Categories: ಟೆನಿಸ್

ಟೆನಿಸ್ ಅಂಗಳದಲ್ಲಿ ಹೊಸ ಇತಿಹಾಸ: ವಿಶ್ವದ ನಂ.1 ಸ್ಥಾನಕ್ಕೆ ಲಗ್ಗೆ ಇಟ್ಟ ರೋಹನ್ ಬೋಪಣ್ಣ

ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯನ್ ಓಪನ್​ನ ಪುರುಷರ ಡಬಲ್ಸ್​ನಲ್ಲಿ, ಭಾರತದ ರೋಹನ್ ಬೋಪಣ್ಣ ಹಾಗೂ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೋಡಿ ಸೆಮಿಫೈನಲ್​ಗೆ ಪ್ರವೇಶಿಸಿದ್ದಾರೆ. ಈ ಗೆಲುವಿನೊಂದಿಗೆ ATP ಡಬಲ್ಸ್​ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ ವಿಶ್ವದ ಅತ್ಯಂತ ಹಿರಿಯ ಆಟಗಾರ ಎಂಬ ದಾಖಲೆ ಬೋಪಣ್ಣ ಪಾಲಾಗಿದೆ.

ಮೂಲತಃ ಕೊಡಗಿನವರಾದ ರೋಹನ್ ಬೋಪಣ್ಣ ತಮ್ಮ 43ನೇ ವಯಸ್ಸಿನಲ್ಲಿ ಈ ಸಾಧನೆ ಮಾಡಿರುವುದು ವಿಶೇಷ.  ಮೂಲತಃ ಕೊಡಗಿನ ಮಾದಪುರ ಗ್ರಾಮದ ನಿವಾಸಿಯಾದ ಮಚ್ಚಂಡ ಭೂಪಣ್ಣ ಹಾಗೂ ಮಲ್ಲಿಕಾ ದಂಪತಿಯ ಪುತ್ರನಾಗಿದ್ದಾರೆ.

ಇದಕ್ಕೂ ಮುನ್ನ ಎಟಿಪಿ ಡಬಲ್ಸ್ ಶ್ರೇಯಾಂಕ ಪಟ್ಟಿಯಲ್ಲಿ ಯುಎಸ್​ಎ ಆಟಗಾರ ಆಸ್ಟಿನ್ ಕ್ರಾಜಿಸೆಕ್ ಅಗ್ರಸ್ಥಾನದಲ್ಲಿದ್ದರು. ಆದರೆ ಆಸ್ಟ್ರೇಲಿಯನ್ ಓಪನ್​ ಡಬಲ್ಸ್​ನಲ್ಲಿ ಕ್ರಾಜಿಸೆಕ್ ಮತ್ತು ಅವರ ಕ್ರೊಯೇಷಿಯಾದ ಜೊತೆಗಾರ ಇವಾನ್ ಡೋಡಿಗ್ ಎರಡನೇ ಸುತ್ತಿನಲ್ಲಿ ನಿರ್ಗಮಿಸಿದ್ದಾರೆ. ಇತ್ತ ಮ್ಯಾಥ್ಯೂ ಎಬ್ಡೆನ್ ಜೊತೆಗೂಡಿ ಸೆಮಿಫೈನಲ್​ಗೇರುವ ಮೂಲಕ ರೋಹನ್ ಬೋಪಣ್ಣ ಟೆನಿಸ್ (ಡಬಲ್ಸ್​) ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ವಿಶ್ವ ಟೆನಿಸ್ ಶ್ರೇಯಾಂಕದಲ್ಲಿ ಅಗ್ರಸ್ಥಾನ ಅಲಂಕರಿಸಿದ ಭಾರತದ ನಾಲ್ಕನೇ ಟೆನಿಸ್ ತಾರೆ ಎಂಬ ಹೆಗ್ಗಳಿಕೆಗೂ ರೋಹನ್ ಬೋಪಣ್ಣ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಮಹೇಶ್ ಭೂಪತಿ, ಲಿಯಾಂಡರ್ ಪೇಸ್ ಮತ್ತು ಸಾನಿಯಾ ಮಿರ್ಝಾ ಡಬಲ್ಸ್‌ನಲ್ಲಿ ನಂ.1 ಸ್ಥಾನ ಅಲಂಕರಿಸಿದ್ದರು.

ಇದೀಗ ತಮ್ಮ ಹಿರಿಯ ವಯಸ್ಸಿನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ರೋಹನ್ ಬೋಪಣ್ಣ ಡಬಲ್ಸ್​ ಶ್ರೇಯಾಂಕದಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಅತ್ಯಂತ ಹಿರಿಯ ಆಟಗಾರ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

1 hour ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

4 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

16 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

17 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

20 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

22 hours ago