ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್: ಟ್ರೋಫಿಗೆ ಮುತ್ತಿಟ್ಟ ಸಾದಲಿ ತಂಡ

ಶಿಡ್ಲಘಟ್ಟ ತಾಲ್ಲೂಕಿನ ಬಾಶೆಟ್ಟಹಳ್ಳಿ ಹೋಬಳಿಯ ಚಿಕ್ಕತೇಕಹಳ್ಳಿ ಗ್ರಾಮದಲ್ಲಿ ಪ್ರೆಂಡ್ಸ್ ಕ್ರಿಕೆಟ್ ತಂಡದ ವತಿಯಿಂದ ಮೂರು ದಿನಗಳ ಕಾಲ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿತ್ತು.

ಸೋಮವಾರ ನಡೆದ ಪೈನಲ್ ನಲ್ಲಿ ಸಾದಲಿ ಮತ್ತು ಚಿಕ್ಕತೇಕಹಳ್ಳಿ ಫ್ರೆಂಡ್ಸ್ ಕ್ರಿಕೆಟ್ ತಂಡಗಳ ನಡುವೆ ನಡೆಯಿತು.

ಚಿಕ್ಕತೇಕಹಳ್ಳಿ ಫ್ರೆಂಡ್ಸ್ ಕ್ರಿಕೆಟ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ತಂಡ 17 ರನ್ ಗಳಿಸಿ ಸ್ಪರ್ಧಾತ್ಮಕ ಗುರಿ ನೀಡಿತು.

ಸಾದಲಿ ತಂಡ ಬ್ಯಾಟಿಂಗ್ ಆರಂಭಿಸುವ ಮುನ್ನ ತುಂತುರು ಮಳೆಯಿಂದ ಸಾದಲಿ ತಂಡಕ್ಕೆ ಸ್ಪಲ್ಪ ಅಡಚಣೆ ಯಾದರೂ ಅಂತಿಮವಾಗಿ ಜಯಭೇರಿ ಗಳಿಸಿ ಆಕರ್ಷಕ ಟ್ರೋಫಿಯೊಂದಿಗೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

ಚಿಕ್ಕತೇಕಹಳ್ಳಿ ಫ್ರೆಂಡ್ಸ್ ಕ್ರಿಕೆಟ್ ತಂಡ ಅಂತಿಮ ಹಣಾ ಹಣೆಯಲ್ಲಿ ಸಾದಲಿ ತಂಡದ ವಿರುದ್ಧ ಸೋಲೊಪ್ಪಿಕೊಂಡು ದ್ವಿತೀಯ ಸ್ಥಾನಗಳಿಸಿ ಸಂಭ್ರಮಿಸಿತು.

ಇನ್ನು ಇದಕ್ಕೂ ಮೊದಲು ಸೆಮಿಫೈನಲ್ ನಲ್ಲಿ ಮೈಲಪ್ಪನಹಳ್ಳಿ ಹಾಗೂ ಸಾದಲಿ ತಂಡಗಳ ನಡುವೆ ಪಂದ್ಯ ನಡೆದು ಸಾದಲಿ ಫೈನಲ್ ಸ್ಥಾನಕ್ಕೇರಿದರೆ ಮೈಲಪ್ಪನಹಳ್ಳಿ ತಂಡದವರು ತೃತೀಯ ಸ್ಥಾನ ಗಳಿಸಿ ಟ್ರೋಫಿ ಮತ್ತು ಸಮಾಧಾನಕರ ಬಹುಮಾನ ಗಳಿಸಿ ತೃಪ್ತಿ ಪಡೆದುಕೊಂಡಿತು.

ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾದ ಟೂರ್ನಮೆಂಟ್ ಗೆ ಸುಮಾರು 40ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು.

