ಟಿ.ಬಿ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಆಫ್ : ನಿರ್ಲಕ್ಷ್ಯ ವಹಿಸುತ್ತಿರುವ ಅಧಿಕಾರಿಗಳು: ನಾಲ್ಕು ಕಡೆಯಿಂದ ಏಕಕಾಲದಲ್ಲಿ ನುಗ್ಗುವ ವಾಹನಗಳು: ಅಪಘಾತ ಭೀತಿಯಲ್ಲಿ ಸವಾರರು

ನಗರದಲ್ಲಿ ಸಂಚಾರ ದಟ್ಟಣೆ, ಅಪಘಾತ ನಿಯಂತ್ರಿಸುವ ಸಲುವಾಗಿ ಡಾ.ಬಿ.ಆರ್.ಅಂಬೇಡ್ಕರ್ (ಟಿ.ಬಿ) ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಗಳನ್ನ ಅಳವಡಿಕೆ ಮಾಡಲಾಗಿದೆ. ಈಗ ಅವು ತಾಂತ್ರಿಕ ಸಮಸ್ಯೆಯಿಂದ ಆಫ್ ಆಗಿ ತಿಂಗಳುಗಳೇ ಕಳೆದಿವೆ. ಸಿಗ್ನಲ್ ಬಲ್ಬ್ ಗಳು ಬೆಳಗದ ಕಾರಣ ವೃತ್ತದ ನಾಲ್ಕು‌ ದಿಕ್ಕಿನಿಂದ ತಾಮುಂದು, ನಾಮುಂದು ಎಂದು ವಾಹನಗಳನ್ನ ಚಲಾಯಿಸುತ್ತಿರುವ ವಾಹನ ಸವಾರರು. ಇದರಿಂದ ಅಪಘಾತದ ಭಯದಲ್ಲಿ ಜೀವ ಅಂಗೈಯಲ್ಲಿಟ್ಟು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹಿಂದೂಪುರ, ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ ಸಂಪರ್ಕಿಸುವ ವೃತ್ತ‌ ಇದಾಗಿದ್ದು, ನಿತ್ಯ ಇಲ್ಲಿಂದ ಸಾವಿರಾರು ವಾಹನಗಳು ಓಡಾಡುತ್ತಿರುತ್ತವೆ. ವಾಹನ ದಟ್ಟಣೆ ನಿಯಂತ್ರಿಸಲು ಇತ್ತೀಚೆಗೆ ಟ್ರಾಫಿಕ್ ಬಲ್ಬ್ ಗಳನ್ನ ಅಳವಡಿಸಲಾಗಿತ್ತು. ಈಗ ದಿಢೀರನೆ ತಟಸ್ಥವಾಗಿವೆ. ಕೇವಲ ನಾಮಕಾವಸ್ಥೆಗೆ ಮಾತ್ರ ಸಿಗ್ನಲ್ ದೀಪಗಳನ್ನ ಅಳವಡಿಸಲಾಗಿದಿಯೇ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.

ಟ್ರಾಫಿಕ್‌ ಸಿಗ್ನಲ್ ಬೆಳಗದ ಕಾರಣ ಸಾಕಷ್ಟು ರಸ್ತೆ ನಿಯಮಗಳು ಉಲ್ಲಂಘನೆಯಾಗುತ್ತಿದ್ದು, ಅಪಘಾತಗಳು ಸಂಭವಿಸಿ ಅಮಾಯಕರು ಸಾಕಷ್ಟು ಸಾವು-ನೋವು ಅನುಭವಿಸುತ್ತಿದ್ದಾರೆ.

ಅಪಘಾತ ತಡೆ, ವಾಹನ ದಟ್ಟಣೆ ನಿಯಂತ್ರಣ ಸಲುವಾಗಿ ಇತ್ತೀಚೆಗೆ ನಗರದ ಪ್ರಮುಖ ರಸ್ತೆ ಬದಿಗಳಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಅಂಗಡಿಗಳನ್ನು ಭಾರೀ ವಿರೋಧದ ನಡುವೆಯೂ ನಗರಸಭೆ ವತಿಯಿಂದ ತೆರವುಗೊಳಿಸಲಾಗಿತ್ತು. ಅಪಘಾತ, ವಾಹನ ದಟ್ಟಣೆಗೆ ಕಾರಣ ಕೇವಲ ಬೀದಿಬದಿ ಅಂಗಡಿಗಳು ಎಂದು ದೂರಿ ತೆರವು ಮಾಡಿ ಬೀದಿಬದಿ ವ್ಯಾಪಾರಸ್ಥರನ್ನ ಬೀದಿಗೆ ತರಲಾಗಿದೆ.

ಅಪಘಾತ, ವಾಹನ ದಟ್ಟಣೆ ನಿಯಂತ್ರಣ ಮಾಡಿ ಸುಗಮ ಸಂಚಾರಕ್ಕೆ ಅನವು ಮಾಡಿಕೊಡಲು ಟ್ರಾಫಿಕ್ ಸಿಗ್ನಲ್, ಟ್ರಾಫಿಕ್ ಪೊಲೀಸರ ಪಾತ್ರನೂ ಬಹಳ ಮುಖ್ಯವಾಗಿರುತ್ತದೆ. ಈಗ ನಗರದಲ್ಲಿ ಇವು ಯಾವುದು ಇಲ್ಲ. ಕೇವಲ ರಸ್ತೆಬದಿ ಅಂಗಡಿಗಳನ್ನ ತೆರವುಗೊಳಿಸಿ ಅಪಘಾತ, ವಾಹನ ದಟ್ಟಣೆ ನಿಯಂತ್ರಣ ಮಾಡಿದ್ದೇವೆ ಎಂದು ಕೈಕಟ್ಟಿ ಕುಳಿತಿರುವ ಸಂಬಂಧಪಟ್ಟ ಇಲಾಖೆಗಳು.

ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಾತ್ರ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಮಾಡಲಾಗಿದೆ. ಅದನ್ನೂ ಸರಿಯಾಗಿ ನಿರ್ವಹಣೆ ಮಾಡದೇ ಬೇಜವಾಬ್ಧಾರಿ ಮೆರೆಯುತ್ತಿರುವ ಅಧಿಕಾರಿಗಳು.

ಸಂಬಂಧಪಟ್ಟ ಇಲಾಖಾಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕರ ಸಾವು-ನೋವು ಆಗುವ ಮೊದಲು ಟ್ರಾಫಿಕ್ ಸಿಗ್ನಲ್ ಗಳನ್ನ ದುರಸ್ತಿ ಮಾಡಿ ರಸ್ತೆ ಸುರಕ್ಷತೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

3 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

15 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

15 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

16 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

19 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago