ಟೀಂ ಇಂಡಿಯಾದ ಮುಖ್ಯ ಕೋಚ್ ಸ್ಥಾನಕ್ಕೆ ಗೌತಮ್ ಗಂಭೀರ್ ನೇಮಕ

ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅಧಿಕೃತವಾಗ ನೇಮಕ

ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅಧಿಕೃತ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಪ್ರತಿಕ್ರಿಯೆ ನೀಡಿದ್ದಾರೆ, ಭಾರತೀಯ ಕ್ರಿಕೆಟ್ ತಂಡದ ಹೊಸ ಮುಖ್ಯ ಕೋಚ್ ಆಗಿ ಗೌತಮ್‌ ಗಂಭೀರ್ ಅವರನ್ನು ಸ್ವಾಗತಿಸಲು ನನಗೆ ಅಪಾರ ಸಂತೋಷವಾಗುತ್ತದೆ. ಆಧುನಿಕ-ದಿನದ ಕ್ರಿಕೆಟ್ ವೇಗವಾಗಿ ವಿಕಸನಗೊಂಡಿದೆ ಮತ್ತು ಗೌತಮ್ ಈ ಬದಲಾಗುತ್ತಿರುವ ಕ್ರಿಕೆಟ್ ನ್ನು ಹತ್ತಿರದಿಂದ ನೋಡಿದ್ದಾರೆ. ತಮ್ಮ ವೃತ್ತಿಜೀವನದುದ್ದಕ್ಕೂ ವಿವಿಧ ಪಾತ್ರಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ನಂತರ, ಭಾರತೀಯ ಕ್ರಿಕೆಟನ್ನು ಮುನ್ನಡೆಸಲು ಗೌತಮ್ ಆದರ್ಶ ವ್ಯಕ್ತಿ ಎಂದು ನನಗೆ ವಿಶ್ವಾಸವಿದೆ. ಅವರು ಈ ಹೊಸ ಪ್ರಯಾಣವನ್ನು ಪ್ರಾರಂಭಿಸುತ್ತಿರುವಾಗ ಬಿಸಿಸಿಐ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತದೆ ಎಂದಿದ್ದಾರೆ.

ಟಿ20 ವಿಶ್ವಕಪ್ ಬಳಿಕ ರಾಹುಲ್ ದ್ರಾವಿಡ್ ಅಧಿಕಾರಾವಧಿ ಕೊನೆಗೊಂಡಿತ್ತು. ಇದಾದ ಬಳಿಕ ಭಾರತ ತಂಡ ಶ್ರೇಷ್ಠ ಕೋಚ್‌ಗಾಗಿ ಹುಡುಕಾಟ ನಡೆಸಿತ್ತು. 2011ರ ವಿಶ್ವ ಚಾಂಪಿಯನ್ ಗೌತಮ್ ಗಂಭೀರ್ ಈ ರೇಸ್‌ನಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಬಿಸಿಸಿಐ ಮುಖ್ಯ ಕೋಚ್‌ ಆಗಿ ಗೌತಮ್ ಗಂಭೀರ್ ಹೆಸರನ್ನು ಅಧಿಕೃತವಾಗಿ ಪ್ರಕಟಿಸಿದೆ.

ಗೌತಮ್ ಗಂಭೀರ್ ಅವರಿಗೆ ಸಾಲು ಸಾಲು ಸವಾಲು ಇದ್ದು ಅದನ್ನು ಹೇಗೆ ನಿಭಾಯಿಸುತ್ತಾರೆ ಎಂಬುದು ಕಾದು ನೋಡಬೇಕಿದೆ.

ಸದಾ ಆಕ್ರಮಣಕಾರಿ ಆಟ ಹಾಗೂ ಮನೋಭಾವ ಹೊಂದಿರುವ ಗೌತಮ್ ಗಂಭೀರ್ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿ ತಂಡವನ್ನು ಚಾಂಪಿಯನ್ ಮಾಡುವ ಮೂಲಕ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದ್ದರು.

ಭಾರತದ ಮುಖ್ಯ ಕೋಚ್ ಆಗುವ ಮೂಲಕ 2025 ನೇ ಸಾಲಿನಲ್ಲಿ ಪಾಕಿಸ್ತಾನದಲ್ಲಿ ನಡೆಯುವ ಚಾಂಪಿಯನ್ಸ್ ಟ್ರೋಫಿ, ಇಂಗ್ಲೇಂಡ್ ನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಟೆಸ್ಟ್ ಚಾಂಪಿಯನ್ ಶಿಪ್ ಹಾಗೂ 2026 ರಲ್ಲಿ ತವರಿನಲ್ಲಿ ನಡೆಯುವ ಟೆ-ಟ್ವೆಂಟಿ ವಿಶ್ವಕಪ್ ಗೆಲ್ಲುವುದು ಅವರ ಮುಂದಿನ ಸವಾಲಾಗಿದೆ.

ಹಿರಿಯ ಹಾಗೂ ಕಿರಿಯ ಆಟಗಾರರನ್ನು ಜೊತೆ ಜೊತೆಗೆ ಕರೆದುಕೊಂಡು ಹೋಗುವ ಹಾಗೂ ಅವರಲ್ಲಿನ ಪ್ರತಿಭೆ ಗುರುತಿಸಿ ತಂಡವನ್ನು ಚಾಂಪಿಯನ್ ಮಾಡುವುದು ಗೌತಮ್ ಗಂಭೀರ್ ಅವರಿಗಿರುವ ಬಹು ದೊಡ್ಡ ಜವಾಬ್ದಾರಿಯಾಗಿದೆ.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

10 minutes ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

19 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago