ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅಧಿಕೃತವಾಗ ನೇಮಕ
ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅಧಿಕೃತ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಪ್ರತಿಕ್ರಿಯೆ ನೀಡಿದ್ದಾರೆ, ಭಾರತೀಯ ಕ್ರಿಕೆಟ್ ತಂಡದ ಹೊಸ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ಸ್ವಾಗತಿಸಲು ನನಗೆ ಅಪಾರ ಸಂತೋಷವಾಗುತ್ತದೆ. ಆಧುನಿಕ-ದಿನದ ಕ್ರಿಕೆಟ್ ವೇಗವಾಗಿ ವಿಕಸನಗೊಂಡಿದೆ ಮತ್ತು ಗೌತಮ್ ಈ ಬದಲಾಗುತ್ತಿರುವ ಕ್ರಿಕೆಟ್ ನ್ನು ಹತ್ತಿರದಿಂದ ನೋಡಿದ್ದಾರೆ. ತಮ್ಮ ವೃತ್ತಿಜೀವನದುದ್ದಕ್ಕೂ ವಿವಿಧ ಪಾತ್ರಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ನಂತರ, ಭಾರತೀಯ ಕ್ರಿಕೆಟನ್ನು ಮುನ್ನಡೆಸಲು ಗೌತಮ್ ಆದರ್ಶ ವ್ಯಕ್ತಿ ಎಂದು ನನಗೆ ವಿಶ್ವಾಸವಿದೆ. ಅವರು ಈ ಹೊಸ ಪ್ರಯಾಣವನ್ನು ಪ್ರಾರಂಭಿಸುತ್ತಿರುವಾಗ ಬಿಸಿಸಿಐ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತದೆ ಎಂದಿದ್ದಾರೆ.
ಟಿ20 ವಿಶ್ವಕಪ್ ಬಳಿಕ ರಾಹುಲ್ ದ್ರಾವಿಡ್ ಅಧಿಕಾರಾವಧಿ ಕೊನೆಗೊಂಡಿತ್ತು. ಇದಾದ ಬಳಿಕ ಭಾರತ ತಂಡ ಶ್ರೇಷ್ಠ ಕೋಚ್ಗಾಗಿ ಹುಡುಕಾಟ ನಡೆಸಿತ್ತು. 2011ರ ವಿಶ್ವ ಚಾಂಪಿಯನ್ ಗೌತಮ್ ಗಂಭೀರ್ ಈ ರೇಸ್ನಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಬಿಸಿಸಿಐ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಹೆಸರನ್ನು ಅಧಿಕೃತವಾಗಿ ಪ್ರಕಟಿಸಿದೆ.
ಸದಾ ಆಕ್ರಮಣಕಾರಿ ಆಟ ಹಾಗೂ ಮನೋಭಾವ ಹೊಂದಿರುವ ಗೌತಮ್ ಗಂಭೀರ್ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿ ತಂಡವನ್ನು ಚಾಂಪಿಯನ್ ಮಾಡುವ ಮೂಲಕ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದ್ದರು.
ಭಾರತದ ಮುಖ್ಯ ಕೋಚ್ ಆಗುವ ಮೂಲಕ 2025 ನೇ ಸಾಲಿನಲ್ಲಿ ಪಾಕಿಸ್ತಾನದಲ್ಲಿ ನಡೆಯುವ ಚಾಂಪಿಯನ್ಸ್ ಟ್ರೋಫಿ, ಇಂಗ್ಲೇಂಡ್ ನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಟೆಸ್ಟ್ ಚಾಂಪಿಯನ್ ಶಿಪ್ ಹಾಗೂ 2026 ರಲ್ಲಿ ತವರಿನಲ್ಲಿ ನಡೆಯುವ ಟೆ-ಟ್ವೆಂಟಿ ವಿಶ್ವಕಪ್ ಗೆಲ್ಲುವುದು ಅವರ ಮುಂದಿನ ಸವಾಲಾಗಿದೆ.
ಹಿರಿಯ ಹಾಗೂ ಕಿರಿಯ ಆಟಗಾರರನ್ನು ಜೊತೆ ಜೊತೆಗೆ ಕರೆದುಕೊಂಡು ಹೋಗುವ ಹಾಗೂ ಅವರಲ್ಲಿನ ಪ್ರತಿಭೆ ಗುರುತಿಸಿ ತಂಡವನ್ನು ಚಾಂಪಿಯನ್ ಮಾಡುವುದು ಗೌತಮ್ ಗಂಭೀರ್ ಅವರಿಗಿರುವ ಬಹು ದೊಡ್ಡ ಜವಾಬ್ದಾರಿಯಾಗಿದೆ.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…