ಶಿಡ್ಲಘಟ್ಟ ತಾಲ್ಲೂಕಿನ ಬಾಶೆಟ್ಟಹಳ್ಳಿ ಹೋಬಳಿಯ ಚಿಕ್ಕತೇಕಹಳ್ಳಿ ಗ್ರಾಮದಲ್ಲಿ ಪ್ರೆಂಡ್ಸ್ ಕ್ರಿಕೆಟ್ ತಂಡದ ವತಿಯಿಂದ ಮೂರು ದಿನಗಳ ಕಾಲ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿತ್ತು.
ಸೋಮವಾರ ನಡೆದ ಪೈನಲ್ ನಲ್ಲಿ ಸಾದಲಿ ಮತ್ತು ಚಿಕ್ಕತೇಕಹಳ್ಳಿ ಫ್ರೆಂಡ್ಸ್ ಕ್ರಿಕೆಟ್ ತಂಡಗಳ ನಡುವೆ ನಡೆಯಿತು.
ಚಿಕ್ಕತೇಕಹಳ್ಳಿ ಫ್ರೆಂಡ್ಸ್ ಕ್ರಿಕೆಟ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ತಂಡ 17 ರನ್ ಗಳಿಸಿ ಸ್ಪರ್ಧಾತ್ಮಕ ಗುರಿ ನೀಡಿತು.
ಸಾದಲಿ ತಂಡ ಬ್ಯಾಟಿಂಗ್ ಆರಂಭಿಸುವ ಮುನ್ನ ತುಂತುರು ಮಳೆಯಿಂದ ಸಾದಲಿ ತಂಡಕ್ಕೆ ಸ್ಪಲ್ಪ ಅಡಚಣೆ ಯಾದರೂ ಅಂತಿಮವಾಗಿ ಜಯಭೇರಿ ಗಳಿಸಿ ಆಕರ್ಷಕ ಟ್ರೋಫಿಯೊಂದಿಗೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.
ಚಿಕ್ಕತೇಕಹಳ್ಳಿ ಫ್ರೆಂಡ್ಸ್ ಕ್ರಿಕೆಟ್ ತಂಡ ಅಂತಿಮ ಹಣಾ ಹಣೆಯಲ್ಲಿ ಸಾದಲಿ ತಂಡದ ವಿರುದ್ಧ ಸೋಲೊಪ್ಪಿಕೊಂಡು ದ್ವಿತೀಯ ಸ್ಥಾನಗಳಿಸಿ ಸಂಭ್ರಮಿಸಿತು.
ಇನ್ನು ಇದಕ್ಕೂ ಮೊದಲು ಸೆಮಿಫೈನಲ್ ನಲ್ಲಿ ಮೈಲಪ್ಪನಹಳ್ಳಿ ಹಾಗೂ ಸಾದಲಿ ತಂಡಗಳ ನಡುವೆ ಪಂದ್ಯ ನಡೆದು ಸಾದಲಿ ಫೈನಲ್ ಸ್ಥಾನಕ್ಕೇರಿದರೆ ಮೈಲಪ್ಪನಹಳ್ಳಿ ತಂಡದವರು ತೃತೀಯ ಸ್ಥಾನ ಗಳಿಸಿ ಟ್ರೋಫಿ ಮತ್ತು ಸಮಾಧಾನಕರ ಬಹುಮಾನ ಗಳಿಸಿ ತೃಪ್ತಿ ಪಡೆದುಕೊಂಡಿತು.
ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾದ ಟೂರ್ನಮೆಂಟ್ ಗೆ ಸುಮಾರು 40ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು.
ಒಟ್ಟಾರೆ, ಮೂರು ದಿನಗಳ ಕಾಲ ನಡೆದ ಟೂರ್ನಿಯಲ್ಲಿ ಇದೊಂದು ರೋಚಕ ಮತ್ತು ಮನರಂಜನೆಯ ಪಂದ್ಯವಾಗಿತ್ತು. ಕ್ರಿಕೆಟ್ನ ನಿಜವಾದ ಸ್ಪೂರ್ತಿಯನ್ನು ಪ್ರದರ್ಶಿಸಿತು.
ಉಭಯ ತಂಡಗಳ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿ ಪ್ರೇಕ್ಷಕರಿಗೆ ಉತ್ತಮ ಪ್ರದರ್ಶನ ನೀಡಿದರು. ಅಂತಿಮವಾಗಿ ಸಾದಲಿ ತಂಡ ಪ್ರಶಸ್ತಿ ಪಡೆದುಕೊಂಡರು.
ಸಾದಲಿ ತಂಡದ ನಾಯಕ ನವೀನ್ ಕುಮಾರ್ ಮಾತನಾಡಿ, ಗ್ರಾಮಾಂತರ ಹಾಗೂ ನಗರ ತಂಡಗಳ ನಡುವೆ ನಡೆದ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಅದ್ಭುತವಾಗಿ ನೆರವೇರಿತು. ನಮ್ಮ ಯಶಸ್ಸಿಗೆ ನಮ್ಮ ಶಿಸ್ತು ಮತ್ತು ನಮ್ಮ ಒಗ್ಗಟ್ಟು ಹಾಗೂ ನಾಯಕನ ನಿರ್ಣಯ ನಮ್ಮ ಗೆಲುವಿಗೆ ಕಾರಣ ಎಂದರು.
ಫ್ರೆಂಡ್ಸ್ ಕ್ರಿಕೆಟ್ ತಂಡದ ನಾಯಕ ವೆಂಕಟರೆಡ್ಡಿ ಮಾತನಾಡಿ, ಮೂರು ದಿನಗಳ ಕಾಲ ನಡೆದ ಟೂರ್ನಿಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳು. ಪಂದ್ಯಗಳಲ್ಲಿ ಯಾವುದೇ ರೀತಿ ಗೊಂದಲಗಳಿಗೆ ಅವಕಾಶ ಮಾಡಿಕೊಡದೆ ಅತ್ಯುತ್ತಮವಾಗಿ ನೆರವೇರಿಸಿಕೊಂಡು ಬಂದು ಅಂತಿಮ ಪಂದ್ಯದಲ್ಲಿ ಸಾದಲಿ ತಂಡ ಜಯಭೇರಿಗಳಿಸಿದ್ದು, ನಾವು ದ್ವಿತೀಯ ಸ್ಥಾನಗಳಿಸಿದ್ದೇವೆ. ಕ್ರೀಡೆ ಎಂದರೆ ಸೋಲು ಗೆಲುವು ಸಹಜ. ನಾವು ಸೋತಿರುವುದಕ್ಕಿಂತ ಸಾದಲಿ ತಂಡದ ಆಟಗಾರರು ಅದ್ಭುತ ಆಟ ಪ್ರದರ್ಶನ ಮಾಡಿದರು.
ಟೂರ್ನಿಯಲ್ಲಿ ವಿಜೇತರಾದ ತಂಡಗಳಿಗೆ ಕೃಷ್ಣಪ್ಪ, ಮಂಜುನಾಥ್, ಟಿ.ಎಸ್ ಪ್ರದೀಪ್ ಕುಮಾರ್, ಆಂಜಿನಪ್ಪ ಪ್ರಶಸ್ತಿ ಹಾಗೂ ಬಹುಮಾನವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಪ್ರೇಕ್ಷಕರು ಹಾಜರಿದ್ದು ಮನಮೋಹಕ ಆಟವನ್ನು ನೋಡಿ ತೃಪ್ತಿ ಪಡೆದುಕೊಂಡರು.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…