Categories: ಟೆನಿಸ್

ಟೆನಿಸ್ ಅಂಗಳದಲ್ಲಿ ಹೊಸ ಇತಿಹಾಸ: ವಿಶ್ವದ ನಂ.1 ಸ್ಥಾನಕ್ಕೆ ಲಗ್ಗೆ ಇಟ್ಟ ರೋಹನ್ ಬೋಪಣ್ಣ

ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯನ್ ಓಪನ್​ನ ಪುರುಷರ ಡಬಲ್ಸ್​ನಲ್ಲಿ, ಭಾರತದ ರೋಹನ್ ಬೋಪಣ್ಣ ಹಾಗೂ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೋಡಿ ಸೆಮಿಫೈನಲ್​ಗೆ ಪ್ರವೇಶಿಸಿದ್ದಾರೆ. ಈ ಗೆಲುವಿನೊಂದಿಗೆ ATP ಡಬಲ್ಸ್​ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ ವಿಶ್ವದ ಅತ್ಯಂತ ಹಿರಿಯ ಆಟಗಾರ ಎಂಬ ದಾಖಲೆ ಬೋಪಣ್ಣ ಪಾಲಾಗಿದೆ.

ಮೂಲತಃ ಕೊಡಗಿನವರಾದ ರೋಹನ್ ಬೋಪಣ್ಣ ತಮ್ಮ 43ನೇ ವಯಸ್ಸಿನಲ್ಲಿ ಈ ಸಾಧನೆ ಮಾಡಿರುವುದು ವಿಶೇಷ.  ಮೂಲತಃ ಕೊಡಗಿನ ಮಾದಪುರ ಗ್ರಾಮದ ನಿವಾಸಿಯಾದ ಮಚ್ಚಂಡ ಭೂಪಣ್ಣ ಹಾಗೂ ಮಲ್ಲಿಕಾ ದಂಪತಿಯ ಪುತ್ರನಾಗಿದ್ದಾರೆ.

ಇದಕ್ಕೂ ಮುನ್ನ ಎಟಿಪಿ ಡಬಲ್ಸ್ ಶ್ರೇಯಾಂಕ ಪಟ್ಟಿಯಲ್ಲಿ ಯುಎಸ್​ಎ ಆಟಗಾರ ಆಸ್ಟಿನ್ ಕ್ರಾಜಿಸೆಕ್ ಅಗ್ರಸ್ಥಾನದಲ್ಲಿದ್ದರು. ಆದರೆ ಆಸ್ಟ್ರೇಲಿಯನ್ ಓಪನ್​ ಡಬಲ್ಸ್​ನಲ್ಲಿ ಕ್ರಾಜಿಸೆಕ್ ಮತ್ತು ಅವರ ಕ್ರೊಯೇಷಿಯಾದ ಜೊತೆಗಾರ ಇವಾನ್ ಡೋಡಿಗ್ ಎರಡನೇ ಸುತ್ತಿನಲ್ಲಿ ನಿರ್ಗಮಿಸಿದ್ದಾರೆ. ಇತ್ತ ಮ್ಯಾಥ್ಯೂ ಎಬ್ಡೆನ್ ಜೊತೆಗೂಡಿ ಸೆಮಿಫೈನಲ್​ಗೇರುವ ಮೂಲಕ ರೋಹನ್ ಬೋಪಣ್ಣ ಟೆನಿಸ್ (ಡಬಲ್ಸ್​) ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ವಿಶ್ವ ಟೆನಿಸ್ ಶ್ರೇಯಾಂಕದಲ್ಲಿ ಅಗ್ರಸ್ಥಾನ ಅಲಂಕರಿಸಿದ ಭಾರತದ ನಾಲ್ಕನೇ ಟೆನಿಸ್ ತಾರೆ ಎಂಬ ಹೆಗ್ಗಳಿಕೆಗೂ ರೋಹನ್ ಬೋಪಣ್ಣ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಮಹೇಶ್ ಭೂಪತಿ, ಲಿಯಾಂಡರ್ ಪೇಸ್ ಮತ್ತು ಸಾನಿಯಾ ಮಿರ್ಝಾ ಡಬಲ್ಸ್‌ನಲ್ಲಿ ನಂ.1 ಸ್ಥಾನ ಅಲಂಕರಿಸಿದ್ದರು.

ಇದೀಗ ತಮ್ಮ ಹಿರಿಯ ವಯಸ್ಸಿನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ರೋಹನ್ ಬೋಪಣ್ಣ ಡಬಲ್ಸ್​ ಶ್ರೇಯಾಂಕದಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಅತ್ಯಂತ ಹಿರಿಯ ಆಟಗಾರ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

Ramesh Babu

Journalist

Recent Posts

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

23 minutes ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

13 hours ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

23 hours ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

23 hours ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

1 day ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

1 day ago