ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್: ಟ್ರೋಫಿಗೆ ಮುತ್ತಿಟ್ಟ ಸಾದಲಿ ತಂಡ

ಶಿಡ್ಲಘಟ್ಟ ತಾಲ್ಲೂಕಿನ ಬಾಶೆಟ್ಟಹಳ್ಳಿ ಹೋಬಳಿಯ ಚಿಕ್ಕತೇಕಹಳ್ಳಿ ಗ್ರಾಮದಲ್ಲಿ ಪ್ರೆಂಡ್ಸ್ ಕ್ರಿಕೆಟ್ ತಂಡದ ವತಿಯಿಂದ ಮೂರು ದಿನಗಳ ಕಾಲ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿತ್ತು.

ಸೋಮವಾರ ನಡೆದ ಪೈನಲ್ ನಲ್ಲಿ ಸಾದಲಿ ಮತ್ತು ಚಿಕ್ಕತೇಕಹಳ್ಳಿ ಫ್ರೆಂಡ್ಸ್ ಕ್ರಿಕೆಟ್ ತಂಡಗಳ ನಡುವೆ ನಡೆಯಿತು.

ಚಿಕ್ಕತೇಕಹಳ್ಳಿ ಫ್ರೆಂಡ್ಸ್ ಕ್ರಿಕೆಟ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ತಂಡ 17 ರನ್ ಗಳಿಸಿ ಸ್ಪರ್ಧಾತ್ಮಕ ಗುರಿ ನೀಡಿತು.

ಸಾದಲಿ ತಂಡ ಬ್ಯಾಟಿಂಗ್ ಆರಂಭಿಸುವ ಮುನ್ನ ತುಂತುರು ಮಳೆಯಿಂದ ಸಾದಲಿ ತಂಡಕ್ಕೆ ಸ್ಪಲ್ಪ ಅಡಚಣೆ ಯಾದರೂ ಅಂತಿಮವಾಗಿ ಜಯಭೇರಿ ಗಳಿಸಿ ಆಕರ್ಷಕ ಟ್ರೋಫಿಯೊಂದಿಗೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

ಚಿಕ್ಕತೇಕಹಳ್ಳಿ ಫ್ರೆಂಡ್ಸ್ ಕ್ರಿಕೆಟ್ ತಂಡ ಅಂತಿಮ ಹಣಾ ಹಣೆಯಲ್ಲಿ ಸಾದಲಿ ತಂಡದ ವಿರುದ್ಧ ಸೋಲೊಪ್ಪಿಕೊಂಡು ದ್ವಿತೀಯ ಸ್ಥಾನಗಳಿಸಿ ಸಂಭ್ರಮಿಸಿತು.

ಇನ್ನು ಇದಕ್ಕೂ ಮೊದಲು ಸೆಮಿಫೈನಲ್ ನಲ್ಲಿ ಮೈಲಪ್ಪನಹಳ್ಳಿ ಹಾಗೂ ಸಾದಲಿ ತಂಡಗಳ ನಡುವೆ ಪಂದ್ಯ ನಡೆದು ಸಾದಲಿ ಫೈನಲ್ ಸ್ಥಾನಕ್ಕೇರಿದರೆ ಮೈಲಪ್ಪನಹಳ್ಳಿ ತಂಡದವರು ತೃತೀಯ ಸ್ಥಾನ ಗಳಿಸಿ ಟ್ರೋಫಿ ಮತ್ತು ಸಮಾಧಾನಕರ ಬಹುಮಾನ ಗಳಿಸಿ ತೃಪ್ತಿ ಪಡೆದುಕೊಂಡಿತು.

ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾದ ಟೂರ್ನಮೆಂಟ್ ಗೆ ಸುಮಾರು 40ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು.

ಒಟ್ಟಾರೆ, ಮೂರು ದಿನಗಳ ಕಾಲ ನಡೆದ ಟೂರ್ನಿಯಲ್ಲಿ ಇದೊಂದು ರೋಚಕ ಮತ್ತು ಮನರಂಜನೆಯ ಪಂದ್ಯವಾಗಿತ್ತು. ಕ್ರಿಕೆಟ್‌ನ ನಿಜವಾದ ಸ್ಪೂರ್ತಿಯನ್ನು ಪ್ರದರ್ಶಿಸಿತು.

ಉಭಯ ತಂಡಗಳ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿ ಪ್ರೇಕ್ಷಕರಿಗೆ ಉತ್ತಮ ಪ್ರದರ್ಶನ ನೀಡಿದರು. ಅಂತಿಮವಾಗಿ ಸಾದಲಿ ತಂಡ ಪ್ರಶಸ್ತಿ ಪಡೆದುಕೊಂಡರು.

ಸಾದಲಿ ತಂಡದ ನಾಯಕ ನವೀನ್ ಕುಮಾರ್ ಮಾತನಾಡಿ, ಗ್ರಾಮಾಂತರ ಹಾಗೂ ನಗರ ತಂಡಗಳ ನಡುವೆ ನಡೆದ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಅದ್ಭುತವಾಗಿ ನೆರವೇರಿತು. ನಮ್ಮ ಯಶಸ್ಸಿಗೆ ನಮ್ಮ ಶಿಸ್ತು ಮತ್ತು ನಮ್ಮ ಒಗ್ಗಟ್ಟು ಹಾಗೂ ನಾಯಕನ ನಿರ್ಣಯ ನಮ್ಮ ಗೆಲುವಿಗೆ ಕಾರಣ ಎಂದರು.

ಫ್ರೆಂಡ್ಸ್ ಕ್ರಿಕೆಟ್ ತಂಡದ ನಾಯಕ ವೆಂಕಟರೆಡ್ಡಿ ಮಾತನಾಡಿ, ಮೂರು ದಿನಗಳ ಕಾಲ ನಡೆದ ಟೂರ್ನಿಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳು. ಪಂದ್ಯಗಳಲ್ಲಿ ಯಾವುದೇ ರೀತಿ ಗೊಂದಲಗಳಿಗೆ ಅವಕಾಶ ಮಾಡಿಕೊಡದೆ ಅತ್ಯುತ್ತಮವಾಗಿ ನೆರವೇರಿಸಿಕೊಂಡು ಬಂದು ಅಂತಿಮ ಪಂದ್ಯದಲ್ಲಿ ಸಾದಲಿ ತಂಡ ಜಯಭೇರಿಗಳಿಸಿದ್ದು, ನಾವು ದ್ವಿತೀಯ ಸ್ಥಾನಗಳಿಸಿದ್ದೇವೆ. ಕ್ರೀಡೆ ಎಂದರೆ ಸೋಲು ಗೆಲುವು ಸಹಜ. ನಾವು ಸೋತಿರುವುದಕ್ಕಿಂತ ಸಾದಲಿ ತಂಡದ ಆಟಗಾರರು ಅದ್ಭುತ ಆಟ ಪ್ರದರ್ಶನ ಮಾಡಿದರು.

ಟೂರ್ನಿಯಲ್ಲಿ ವಿಜೇತರಾದ ತಂಡಗಳಿಗೆ ಕೃಷ್ಣಪ್ಪ, ಮಂಜುನಾಥ್, ಟಿ.ಎಸ್ ಪ್ರದೀಪ್ ಕುಮಾರ್, ಆಂಜಿನಪ್ಪ ಪ್ರಶಸ್ತಿ ಹಾಗೂ ಬಹುಮಾನವನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಪ್ರೇಕ್ಷಕರು ಹಾಜರಿದ್ದು ಮನಮೋಹಕ ಆಟವನ್ನು ನೋಡಿ ತೃಪ್ತಿ ಪಡೆದುಕೊಂಡರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

6 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

9 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

17 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

22 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

1 day ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

1 day ago