ಟಿ.ಬಿ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಆಫ್ : ನಿರ್ಲಕ್ಷ್ಯ ವಹಿಸುತ್ತಿರುವ ಅಧಿಕಾರಿಗಳು: ನಾಲ್ಕು ಕಡೆಯಿಂದ ಏಕಕಾಲದಲ್ಲಿ ನುಗ್ಗುವ ವಾಹನಗಳು: ಅಪಘಾತ ಭೀತಿಯಲ್ಲಿ ಸವಾರರು

ನಗರದಲ್ಲಿ ಸಂಚಾರ ದಟ್ಟಣೆ, ಅಪಘಾತ ನಿಯಂತ್ರಿಸುವ ಸಲುವಾಗಿ ಡಾ.ಬಿ.ಆರ್.ಅಂಬೇಡ್ಕರ್ (ಟಿ.ಬಿ) ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಗಳನ್ನ ಅಳವಡಿಕೆ ಮಾಡಲಾಗಿದೆ. ಈಗ ಅವು ತಾಂತ್ರಿಕ ಸಮಸ್ಯೆಯಿಂದ ಆಫ್ ಆಗಿ ತಿಂಗಳುಗಳೇ ಕಳೆದಿವೆ. ಸಿಗ್ನಲ್ ಬಲ್ಬ್ ಗಳು ಬೆಳಗದ ಕಾರಣ ವೃತ್ತದ ನಾಲ್ಕು‌ ದಿಕ್ಕಿನಿಂದ ತಾಮುಂದು, ನಾಮುಂದು ಎಂದು ವಾಹನಗಳನ್ನ ಚಲಾಯಿಸುತ್ತಿರುವ ವಾಹನ ಸವಾರರು. ಇದರಿಂದ ಅಪಘಾತದ ಭಯದಲ್ಲಿ ಜೀವ ಅಂಗೈಯಲ್ಲಿಟ್ಟು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹಿಂದೂಪುರ, ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ ಸಂಪರ್ಕಿಸುವ ವೃತ್ತ‌ ಇದಾಗಿದ್ದು, ನಿತ್ಯ ಇಲ್ಲಿಂದ ಸಾವಿರಾರು ವಾಹನಗಳು ಓಡಾಡುತ್ತಿರುತ್ತವೆ. ವಾಹನ ದಟ್ಟಣೆ ನಿಯಂತ್ರಿಸಲು ಇತ್ತೀಚೆಗೆ ಟ್ರಾಫಿಕ್ ಬಲ್ಬ್ ಗಳನ್ನ ಅಳವಡಿಸಲಾಗಿತ್ತು. ಈಗ ದಿಢೀರನೆ ತಟಸ್ಥವಾಗಿವೆ. ಕೇವಲ ನಾಮಕಾವಸ್ಥೆಗೆ ಮಾತ್ರ ಸಿಗ್ನಲ್ ದೀಪಗಳನ್ನ ಅಳವಡಿಸಲಾಗಿದಿಯೇ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.

ಟ್ರಾಫಿಕ್‌ ಸಿಗ್ನಲ್ ಬೆಳಗದ ಕಾರಣ ಸಾಕಷ್ಟು ರಸ್ತೆ ನಿಯಮಗಳು ಉಲ್ಲಂಘನೆಯಾಗುತ್ತಿದ್ದು, ಅಪಘಾತಗಳು ಸಂಭವಿಸಿ ಅಮಾಯಕರು ಸಾಕಷ್ಟು ಸಾವು-ನೋವು ಅನುಭವಿಸುತ್ತಿದ್ದಾರೆ.

ಅಪಘಾತ ತಡೆ, ವಾಹನ ದಟ್ಟಣೆ ನಿಯಂತ್ರಣ ಸಲುವಾಗಿ ಇತ್ತೀಚೆಗೆ ನಗರದ ಪ್ರಮುಖ ರಸ್ತೆ ಬದಿಗಳಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಅಂಗಡಿಗಳನ್ನು ಭಾರೀ ವಿರೋಧದ ನಡುವೆಯೂ ನಗರಸಭೆ ವತಿಯಿಂದ ತೆರವುಗೊಳಿಸಲಾಗಿತ್ತು. ಅಪಘಾತ, ವಾಹನ ದಟ್ಟಣೆಗೆ ಕಾರಣ ಕೇವಲ ಬೀದಿಬದಿ ಅಂಗಡಿಗಳು ಎಂದು ದೂರಿ ತೆರವು ಮಾಡಿ ಬೀದಿಬದಿ ವ್ಯಾಪಾರಸ್ಥರನ್ನ ಬೀದಿಗೆ ತರಲಾಗಿದೆ.

ಅಪಘಾತ, ವಾಹನ ದಟ್ಟಣೆ ನಿಯಂತ್ರಣ ಮಾಡಿ ಸುಗಮ ಸಂಚಾರಕ್ಕೆ ಅನವು ಮಾಡಿಕೊಡಲು ಟ್ರಾಫಿಕ್ ಸಿಗ್ನಲ್, ಟ್ರಾಫಿಕ್ ಪೊಲೀಸರ ಪಾತ್ರನೂ ಬಹಳ ಮುಖ್ಯವಾಗಿರುತ್ತದೆ. ಈಗ ನಗರದಲ್ಲಿ ಇವು ಯಾವುದು ಇಲ್ಲ. ಕೇವಲ ರಸ್ತೆಬದಿ ಅಂಗಡಿಗಳನ್ನ ತೆರವುಗೊಳಿಸಿ ಅಪಘಾತ, ವಾಹನ ದಟ್ಟಣೆ ನಿಯಂತ್ರಣ ಮಾಡಿದ್ದೇವೆ ಎಂದು ಕೈಕಟ್ಟಿ ಕುಳಿತಿರುವ ಸಂಬಂಧಪಟ್ಟ ಇಲಾಖೆಗಳು.

ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಾತ್ರ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಮಾಡಲಾಗಿದೆ. ಅದನ್ನೂ ಸರಿಯಾಗಿ ನಿರ್ವಹಣೆ ಮಾಡದೇ ಬೇಜವಾಬ್ಧಾರಿ ಮೆರೆಯುತ್ತಿರುವ ಅಧಿಕಾರಿಗಳು.

ಸಂಬಂಧಪಟ್ಟ ಇಲಾಖಾಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕರ ಸಾವು-ನೋವು ಆಗುವ ಮೊದಲು ಟ್ರಾಫಿಕ್ ಸಿಗ್ನಲ್ ಗಳನ್ನ ದುರಸ್ತಿ ಮಾಡಿ ರಸ್ತೆ ಸುರಕ್ಷತೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

12 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

16 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

16 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

19 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago