ನಗರದಲ್ಲಿ ಸಂಚಾರ ದಟ್ಟಣೆ, ಅಪಘಾತ ನಿಯಂತ್ರಿಸುವ ಸಲುವಾಗಿ ಡಾ.ಬಿ.ಆರ್.ಅಂಬೇಡ್ಕರ್ (ಟಿ.ಬಿ) ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಗಳನ್ನ ಅಳವಡಿಕೆ ಮಾಡಲಾಗಿದೆ. ಈಗ ಅವು ತಾಂತ್ರಿಕ ಸಮಸ್ಯೆಯಿಂದ ಆಫ್ ಆಗಿ ತಿಂಗಳುಗಳೇ ಕಳೆದಿವೆ. ಸಿಗ್ನಲ್ ಬಲ್ಬ್ ಗಳು ಬೆಳಗದ ಕಾರಣ ವೃತ್ತದ ನಾಲ್ಕು ದಿಕ್ಕಿನಿಂದ ತಾಮುಂದು, ನಾಮುಂದು ಎಂದು ವಾಹನಗಳನ್ನ ಚಲಾಯಿಸುತ್ತಿರುವ ವಾಹನ ಸವಾರರು. ಇದರಿಂದ ಅಪಘಾತದ ಭಯದಲ್ಲಿ ಜೀವ ಅಂಗೈಯಲ್ಲಿಟ್ಟು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಅಪಘಾತ ತಡೆ, ವಾಹನ ದಟ್ಟಣೆ ನಿಯಂತ್ರಣ ಸಲುವಾಗಿ ಇತ್ತೀಚೆಗೆ ನಗರದ ಪ್ರಮುಖ ರಸ್ತೆ ಬದಿಗಳಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಅಂಗಡಿಗಳನ್ನು ಭಾರೀ ವಿರೋಧದ ನಡುವೆಯೂ ನಗರಸಭೆ ವತಿಯಿಂದ ತೆರವುಗೊಳಿಸಲಾಗಿತ್ತು. ಅಪಘಾತ, ವಾಹನ ದಟ್ಟಣೆಗೆ ಕಾರಣ ಕೇವಲ ಬೀದಿಬದಿ ಅಂಗಡಿಗಳು ಎಂದು ದೂರಿ ತೆರವು ಮಾಡಿ ಬೀದಿಬದಿ ವ್ಯಾಪಾರಸ್ಥರನ್ನ ಬೀದಿಗೆ ತರಲಾಗಿದೆ.
ಅಪಘಾತ, ವಾಹನ ದಟ್ಟಣೆ ನಿಯಂತ್ರಣ ಮಾಡಿ ಸುಗಮ ಸಂಚಾರಕ್ಕೆ ಅನವು ಮಾಡಿಕೊಡಲು ಟ್ರಾಫಿಕ್ ಸಿಗ್ನಲ್, ಟ್ರಾಫಿಕ್ ಪೊಲೀಸರ ಪಾತ್ರನೂ ಬಹಳ ಮುಖ್ಯವಾಗಿರುತ್ತದೆ. ಈಗ ನಗರದಲ್ಲಿ ಇವು ಯಾವುದು ಇಲ್ಲ. ಕೇವಲ ರಸ್ತೆಬದಿ ಅಂಗಡಿಗಳನ್ನ ತೆರವುಗೊಳಿಸಿ ಅಪಘಾತ, ವಾಹನ ದಟ್ಟಣೆ ನಿಯಂತ್ರಣ ಮಾಡಿದ್ದೇವೆ ಎಂದು ಕೈಕಟ್ಟಿ ಕುಳಿತಿರುವ ಸಂಬಂಧಪಟ್ಟ ಇಲಾಖೆಗಳು.
ಸಂಬಂಧಪಟ್ಟ ಇಲಾಖಾಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕರ ಸಾವು-ನೋವು ಆಗುವ ಮೊದಲು ಟ್ರಾಫಿಕ್ ಸಿಗ್ನಲ್ ಗಳನ್ನ ದುರಸ್ತಿ ಮಾಡಿ ರಸ್ತೆ ಸುರಕ್ಷತೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…
ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…