ಒಟ್ಟಾರೆ, ಮೂರು ದಿನಗಳ ಕಾಲ ನಡೆದ ಟೂರ್ನಿಯಲ್ಲಿ ಇದೊಂದು ರೋಚಕ ಮತ್ತು ಮನರಂಜನೆಯ ಪಂದ್ಯವಾಗಿತ್ತು. ಕ್ರಿಕೆಟ್‌ನ ನಿಜವಾದ ಸ್ಪೂರ್ತಿಯನ್ನು ಪ್ರದರ್ಶಿಸಿತು.

ಉಭಯ ತಂಡಗಳ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿ ಪ್ರೇಕ್ಷಕರಿಗೆ ಉತ್ತಮ ಪ್ರದರ್ಶನ ನೀಡಿದರು. ಅಂತಿಮವಾಗಿ ಸಾದಲಿ ತಂಡ ಪ್ರಶಸ್ತಿ ಪಡೆದುಕೊಂಡರು.

ಸಾದಲಿ ತಂಡದ ನಾಯಕ ನವೀನ್ ಕುಮಾರ್ ಮಾತನಾಡಿ, ಗ್ರಾಮಾಂತರ ಹಾಗೂ ನಗರ ತಂಡಗಳ ನಡುವೆ ನಡೆದ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಅದ್ಭುತವಾಗಿ ನೆರವೇರಿತು. ನಮ್ಮ ಯಶಸ್ಸಿಗೆ ನಮ್ಮ ಶಿಸ್ತು ಮತ್ತು ನಮ್ಮ ಒಗ್ಗಟ್ಟು ಹಾಗೂ ನಾಯಕನ ನಿರ್ಣಯ ನಮ್ಮ ಗೆಲುವಿಗೆ ಕಾರಣ ಎಂದರು.

ಫ್ರೆಂಡ್ಸ್ ಕ್ರಿಕೆಟ್ ತಂಡದ ನಾಯಕ ವೆಂಕಟರೆಡ್ಡಿ ಮಾತನಾಡಿ, ಮೂರು ದಿನಗಳ ಕಾಲ ನಡೆದ ಟೂರ್ನಿಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳು. ಪಂದ್ಯಗಳಲ್ಲಿ ಯಾವುದೇ ರೀತಿ ಗೊಂದಲಗಳಿಗೆ ಅವಕಾಶ ಮಾಡಿಕೊಡದೆ ಅತ್ಯುತ್ತಮವಾಗಿ ನೆರವೇರಿಸಿಕೊಂಡು ಬಂದು ಅಂತಿಮ ಪಂದ್ಯದಲ್ಲಿ ಸಾದಲಿ ತಂಡ ಜಯಭೇರಿಗಳಿಸಿದ್ದು, ನಾವು ದ್ವಿತೀಯ ಸ್ಥಾನಗಳಿಸಿದ್ದೇವೆ. ಕ್ರೀಡೆ ಎಂದರೆ ಸೋಲು ಗೆಲುವು ಸಹಜ. ನಾವು ಸೋತಿರುವುದಕ್ಕಿಂತ ಸಾದಲಿ ತಂಡದ ಆಟಗಾರರು ಅದ್ಭುತ ಆಟ ಪ್ರದರ್ಶನ ಮಾಡಿದರು.

ಟೂರ್ನಿಯಲ್ಲಿ ವಿಜೇತರಾದ ತಂಡಗಳಿಗೆ ಕೃಷ್ಣಪ್ಪ, ಮಂಜುನಾಥ್, ಟಿ.ಎಸ್ ಪ್ರದೀಪ್ ಕುಮಾರ್, ಆಂಜಿನಪ್ಪ ಪ್ರಶಸ್ತಿ ಹಾಗೂ ಬಹುಮಾನವನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಪ್ರೇಕ್ಷಕರು ಹಾಜರಿದ್ದು ಮನಮೋಹಕ ಆಟವನ್ನು ನೋಡಿ ತೃಪ್ತಿ ಪಡೆದುಕೊಂಡರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

14 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

14 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

21 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

21 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

1 day ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

2 days ago