Categories: ಟೆನಿಸ್

ಟೆನಿಸ್ ಅಂಗಳದಲ್ಲಿ ಹೊಸ ಇತಿಹಾಸ: ವಿಶ್ವದ ನಂ.1 ಸ್ಥಾನಕ್ಕೆ ಲಗ್ಗೆ ಇಟ್ಟ ರೋಹನ್ ಬೋಪಣ್ಣ

ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯನ್ ಓಪನ್​ನ ಪುರುಷರ ಡಬಲ್ಸ್​ನಲ್ಲಿ, ಭಾರತದ ರೋಹನ್ ಬೋಪಣ್ಣ ಹಾಗೂ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೋಡಿ ಸೆಮಿಫೈನಲ್​ಗೆ ಪ್ರವೇಶಿಸಿದ್ದಾರೆ. ಈ ಗೆಲುವಿನೊಂದಿಗೆ ATP ಡಬಲ್ಸ್​ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ ವಿಶ್ವದ ಅತ್ಯಂತ ಹಿರಿಯ ಆಟಗಾರ ಎಂಬ ದಾಖಲೆ ಬೋಪಣ್ಣ ಪಾಲಾಗಿದೆ.

ಮೂಲತಃ ಕೊಡಗಿನವರಾದ ರೋಹನ್ ಬೋಪಣ್ಣ ತಮ್ಮ 43ನೇ ವಯಸ್ಸಿನಲ್ಲಿ ಈ ಸಾಧನೆ ಮಾಡಿರುವುದು ವಿಶೇಷ.  ಮೂಲತಃ ಕೊಡಗಿನ ಮಾದಪುರ ಗ್ರಾಮದ ನಿವಾಸಿಯಾದ ಮಚ್ಚಂಡ ಭೂಪಣ್ಣ ಹಾಗೂ ಮಲ್ಲಿಕಾ ದಂಪತಿಯ ಪುತ್ರನಾಗಿದ್ದಾರೆ.

ಇದಕ್ಕೂ ಮುನ್ನ ಎಟಿಪಿ ಡಬಲ್ಸ್ ಶ್ರೇಯಾಂಕ ಪಟ್ಟಿಯಲ್ಲಿ ಯುಎಸ್​ಎ ಆಟಗಾರ ಆಸ್ಟಿನ್ ಕ್ರಾಜಿಸೆಕ್ ಅಗ್ರಸ್ಥಾನದಲ್ಲಿದ್ದರು. ಆದರೆ ಆಸ್ಟ್ರೇಲಿಯನ್ ಓಪನ್​ ಡಬಲ್ಸ್​ನಲ್ಲಿ ಕ್ರಾಜಿಸೆಕ್ ಮತ್ತು ಅವರ ಕ್ರೊಯೇಷಿಯಾದ ಜೊತೆಗಾರ ಇವಾನ್ ಡೋಡಿಗ್ ಎರಡನೇ ಸುತ್ತಿನಲ್ಲಿ ನಿರ್ಗಮಿಸಿದ್ದಾರೆ. ಇತ್ತ ಮ್ಯಾಥ್ಯೂ ಎಬ್ಡೆನ್ ಜೊತೆಗೂಡಿ ಸೆಮಿಫೈನಲ್​ಗೇರುವ ಮೂಲಕ ರೋಹನ್ ಬೋಪಣ್ಣ ಟೆನಿಸ್ (ಡಬಲ್ಸ್​) ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ವಿಶ್ವ ಟೆನಿಸ್ ಶ್ರೇಯಾಂಕದಲ್ಲಿ ಅಗ್ರಸ್ಥಾನ ಅಲಂಕರಿಸಿದ ಭಾರತದ ನಾಲ್ಕನೇ ಟೆನಿಸ್ ತಾರೆ ಎಂಬ ಹೆಗ್ಗಳಿಕೆಗೂ ರೋಹನ್ ಬೋಪಣ್ಣ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಮಹೇಶ್ ಭೂಪತಿ, ಲಿಯಾಂಡರ್ ಪೇಸ್ ಮತ್ತು ಸಾನಿಯಾ ಮಿರ್ಝಾ ಡಬಲ್ಸ್‌ನಲ್ಲಿ ನಂ.1 ಸ್ಥಾನ ಅಲಂಕರಿಸಿದ್ದರು.

ಇದೀಗ ತಮ್ಮ ಹಿರಿಯ ವಯಸ್ಸಿನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ರೋಹನ್ ಬೋಪಣ್ಣ ಡಬಲ್ಸ್​ ಶ್ರೇಯಾಂಕದಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಅತ್ಯಂತ ಹಿರಿಯ ಆಟಗಾರ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

Ramesh Babu

Journalist

Recent Posts

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

9 hours ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

9 hours ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

14 hours ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

3 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

3 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago