ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್: ಟ್ರೋಫಿಗೆ ಮುತ್ತಿಟ್ಟ ಸಾದಲಿ ತಂಡ

ಶಿಡ್ಲಘಟ್ಟ ತಾಲ್ಲೂಕಿನ ಬಾಶೆಟ್ಟಹಳ್ಳಿ ಹೋಬಳಿಯ ಚಿಕ್ಕತೇಕಹಳ್ಳಿ ಗ್ರಾಮದಲ್ಲಿ ಪ್ರೆಂಡ್ಸ್ ಕ್ರಿಕೆಟ್ ತಂಡದ ವತಿಯಿಂದ ಮೂರು ದಿನಗಳ ಕಾಲ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿತ್ತು.

ಸೋಮವಾರ ನಡೆದ ಪೈನಲ್ ನಲ್ಲಿ ಸಾದಲಿ ಮತ್ತು ಚಿಕ್ಕತೇಕಹಳ್ಳಿ ಫ್ರೆಂಡ್ಸ್ ಕ್ರಿಕೆಟ್ ತಂಡಗಳ ನಡುವೆ ನಡೆಯಿತು.

ಚಿಕ್ಕತೇಕಹಳ್ಳಿ ಫ್ರೆಂಡ್ಸ್ ಕ್ರಿಕೆಟ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ತಂಡ 17 ರನ್ ಗಳಿಸಿ ಸ್ಪರ್ಧಾತ್ಮಕ ಗುರಿ ನೀಡಿತು.

ಸಾದಲಿ ತಂಡ ಬ್ಯಾಟಿಂಗ್ ಆರಂಭಿಸುವ ಮುನ್ನ ತುಂತುರು ಮಳೆಯಿಂದ ಸಾದಲಿ ತಂಡಕ್ಕೆ ಸ್ಪಲ್ಪ ಅಡಚಣೆ ಯಾದರೂ ಅಂತಿಮವಾಗಿ ಜಯಭೇರಿ ಗಳಿಸಿ ಆಕರ್ಷಕ ಟ್ರೋಫಿಯೊಂದಿಗೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

ಚಿಕ್ಕತೇಕಹಳ್ಳಿ ಫ್ರೆಂಡ್ಸ್ ಕ್ರಿಕೆಟ್ ತಂಡ ಅಂತಿಮ ಹಣಾ ಹಣೆಯಲ್ಲಿ ಸಾದಲಿ ತಂಡದ ವಿರುದ್ಧ ಸೋಲೊಪ್ಪಿಕೊಂಡು ದ್ವಿತೀಯ ಸ್ಥಾನಗಳಿಸಿ ಸಂಭ್ರಮಿಸಿತು.

ಇನ್ನು ಇದಕ್ಕೂ ಮೊದಲು ಸೆಮಿಫೈನಲ್ ನಲ್ಲಿ ಮೈಲಪ್ಪನಹಳ್ಳಿ ಹಾಗೂ ಸಾದಲಿ ತಂಡಗಳ ನಡುವೆ ಪಂದ್ಯ ನಡೆದು ಸಾದಲಿ ಫೈನಲ್ ಸ್ಥಾನಕ್ಕೇರಿದರೆ ಮೈಲಪ್ಪನಹಳ್ಳಿ ತಂಡದವರು ತೃತೀಯ ಸ್ಥಾನ ಗಳಿಸಿ ಟ್ರೋಫಿ ಮತ್ತು ಸಮಾಧಾನಕರ ಬಹುಮಾನ ಗಳಿಸಿ ತೃಪ್ತಿ ಪಡೆದುಕೊಂಡಿತು.

ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾದ ಟೂರ್ನಮೆಂಟ್ ಗೆ ಸುಮಾರು 40ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು.

