಅಂಗಡಿಗಳನ್ನು ಭಾರೀ ವಿರೋಧದ ನಡುವೆಯೂ ನಗರಸಭೆ ವತಿಯಿಂದ ತೆರವುಗೊಳಿಸಲಾಗಿತ್ತು. ಅಪಘಾತ, ವಾಹನ ದಟ್ಟಣೆಗೆ ಕಾರಣ ಕೇವಲ ಬೀದಿಬದಿ ಅಂಗಡಿಗಳು ಎಂದು ದೂರಿ ತೆರವು ಮಾಡಿ ಬೀದಿಬದಿ ವ್ಯಾಪಾರಸ್ಥರನ್ನ ಬೀದಿಗೆ ತರಲಾಗಿದೆ.
ಅಪಘಾತ, ವಾಹನ ದಟ್ಟಣೆ ನಿಯಂತ್ರಣ ಮಾಡಿ ಸುಗಮ ಸಂಚಾರಕ್ಕೆ ಅನವು ಮಾಡಿಕೊಡಲು ಟ್ರಾಫಿಕ್ ಸಿಗ್ನಲ್, ಟ್ರಾಫಿಕ್ ಪೊಲೀಸರ ಪಾತ್ರನೂ ಬಹಳ ಮುಖ್ಯವಾಗಿರುತ್ತದೆ. ಈಗ ನಗರದಲ್ಲಿ ಇವು ಯಾವುದು ಇಲ್ಲ. ಕೇವಲ ರಸ್ತೆಬದಿ ಅಂಗಡಿಗಳನ್ನ ತೆರವುಗೊಳಿಸಿ ಅಪಘಾತ, ವಾಹನ ದಟ್ಟಣೆ ನಿಯಂತ್ರಣ ಮಾಡಿದ್ದೇವೆ ಎಂದು ಕೈಕಟ್ಟಿ ಕುಳಿತಿರುವ ಸಂಬಂಧಪಟ್ಟ ಇಲಾಖೆಗಳು.
ಸಂಬಂಧಪಟ್ಟ ಇಲಾಖಾಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕರ ಸಾವು-ನೋವು ಆಗುವ ಮೊದಲು ಟ್ರಾಫಿಕ್ ಸಿಗ್ನಲ್ ಗಳನ್ನ ದುರಸ್ತಿ ಮಾಡಿ ರಸ್ತೆ ಸುರಕ್ಷತೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.
ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…