ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅಧಿಕೃತವಾಗ ನೇಮಕ
ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅಧಿಕೃತ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಪ್ರತಿಕ್ರಿಯೆ ನೀಡಿದ್ದಾರೆ, ಭಾರತೀಯ ಕ್ರಿಕೆಟ್ ತಂಡದ ಹೊಸ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ಸ್ವಾಗತಿಸಲು ನನಗೆ ಅಪಾರ ಸಂತೋಷವಾಗುತ್ತದೆ. ಆಧುನಿಕ-ದಿನದ ಕ್ರಿಕೆಟ್ ವೇಗವಾಗಿ ವಿಕಸನಗೊಂಡಿದೆ ಮತ್ತು ಗೌತಮ್ ಈ ಬದಲಾಗುತ್ತಿರುವ ಕ್ರಿಕೆಟ್ ನ್ನು ಹತ್ತಿರದಿಂದ ನೋಡಿದ್ದಾರೆ. ತಮ್ಮ ವೃತ್ತಿಜೀವನದುದ್ದಕ್ಕೂ ವಿವಿಧ ಪಾತ್ರಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ನಂತರ, ಭಾರತೀಯ ಕ್ರಿಕೆಟನ್ನು ಮುನ್ನಡೆಸಲು ಗೌತಮ್ ಆದರ್ಶ ವ್ಯಕ್ತಿ ಎಂದು ನನಗೆ ವಿಶ್ವಾಸವಿದೆ. ಅವರು ಈ ಹೊಸ ಪ್ರಯಾಣವನ್ನು ಪ್ರಾರಂಭಿಸುತ್ತಿರುವಾಗ ಬಿಸಿಸಿಐ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತದೆ ಎಂದಿದ್ದಾರೆ.
ಟಿ20 ವಿಶ್ವಕಪ್ ಬಳಿಕ ರಾಹುಲ್ ದ್ರಾವಿಡ್ ಅಧಿಕಾರಾವಧಿ ಕೊನೆಗೊಂಡಿತ್ತು. ಇದಾದ ಬಳಿಕ ಭಾರತ ತಂಡ ಶ್ರೇಷ್ಠ ಕೋಚ್ಗಾಗಿ ಹುಡುಕಾಟ ನಡೆಸಿತ್ತು. 2011ರ ವಿಶ್ವ ಚಾಂಪಿಯನ್ ಗೌತಮ್ ಗಂಭೀರ್ ಈ ರೇಸ್ನಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಬಿಸಿಸಿಐ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಹೆಸರನ್ನು ಅಧಿಕೃತವಾಗಿ ಪ್ರಕಟಿಸಿದೆ.
ಸದಾ ಆಕ್ರಮಣಕಾರಿ ಆಟ ಹಾಗೂ ಮನೋಭಾವ ಹೊಂದಿರುವ ಗೌತಮ್ ಗಂಭೀರ್ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿ ತಂಡವನ್ನು ಚಾಂಪಿಯನ್ ಮಾಡುವ ಮೂಲಕ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದ್ದರು.
ಭಾರತದ ಮುಖ್ಯ ಕೋಚ್ ಆಗುವ ಮೂಲಕ 2025 ನೇ ಸಾಲಿನಲ್ಲಿ ಪಾಕಿಸ್ತಾನದಲ್ಲಿ ನಡೆಯುವ ಚಾಂಪಿಯನ್ಸ್ ಟ್ರೋಫಿ, ಇಂಗ್ಲೇಂಡ್ ನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಟೆಸ್ಟ್ ಚಾಂಪಿಯನ್ ಶಿಪ್ ಹಾಗೂ 2026 ರಲ್ಲಿ ತವರಿನಲ್ಲಿ ನಡೆಯುವ ಟೆ-ಟ್ವೆಂಟಿ ವಿಶ್ವಕಪ್ ಗೆಲ್ಲುವುದು ಅವರ ಮುಂದಿನ ಸವಾಲಾಗಿದೆ.
ಹಿರಿಯ ಹಾಗೂ ಕಿರಿಯ ಆಟಗಾರರನ್ನು ಜೊತೆ ಜೊತೆಗೆ ಕರೆದುಕೊಂಡು ಹೋಗುವ ಹಾಗೂ ಅವರಲ್ಲಿನ ಪ್ರತಿಭೆ ಗುರುತಿಸಿ ತಂಡವನ್ನು ಚಾಂಪಿಯನ್ ಮಾಡುವುದು ಗೌತಮ್ ಗಂಭೀರ್ ಅವರಿಗಿರುವ ಬಹು ದೊಡ್ಡ ಜವಾಬ್ದಾರಿಯಾಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…