ಒಟ್ಟಾರೆ, ಮೂರು ದಿನಗಳ ಕಾಲ ನಡೆದ ಟೂರ್ನಿಯಲ್ಲಿ ಇದೊಂದು ರೋಚಕ ಮತ್ತು ಮನರಂಜನೆಯ ಪಂದ್ಯವಾಗಿತ್ತು. ಕ್ರಿಕೆಟ್‌ನ ನಿಜವಾದ ಸ್ಪೂರ್ತಿಯನ್ನು ಪ್ರದರ್ಶಿಸಿತು.

ಉಭಯ ತಂಡಗಳ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿ ಪ್ರೇಕ್ಷಕರಿಗೆ ಉತ್ತಮ ಪ್ರದರ್ಶನ ನೀಡಿದರು. ಅಂತಿಮವಾಗಿ ಸಾದಲಿ ತಂಡ ಪ್ರಶಸ್ತಿ ಪಡೆದುಕೊಂಡರು.

ಸಾದಲಿ ತಂಡದ ನಾಯಕ ನವೀನ್ ಕುಮಾರ್ ಮಾತನಾಡಿ, ಗ್ರಾಮಾಂತರ ಹಾಗೂ ನಗರ ತಂಡಗಳ ನಡುವೆ ನಡೆದ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಅದ್ಭುತವಾಗಿ ನೆರವೇರಿತು. ನಮ್ಮ ಯಶಸ್ಸಿಗೆ ನಮ್ಮ ಶಿಸ್ತು ಮತ್ತು ನಮ್ಮ ಒಗ್ಗಟ್ಟು ಹಾಗೂ ನಾಯಕನ ನಿರ್ಣಯ ನಮ್ಮ ಗೆಲುವಿಗೆ ಕಾರಣ ಎಂದರು.

ಫ್ರೆಂಡ್ಸ್ ಕ್ರಿಕೆಟ್ ತಂಡದ ನಾಯಕ ವೆಂಕಟರೆಡ್ಡಿ ಮಾತನಾಡಿ, ಮೂರು ದಿನಗಳ ಕಾಲ ನಡೆದ ಟೂರ್ನಿಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳು. ಪಂದ್ಯಗಳಲ್ಲಿ ಯಾವುದೇ ರೀತಿ ಗೊಂದಲಗಳಿಗೆ ಅವಕಾಶ ಮಾಡಿಕೊಡದೆ ಅತ್ಯುತ್ತಮವಾಗಿ ನೆರವೇರಿಸಿಕೊಂಡು ಬಂದು ಅಂತಿಮ ಪಂದ್ಯದಲ್ಲಿ ಸಾದಲಿ ತಂಡ ಜಯಭೇರಿಗಳಿಸಿದ್ದು, ನಾವು ದ್ವಿತೀಯ ಸ್ಥಾನಗಳಿಸಿದ್ದೇವೆ. ಕ್ರೀಡೆ ಎಂದರೆ ಸೋಲು ಗೆಲುವು ಸಹಜ. ನಾವು ಸೋತಿರುವುದಕ್ಕಿಂತ ಸಾದಲಿ ತಂಡದ ಆಟಗಾರರು ಅದ್ಭುತ ಆಟ ಪ್ರದರ್ಶನ ಮಾಡಿದರು.

ಟೂರ್ನಿಯಲ್ಲಿ ವಿಜೇತರಾದ ತಂಡಗಳಿಗೆ ಕೃಷ್ಣಪ್ಪ, ಮಂಜುನಾಥ್, ಟಿ.ಎಸ್ ಪ್ರದೀಪ್ ಕುಮಾರ್, ಆಂಜಿನಪ್ಪ ಪ್ರಶಸ್ತಿ ಹಾಗೂ ಬಹುಮಾನವನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಪ್ರೇಕ್ಷಕರು ಹಾಜರಿದ್ದು ಮನಮೋಹಕ ಆಟವನ್ನು ನೋಡಿ ತೃಪ್ತಿ ಪಡೆದುಕೊಂಡರು.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

5 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

5 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

9 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

11 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

14 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

18 hours ago