ನಗರದಲ್ಲಿ ಸಂಚಾರ ದಟ್ಟಣೆ, ಅಪಘಾತ ನಿಯಂತ್ರಿಸುವ ಸಲುವಾಗಿ ಡಾ.ಬಿ.ಆರ್.ಅಂಬೇಡ್ಕರ್ (ಟಿ.ಬಿ) ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಗಳನ್ನ ಅಳವಡಿಕೆ ಮಾಡಲಾಗಿದೆ. ಈಗ ಅವು ತಾಂತ್ರಿಕ ಸಮಸ್ಯೆಯಿಂದ ಆಫ್ ಆಗಿ ತಿಂಗಳುಗಳೇ ಕಳೆದಿವೆ. ಸಿಗ್ನಲ್ ಬಲ್ಬ್ ಗಳು ಬೆಳಗದ ಕಾರಣ ವೃತ್ತದ ನಾಲ್ಕು ದಿಕ್ಕಿನಿಂದ ತಾಮುಂದು, ನಾಮುಂದು ಎಂದು ವಾಹನಗಳನ್ನ ಚಲಾಯಿಸುತ್ತಿರುವ ವಾಹನ ಸವಾರರು. ಇದರಿಂದ ಅಪಘಾತದ ಭಯದಲ್ಲಿ ಜೀವ ಅಂಗೈಯಲ್ಲಿಟ್ಟು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಅಪಘಾತ ತಡೆ, ವಾಹನ ದಟ್ಟಣೆ ನಿಯಂತ್ರಣ ಸಲುವಾಗಿ ಇತ್ತೀಚೆಗೆ ನಗರದ ಪ್ರಮುಖ ರಸ್ತೆ ಬದಿಗಳಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಅಂಗಡಿಗಳನ್ನು ಭಾರೀ ವಿರೋಧದ ನಡುವೆಯೂ ನಗರಸಭೆ ವತಿಯಿಂದ ತೆರವುಗೊಳಿಸಲಾಗಿತ್ತು. ಅಪಘಾತ, ವಾಹನ ದಟ್ಟಣೆಗೆ ಕಾರಣ ಕೇವಲ ಬೀದಿಬದಿ ಅಂಗಡಿಗಳು ಎಂದು ದೂರಿ ತೆರವು ಮಾಡಿ ಬೀದಿಬದಿ ವ್ಯಾಪಾರಸ್ಥರನ್ನ ಬೀದಿಗೆ ತರಲಾಗಿದೆ.
ಅಪಘಾತ, ವಾಹನ ದಟ್ಟಣೆ ನಿಯಂತ್ರಣ ಮಾಡಿ ಸುಗಮ ಸಂಚಾರಕ್ಕೆ ಅನವು ಮಾಡಿಕೊಡಲು ಟ್ರಾಫಿಕ್ ಸಿಗ್ನಲ್, ಟ್ರಾಫಿಕ್ ಪೊಲೀಸರ ಪಾತ್ರನೂ ಬಹಳ ಮುಖ್ಯವಾಗಿರುತ್ತದೆ. ಈಗ ನಗರದಲ್ಲಿ ಇವು ಯಾವುದು ಇಲ್ಲ. ಕೇವಲ ರಸ್ತೆಬದಿ ಅಂಗಡಿಗಳನ್ನ ತೆರವುಗೊಳಿಸಿ ಅಪಘಾತ, ವಾಹನ ದಟ್ಟಣೆ ನಿಯಂತ್ರಣ ಮಾಡಿದ್ದೇವೆ ಎಂದು ಕೈಕಟ್ಟಿ ಕುಳಿತಿರುವ ಸಂಬಂಧಪಟ್ಟ ಇಲಾಖೆಗಳು.
ಸಂಬಂಧಪಟ್ಟ ಇಲಾಖಾಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕರ ಸಾವು-ನೋವು ಆಗುವ ಮೊದಲು ಟ್ರಾಫಿಕ್ ಸಿಗ್ನಲ್ ಗಳನ್ನ ದುರಸ್ತಿ ಮಾಡಿ ರಸ್ತೆ ಸುರಕ್ಷತೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…