ಟಿ.ಬಿ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಆಫ್ : ನಿರ್ಲಕ್ಷ್ಯ ವಹಿಸುತ್ತಿರುವ ಅಧಿಕಾರಿಗಳು: ನಾಲ್ಕು ಕಡೆಯಿಂದ ಏಕಕಾಲದಲ್ಲಿ ನುಗ್ಗುವ ವಾಹನಗಳು: ಅಪಘಾತ ಭೀತಿಯಲ್ಲಿ ಸವಾರರು

ನಗರದಲ್ಲಿ ಸಂಚಾರ ದಟ್ಟಣೆ, ಅಪಘಾತ ನಿಯಂತ್ರಿಸುವ ಸಲುವಾಗಿ ಡಾ.ಬಿ.ಆರ್.ಅಂಬೇಡ್ಕರ್ (ಟಿ.ಬಿ) ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಗಳನ್ನ ಅಳವಡಿಕೆ ಮಾಡಲಾಗಿದೆ. ಈಗ ಅವು ತಾಂತ್ರಿಕ ಸಮಸ್ಯೆಯಿಂದ ಆಫ್ ಆಗಿ ತಿಂಗಳುಗಳೇ ಕಳೆದಿವೆ. ಸಿಗ್ನಲ್ ಬಲ್ಬ್ ಗಳು ಬೆಳಗದ ಕಾರಣ ವೃತ್ತದ ನಾಲ್ಕು‌ ದಿಕ್ಕಿನಿಂದ ತಾಮುಂದು, ನಾಮುಂದು ಎಂದು ವಾಹನಗಳನ್ನ ಚಲಾಯಿಸುತ್ತಿರುವ ವಾಹನ ಸವಾರರು. ಇದರಿಂದ ಅಪಘಾತದ ಭಯದಲ್ಲಿ ಜೀವ ಅಂಗೈಯಲ್ಲಿಟ್ಟು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹಿಂದೂಪುರ, ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ ಸಂಪರ್ಕಿಸುವ ವೃತ್ತ‌ ಇದಾಗಿದ್ದು, ನಿತ್ಯ ಇಲ್ಲಿಂದ ಸಾವಿರಾರು ವಾಹನಗಳು ಓಡಾಡುತ್ತಿರುತ್ತವೆ. ವಾಹನ ದಟ್ಟಣೆ ನಿಯಂತ್ರಿಸಲು ಇತ್ತೀಚೆಗೆ ಟ್ರಾಫಿಕ್ ಬಲ್ಬ್ ಗಳನ್ನ ಅಳವಡಿಸಲಾಗಿತ್ತು. ಈಗ ದಿಢೀರನೆ ತಟಸ್ಥವಾಗಿವೆ. ಕೇವಲ ನಾಮಕಾವಸ್ಥೆಗೆ ಮಾತ್ರ ಸಿಗ್ನಲ್ ದೀಪಗಳನ್ನ ಅಳವಡಿಸಲಾಗಿದಿಯೇ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.

ಟ್ರಾಫಿಕ್‌ ಸಿಗ್ನಲ್ ಬೆಳಗದ ಕಾರಣ ಸಾಕಷ್ಟು ರಸ್ತೆ ನಿಯಮಗಳು ಉಲ್ಲಂಘನೆಯಾಗುತ್ತಿದ್ದು, ಅಪಘಾತಗಳು ಸಂಭವಿಸಿ ಅಮಾಯಕರು ಸಾಕಷ್ಟು ಸಾವು-ನೋವು ಅನುಭವಿಸುತ್ತಿದ್ದಾರೆ.

ಅಪಘಾತ ತಡೆ, ವಾಹನ ದಟ್ಟಣೆ ನಿಯಂತ್ರಣ ಸಲುವಾಗಿ ಇತ್ತೀಚೆಗೆ ನಗರದ ಪ್ರಮುಖ ರಸ್ತೆ ಬದಿಗಳಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಅಂಗಡಿಗಳನ್ನು ಭಾರೀ ವಿರೋಧದ ನಡುವೆಯೂ ನಗರಸಭೆ ವತಿಯಿಂದ ತೆರವುಗೊಳಿಸಲಾಗಿತ್ತು. ಅಪಘಾತ, ವಾಹನ ದಟ್ಟಣೆಗೆ ಕಾರಣ ಕೇವಲ ಬೀದಿಬದಿ ಅಂಗಡಿಗಳು ಎಂದು ದೂರಿ ತೆರವು ಮಾಡಿ ಬೀದಿಬದಿ ವ್ಯಾಪಾರಸ್ಥರನ್ನ ಬೀದಿಗೆ ತರಲಾಗಿದೆ.

ಅಪಘಾತ, ವಾಹನ ದಟ್ಟಣೆ ನಿಯಂತ್ರಣ ಮಾಡಿ ಸುಗಮ ಸಂಚಾರಕ್ಕೆ ಅನವು ಮಾಡಿಕೊಡಲು ಟ್ರಾಫಿಕ್ ಸಿಗ್ನಲ್, ಟ್ರಾಫಿಕ್ ಪೊಲೀಸರ ಪಾತ್ರನೂ ಬಹಳ ಮುಖ್ಯವಾಗಿರುತ್ತದೆ. ಈಗ ನಗರದಲ್ಲಿ ಇವು ಯಾವುದು ಇಲ್ಲ. ಕೇವಲ ರಸ್ತೆಬದಿ ಅಂಗಡಿಗಳನ್ನ ತೆರವುಗೊಳಿಸಿ ಅಪಘಾತ, ವಾಹನ ದಟ್ಟಣೆ ನಿಯಂತ್ರಣ ಮಾಡಿದ್ದೇವೆ ಎಂದು ಕೈಕಟ್ಟಿ ಕುಳಿತಿರುವ ಸಂಬಂಧಪಟ್ಟ ಇಲಾಖೆಗಳು.

ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಾತ್ರ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಮಾಡಲಾಗಿದೆ. ಅದನ್ನೂ ಸರಿಯಾಗಿ ನಿರ್ವಹಣೆ ಮಾಡದೇ ಬೇಜವಾಬ್ಧಾರಿ ಮೆರೆಯುತ್ತಿರುವ ಅಧಿಕಾರಿಗಳು.

ಸಂಬಂಧಪಟ್ಟ ಇಲಾಖಾಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕರ ಸಾವು-ನೋವು ಆಗುವ ಮೊದಲು ಟ್ರಾಫಿಕ್ ಸಿಗ್ನಲ್ ಗಳನ್ನ ದುರಸ್ತಿ ಮಾಡಿ ರಸ್ತೆ ಸುರಕ್ಷತೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

12 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

12 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago