ನಗರದಲ್ಲಿ ಸಂಚಾರ ದಟ್ಟಣೆ, ಅಪಘಾತ ನಿಯಂತ್ರಿಸುವ ಸಲುವಾಗಿ ಡಾ.ಬಿ.ಆರ್.ಅಂಬೇಡ್ಕರ್ (ಟಿ.ಬಿ) ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಗಳನ್ನ ಅಳವಡಿಕೆ ಮಾಡಲಾಗಿದೆ. ಈಗ ಅವು ತಾಂತ್ರಿಕ ಸಮಸ್ಯೆಯಿಂದ ಆಫ್ ಆಗಿ ತಿಂಗಳುಗಳೇ ಕಳೆದಿವೆ. ಸಿಗ್ನಲ್ ಬಲ್ಬ್ ಗಳು ಬೆಳಗದ ಕಾರಣ ವೃತ್ತದ ನಾಲ್ಕು ದಿಕ್ಕಿನಿಂದ ತಾಮುಂದು, ನಾಮುಂದು ಎಂದು ವಾಹನಗಳನ್ನ ಚಲಾಯಿಸುತ್ತಿರುವ ವಾಹನ ಸವಾರರು. ಇದರಿಂದ ಅಪಘಾತದ ಭಯದಲ್ಲಿ ಜೀವ ಅಂಗೈಯಲ್ಲಿಟ್ಟು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಅಪಘಾತ ತಡೆ, ವಾಹನ ದಟ್ಟಣೆ ನಿಯಂತ್ರಣ ಸಲುವಾಗಿ ಇತ್ತೀಚೆಗೆ ನಗರದ ಪ್ರಮುಖ ರಸ್ತೆ ಬದಿಗಳಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಅಂಗಡಿಗಳನ್ನು ಭಾರೀ ವಿರೋಧದ ನಡುವೆಯೂ ನಗರಸಭೆ ವತಿಯಿಂದ ತೆರವುಗೊಳಿಸಲಾಗಿತ್ತು. ಅಪಘಾತ, ವಾಹನ ದಟ್ಟಣೆಗೆ ಕಾರಣ ಕೇವಲ ಬೀದಿಬದಿ ಅಂಗಡಿಗಳು ಎಂದು ದೂರಿ ತೆರವು ಮಾಡಿ ಬೀದಿಬದಿ ವ್ಯಾಪಾರಸ್ಥರನ್ನ ಬೀದಿಗೆ ತರಲಾಗಿದೆ.
ಅಪಘಾತ, ವಾಹನ ದಟ್ಟಣೆ ನಿಯಂತ್ರಣ ಮಾಡಿ ಸುಗಮ ಸಂಚಾರಕ್ಕೆ ಅನವು ಮಾಡಿಕೊಡಲು ಟ್ರಾಫಿಕ್ ಸಿಗ್ನಲ್, ಟ್ರಾಫಿಕ್ ಪೊಲೀಸರ ಪಾತ್ರನೂ ಬಹಳ ಮುಖ್ಯವಾಗಿರುತ್ತದೆ. ಈಗ ನಗರದಲ್ಲಿ ಇವು ಯಾವುದು ಇಲ್ಲ. ಕೇವಲ ರಸ್ತೆಬದಿ ಅಂಗಡಿಗಳನ್ನ ತೆರವುಗೊಳಿಸಿ ಅಪಘಾತ, ವಾಹನ ದಟ್ಟಣೆ ನಿಯಂತ್ರಣ ಮಾಡಿದ್ದೇವೆ ಎಂದು ಕೈಕಟ್ಟಿ ಕುಳಿತಿರುವ ಸಂಬಂಧಪಟ್ಟ ಇಲಾಖೆಗಳು.
ಸಂಬಂಧಪಟ್ಟ ಇಲಾಖಾಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕರ ಸಾವು-ನೋವು ಆಗುವ ಮೊದಲು ಟ್ರಾಫಿಕ್ ಸಿಗ್ನಲ್ ಗಳನ್ನ ದುರಸ್ತಿ ಮಾಡಿ ರಸ್ತೆ ಸುರಕ್ಷತೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…