Categories: ಟೆನಿಸ್

ಟೆನಿಸ್ ಅಂಗಳದಲ್ಲಿ ಹೊಸ ಇತಿಹಾಸ: ವಿಶ್ವದ ನಂ.1 ಸ್ಥಾನಕ್ಕೆ ಲಗ್ಗೆ ಇಟ್ಟ ರೋಹನ್ ಬೋಪಣ್ಣ

ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯನ್ ಓಪನ್​ನ ಪುರುಷರ ಡಬಲ್ಸ್​ನಲ್ಲಿ, ಭಾರತದ ರೋಹನ್ ಬೋಪಣ್ಣ ಹಾಗೂ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೋಡಿ ಸೆಮಿಫೈನಲ್​ಗೆ ಪ್ರವೇಶಿಸಿದ್ದಾರೆ. ಈ ಗೆಲುವಿನೊಂದಿಗೆ ATP ಡಬಲ್ಸ್​ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ ವಿಶ್ವದ ಅತ್ಯಂತ ಹಿರಿಯ ಆಟಗಾರ ಎಂಬ ದಾಖಲೆ ಬೋಪಣ್ಣ ಪಾಲಾಗಿದೆ.

ಮೂಲತಃ ಕೊಡಗಿನವರಾದ ರೋಹನ್ ಬೋಪಣ್ಣ ತಮ್ಮ 43ನೇ ವಯಸ್ಸಿನಲ್ಲಿ ಈ ಸಾಧನೆ ಮಾಡಿರುವುದು ವಿಶೇಷ.  ಮೂಲತಃ ಕೊಡಗಿನ ಮಾದಪುರ ಗ್ರಾಮದ ನಿವಾಸಿಯಾದ ಮಚ್ಚಂಡ ಭೂಪಣ್ಣ ಹಾಗೂ ಮಲ್ಲಿಕಾ ದಂಪತಿಯ ಪುತ್ರನಾಗಿದ್ದಾರೆ.

ಇದಕ್ಕೂ ಮುನ್ನ ಎಟಿಪಿ ಡಬಲ್ಸ್ ಶ್ರೇಯಾಂಕ ಪಟ್ಟಿಯಲ್ಲಿ ಯುಎಸ್​ಎ ಆಟಗಾರ ಆಸ್ಟಿನ್ ಕ್ರಾಜಿಸೆಕ್ ಅಗ್ರಸ್ಥಾನದಲ್ಲಿದ್ದರು. ಆದರೆ ಆಸ್ಟ್ರೇಲಿಯನ್ ಓಪನ್​ ಡಬಲ್ಸ್​ನಲ್ಲಿ ಕ್ರಾಜಿಸೆಕ್ ಮತ್ತು ಅವರ ಕ್ರೊಯೇಷಿಯಾದ ಜೊತೆಗಾರ ಇವಾನ್ ಡೋಡಿಗ್ ಎರಡನೇ ಸುತ್ತಿನಲ್ಲಿ ನಿರ್ಗಮಿಸಿದ್ದಾರೆ. ಇತ್ತ ಮ್ಯಾಥ್ಯೂ ಎಬ್ಡೆನ್ ಜೊತೆಗೂಡಿ ಸೆಮಿಫೈನಲ್​ಗೇರುವ ಮೂಲಕ ರೋಹನ್ ಬೋಪಣ್ಣ ಟೆನಿಸ್ (ಡಬಲ್ಸ್​) ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ವಿಶ್ವ ಟೆನಿಸ್ ಶ್ರೇಯಾಂಕದಲ್ಲಿ ಅಗ್ರಸ್ಥಾನ ಅಲಂಕರಿಸಿದ ಭಾರತದ ನಾಲ್ಕನೇ ಟೆನಿಸ್ ತಾರೆ ಎಂಬ ಹೆಗ್ಗಳಿಕೆಗೂ ರೋಹನ್ ಬೋಪಣ್ಣ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಮಹೇಶ್ ಭೂಪತಿ, ಲಿಯಾಂಡರ್ ಪೇಸ್ ಮತ್ತು ಸಾನಿಯಾ ಮಿರ್ಝಾ ಡಬಲ್ಸ್‌ನಲ್ಲಿ ನಂ.1 ಸ್ಥಾನ ಅಲಂಕರಿಸಿದ್ದರು.

ಇದೀಗ ತಮ್ಮ ಹಿರಿಯ ವಯಸ್ಸಿನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ರೋಹನ್ ಬೋಪಣ್ಣ ಡಬಲ್ಸ್​ ಶ್ರೇಯಾಂಕದಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಅತ್ಯಂತ ಹಿರಿಯ ಆಟಗಾರ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

Ramesh Babu

Journalist

Recent Posts

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

5 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

7 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

9 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

17 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 day ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

1 day ago